AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ, ಮನೆಗಳಿಗೆ ನೀರು ನುಗ್ಗಿ ರಾತ್ರಿಯಿಡೀ ಪರದಾಡಿದ ನಿವಾಸಿಗಳು

ಮಹಾನಗರದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಮಳೆಯಾಗುತ್ತಿದ್ದು, ಸಾವು ಕೂಡ ಸಂಭವಿಸಿದೆ. ಇದೀಗ ನಗರದ ದೇವರ ಚಿಕ್ಕನಹಳ್ಳಿ, ಅನುಗ್ರಹ ಬಡಾವಣೆಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ, ರಾತ್ರಿಯಿಡಿ ನಿದ್ದೆಯಿಲ್ಲದೆ ಅಲ್ಲಿನ ನಿವಾಸಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

Bengaluru Rains: ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ, ಮನೆಗಳಿಗೆ ನೀರು ನುಗ್ಗಿ ರಾತ್ರಿಯಿಡೀ ಪರದಾಡಿದ ನಿವಾಸಿಗಳು
ಬೆಂಗಳೂರು ಮಳೆ ಅವಾಂತರ
ಕಿರಣ್ ಹನುಮಂತ್​ ಮಾದಾರ್
|

Updated on: May 24, 2023 | 7:01 AM

Share

ಬೆಂಗಳೂರು: ಮಹಾನಗರದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಮಳೆಯಾಗುತ್ತಿದ್ದು, ಸಾವು ಕೂಡ ಸಂಭವಿಸಿದೆ. ಇದೀಗ ನಗರದ ದೇವರ ಚಿಕ್ಕನಹಳ್ಳಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ, ರಾತ್ರಿಯಿಡಿ ನಿದ್ದೆಯಿಲ್ಲದೆ ಅಲ್ಲಿನ ನಿವಾಸಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ ಬಿಬಿಎಂಪಿ(BBMP) ಅಧಿಕಾರಿಗಳ ವಿರುದ್ಧ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು. ‘ದೇವರ ಚಿಕ್ಕನಹಳ್ಳಿಯಲ್ಲಿ ಚರಂಡಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಚರಂಡಿಯಲ್ಲಿ ಹರಿದು ಹೋಗುತ್ತಿದ್ದ ನೀರು ಮನೆಗೆ ಬಂದಿದೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳೆಲ್ಲವೂ ಮುಳುಗಿ ಹೋಗಿದೆ. ಸಮಸ್ಯೆಯಾದರೂ ಬಿಬಿಎಂಪಿ ಅಧಿಕಾರಿಗಳು ಬಂದಿಲ್ಲವೆಂದು ಆಕ್ರೋಶ ಹೊರ ಹಾಕಿದರು.

ಅರ್ಧ ಗಂಟೆ ಮಳೆ ಬಂದಿದ್ದಕ್ಕೆ ಇಷ್ಟೆಲ್ಲ ಅವಾಂತರ ಆಗಿದೆ. ಮೋರಿ ರಿಪೇರಿ ನಡೀತಾ ಇತ್ತು, ಗೋಡೆ ಒಡೆದು ಹಾಕಿದ್ರಿಂದ ಈ‌‌ ರೀತಿಯಾಗಿದೆ. ಮನೆಯಲ್ಲಿ ಹೆಜ್ಜೆ ಮುಳುಗುಷ್ಟು, ಒಂದೆರಡು ಅಡಿ ನೀರು ಬಂದಿದೆ. ವಾಹನಗಳೆಲ್ಲ ಮುಳುಗಿ ಹೋಗಿದೆ. ಇದೆಲ್ಲ ಸರಿ ಆಗಬೇಕೆಂದರೆ ಎರಡ್ಮೂರು ದಿನ ಬೇಕು. ಯಾವ ಅಧಿಕಾರಿಗಳು ಕೂಡ ಇಲ್ಲಿಗೆ ಬಂದಿಲ್ಲ. ಚರಂಡಿ ಗೋಡೆ ಇದ್ದಿದ್ದರೆ ಇಲ್ಲಿಗೆ ನೀರು ಬರ್ತಿರ್ಲಿಲ್ಲ ಎಂದು ಬಿಬಿಎಂಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ರಾಜಕಾರಣಿಗಳು ಅನ್ನ ತಿನ್ನೋರಾದರೆ ಸರಿ ಮಾಡ್ತಾರೆ

ರಾಜಕಾರಣಿಗಳು ಮತ ಕೇಳಲು ಮನೆ ಮನೆಗೆ ಬರ್ತಾರೆ, ಚುನಾವಣೆಗೆ ಮುಂಚಿತವಾಗಿ ಸಾಕಷ್ಟು ಜನ ಬಂದು ಮೋರಿ ಕೆಲಸ ಮಾಡ್ತಿದ್ರು, ಚುನಾವಣೆ ಬಳಿಕ ಎರಡ್ಮೂರು ಜನ‌ ಅಷ್ಟೇ ಬರ್ತಿದ್ದಾರೆ. ನಾವು ಎಲ್ಲಿ ಹೋಗಿ ಮಲಗಿಕೊಳ್ಳೋದು. ಅವರ ಮನೆ ಇವರ ಮನೆಗೆ ಇಬ್ಬಿಬ್ಬರು ಹೋಗಿ ಮಲಗಿಕೊಳ್ತಿದ್ದೀವಿ. ರಾಜಕಾರಣಿಗಳು ಅನ್ನ ತಿನ್ನೋರಾದರೆ ಸರಿ ಮಾಡ್ತಾರೆ. ಅನ್ನ ತಿನ್ನೋರಲ್ಲ ಅವರು ಹೊಟ್ಟೆಗೆ ಮಣ್ಣು ತಿನ್ನೋರು. ನಮ್ಮ ಹೊಟ್ಟೆ ಉರಿಸ್ತಾರೆ, ನಾವು ಹೊಟ್ಟೆ ಉರ್ಕೊಂಡು ಸಾಯಬೇಕು. ನಾವೆಲ್ಲ ಬಾಡಿಗೆ ಮನೆಯಲ್ಲಿರೋರು, ನಾವೇನು ಸಾಯ್ಬೇಕಾ? ಯಾವಾಗ ಮಳೆ ಬಂದರು ಇದೇ ಪರಿಸ್ಥಿತಿ. ಮನೆ ಮಾಲೀಕರು ಅಗ್ರೀಮೆಂಟ್ ಮುಗಿಯೋವರೆಗೂ ಹಣ ಕೊಡಲ್ಲ ಅಂತಾರೆ, ನಾವು ಎಲ್ಲಿಗೆ ಹೋಗಬೇಕು ಎಂದರು.

ಇದನ್ನೂ ಓದಿ:Karnataka Rains: ಮುಂಗಾರು ಪೂರ್ವ ಮಳೆಗೆ ಈ ವರ್ಷ ರಾಜ್ಯದಲ್ಲಿ 52 ಮಂದಿ ಸಾವು; ಕಳೆದ ವರ್ಷ ಮೃತಪಟ್ಟವರೆಷ್ಟು?

ಅನುಗ್ರಹ ಬಡಾವಣೆ ಜನರ ಗೋಳು

ಇನ್ನು ದೇವರ ಚಿಕ್ಕನಹಳ್ಳಿ ಜನರ ಪಾಡು ಒಂದು ಕಡೆಯಾದರೆ ಅನುಗ್ರಹ ಬಡಾವಣೆ ಜನರ ಗೋಳು ಮತ್ತೊಂದು ಕಡೆ. ರಸ್ತೆಯಲ್ಲಿ ಮಂಡಿಯುದ್ದಕ್ಕೆ ಕೊಳಚೆ ನೀರು ನಿಂತಿತ್ತು, ಜೊತೆಗೆ ಮನೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ರಾತ್ರಿ ಕುಡಿಯಲು ಕೂಡ ನೀರು ಇಲ್ಲದೇ ಪರದಾಡುವಂತಾಗಿತ್ತು. ಮನೆಯಲ್ಲಿರುವ ಸಂಪ್​ನೊಳಗೆ ಕೊಳಚೆ ನೀರು ಸೇರಿದ್ದು, ಇಡೀ ರಾತ್ರಿ ಮನೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ನಿವಾಸಿಗಳು, ಮನೆಯಲ್ಲಿ ಸೇರಿದ್ದ ಕೆಸರು ಹೊರ ಹಾಕ್ತಿದ್ದಾರೆ. ಇನ್ನು ಸ್ಥಳಕ್ಕೆ ಬಂದಿದ್ದ ಅಗ್ನಿ ಶಾಮಕ ಸಿಬ್ಬಂದಿ ಇಡೀ ರಾತ್ರಿ ರಸ್ತೆ ನೀರು ಹೊರ ಹಾಕೊ‌ ಕೆಲಸದ ಜೊತೆಗೆ ರಸ್ತೆ ಮೇಲೆ ನಿಂತಿದ್ದ ನೀರನ್ನು ಕೂಡ ಡೀ ವಾಟರಿಂಗ್ ಯಂತ್ರ ಬಳಸಿ‌ ಹೊರ ಹಾಕಿದರು.

ಇನ್ನು ಈ ಕುರಿತು ಬೊಮ್ಮನಹಳ್ಳಿ ವಲಯ ಬಿಬಿಎಂಪಿ ಜಂಟಿ ಆಯುಕ್ತ ಕೃಷ್ಣಮೂರ್ತಿ ಮಾತನಾಡಿ ‘ಅನುಗ್ರಹ ಬಡಾವಣೆಯಲ್ಲಿ ಸ್ವಲ್ಪ ಫ್ಲಡ್ಡಿಂಗ್ ಆಗಿದೆ. ಇದು ತಗ್ಗು ಪ್ರದೇಶ ಆಗಿದ್ದರಿಂದ ಜಾಸ್ತಿ ಮಳೆ ಬಿದ್ದಾಗ ಪ್ರತಿ ವರ್ಷ ಈ ಸಮಸ್ಯೆ ಆಗುತ್ತಿದೆ. ಸದ್ಯ ಡೀ ವಾಟರಿಂಗ್ ಮಾಡೊ ಕೆಲಸ ಮಾಡ್ತಿದ್ದೇವೆ. ನೀರು ಜಾಸ್ತಿ ಬಂದಾಗ ರಿವರ್ಸ್ ಆಗುತ್ತಿದೆ. ಮೊದಲು‌ ನೀರು ಹರಿವಿಕೆ ಕಡಿಮೆ ಇತ್ತು. ಈಗ ಕಟ್ಟಡ ನಿರ್ಮಾಣ ಹೆಚ್ಚಾಗಿದೆ, ಕಾಂಕ್ರೀಟ್ ರಸ್ತೆಗಳಾಗಿವೆ. ಹಾಗಾಗಿ ಫ್ಲೋ ಜಾಸ್ತಿಯಾಗಿ ಇರುತ್ತದೆ ಎಂದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ