AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಮಾಂಡೌಸ್ ಚಂಡಮಾರುತದ ಎಫೆಕ್ಟ್; ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ, ಮೈ ಕೊರೆವ ಚಳಿ

Cyclone Mandous: ಮಾಂಡೌಸ್ ಚಂಡಮಾರುತದಿಂದಾಗಿ ಚಳಿಯ ವಾತಾವರಣವು ಕರ್ನಾಟಕದಲ್ಲಿ ಭಾನುವಾರದವರೆಗೆ ಮುಂದುವರಿಯುವ ನಿರೀಕ್ಷೆಯಿದೆ.

Bengaluru Rain: ಮಾಂಡೌಸ್ ಚಂಡಮಾರುತದ ಎಫೆಕ್ಟ್; ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ, ಮೈ ಕೊರೆವ ಚಳಿ
ಮಳೆ
TV9 Web
| Edited By: |

Updated on:Dec 10, 2022 | 9:33 AM

Share

ಬೆಂಗಳೂರು: ತಮಿಳುನಾಡಿನಲ್ಲಿ ಮಾಂಡೌಸ್ ಚಂಡಮಾರುತದ (Mandous cyclone) ಅಬ್ಬರದ ಪರಿಣಾಮವಾಗಿ ಬೆಂಗಳೂರು (Bangalore Rains) ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ಶುಕ್ರವಾರ ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ತುಂತುರು ಮಳೆ ಶುರುವಾಗಿದ್ದು, ವಿಪರೀತ ಚಳಿಯೂ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಬೆಂಗಳೂರು ನಗರದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​​​ (Yellow Alert) ಘೋಷಿಸಲಾಗಿದೆ. ಮಳೆಯಿಂದಾಗಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಾಂಡೌಸ್ ಚಂಡಮಾರುತದಿಂದಾಗಿ ಚಳಿಯ ವಾತಾವರಣವು ಕರ್ನಾಟಕದಲ್ಲಿ ಭಾನುವಾರದವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಅಲ್ಲಿಯವರೆಗೆ ದಕ್ಷಿಣ ಮತ್ತು ಕರಾವಳಿ ಕರ್ನಾಟಕದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಶುಕ್ರವಾರ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 21.6 ಡಿಗ್ರಿ ದಾಖಲಾಗಿತ್ತು. ಇದು ಕಳೆದ ವಾರದಲ್ಲಿ ವರದಿಯಾದ 26-28 ಡಿಗ್ರಿ ಸೆಲ್ಸಿಯಸ್​​ಗಿಂತ ಕಡಿಮೆಯಾಗಿದೆ. ಚಂಡಮಾರುತದಿಂದ ಚಳಿ, ಬಿರುಗಾಳಿ ಮತ್ತು ಮೋಡ ಕವಿದ ವಾತಾವರಣದಿಂದಾಗಿ ಬೆಂಗಳೂರಿನಲ್ಲಿ ವಿಪರೀತ ಚಳಿಯ ವಾತಾವರಣವಿದೆ. ಶುಕ್ರವಾರ ಸಂಜೆ 7 ಗಂಟೆಯ ಹೊತ್ತಿಗೆ ಚಂಡಮಾರುತವು ಚೆನ್ನೈ ಕರಾವಳಿಗೆ ಸಮೀಪಿಸಿದ್ದು, ಅಲ್ಲಿ ತೀವ್ರ ಮಳೆಯಾಗಿದೆ.

ಇದನ್ನೂ ಓದಿ: Cyclone Mandous: ತಮಿಳುನಾಡಿನಲ್ಲಿ ಮಾಂಡೌಸ್ ಚಂಡಮಾರುತದ ಭೀತಿ; ಚೆನ್ನೈನ 16 ವಿಮಾನಗಳ ಹಾರಾಟ ರದ್ದು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮಾಂಡೌಸ್ ಚಂಡಮಾರುತ ಅಬ್ಬರಿಸುತ್ತಿದೆ. ಕರ್ನಾಟಕದ ದಕ್ಷಿಣ ಒಳನಾಡಿಗೆ ಇಂದು, ನಾಳೆ ಗುಡುಗು ಸಹಿತ ಮಳೆ ಪ್ರವೇಶಿಸುವ ಸಾಧ್ಯತೆಯಿದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯ ಮುನ್ಸೂಚನೆಯಿದೆ. ಬೆಂಗಳೂರು ಮಾತ್ರವಲ್ಲದೆ ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆ ಹೆಚ್ಚಾಗಿದೆ. ಕೋಲಾರದಲ್ಲಿ ನಿನ್ನೆ ರಾತ್ರಿಯಿಂದ ಶೀತಗಾಳಿ ಸಹಿತ ಜಡಿ ಮಳೆ ಸುರಿಯುತ್ತಿದೆ. ರಾತ್ರಿಯಿಂದ‌ ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಮತ್ತು ಗಾಳಿಯಿಂದ ಹೊರಬರಲು ಜನ ಹೆದರುವಂತಾಗಿದೆ. ಅಕಾಲಿಕ ಮಳೆಯಿಂದ ರೈತರಲ್ಲಿ ಆತಂಕ ಮನೆ ಮಾಡಿದೆ. ಕಟಾವಿಗೆ ಬಂದ ಧಾನ್ಯಗಳಿಗೆ, ತೋಟಗಾರಿಕಾ ಬೆಳೆಗಳು ಹಾನಿಯಾಗುವ ಸಾಧ್ಯತೆಯಿದೆ.

ರಾಮನಗರ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ರಾಮನಗರದಲ್ಲಿ ಇಂದು ಮುಂಜಾನೆಯಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ. ಶಾಲಾ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳ ಪರದಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Cyclone Mandous: ಮಾಂಡೌಸ್ ಚಂಡಮಾರುತದ ಅಬ್ಬರ; ತಮಿಳುನಾಡಿನಲ್ಲಿ ಬಿರುಗಾಳಿ ಸಹಿತ ಮಳೆ, ಭೂಕುಸಿತ

ತುಮಕೂರು ಜಿಲ್ಲಾದ್ಯಂತ ಜಿಟಿಜಿಟಿ ಮಳೆ ಆರಂಭವಾಗಿದೆ. ಇಂದು ಬೆಳಗಿನ ಜಾವದಿಂದ ಮಳೆ ಆರಂಭವಾಗಿದ್ದು, ಜಿಟಿ ಜಿಟಿ‌ ಮಳೆಯ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಕಿರಿಕಿರಿ ಎದುರಾಗಿದೆ. ಸಣ್ಣದಾಗಿ ಸುರಿಯುತ್ತಿರುವ ಮಳೆಯಿಂದ ತುಮಕೂರಿನ ಜನರು ಹೈರಾಣಾಗಿದ್ದಾರೆ.

ಬೀದರ್, ಬಾಗಲಕೋಟೆ, ವಿಜಯಪುರ, ರಾಯಚೂರು ಮತ್ತು ಗದಗ ಜಿಲ್ಲೆಗಳಲ್ಲಿ ಕಡಿಮೆ ತಾಪಮಾನ ವರದಿಯಾಗಿದೆ. ಇಂದು ಬೆಂಗಳೂರು, ಕೋಲಾರ, ಚಿಕ್ಕಮಗಳೂರು ಮತ್ತು ಘಟ್ಟ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಒಂದೆರಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಭಾನುವಾರ ಈ ವಾಯುಭಾರ ಕುಸಿತವು ಕರ್ನಾಟಕದ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ. ಇದರಿಂದಾಗಿ ಅಲ್ಲಿಯೂ ಮಳೆಯಾಗುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:31 am, Sat, 10 December 22

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್