AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ, ರಸ್ತೆಗಳು ಜಲಾವೃತ

ಕೆಲವು ದಿನಗಳಿಂದ ಶಾಂತವಾಗಿದ್ದ ವರುಣ, ಜೂನ್​ ತಿಂಗಳ ಮೊದಲ ದಿನವಾದ ನಿನ್ನೆ(ಜೂ.01)ಯಿಂದಲೇ ಬೆಂಗಳೂರಿ (Bengaluru)ಗೆ ಆಗಮಿಸಿದ್ದಾನೆ. ಅದರಂತೆ ಇಂದು ಕೂಡ ಮಳೆಯ ಅಬ್ಬರ ಮುಂದುವರೆದಿದ್ದು, ನಗರದ ಹಲವೆಡೆ ಗಾಳಿ ಸಹಿತ ಮಳೆ(Rain) ಶುರುವಾಗಿದೆ. ಮೆಜೆಸ್ಟಿಕ್​​, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ ಸೇರಿದಂತೆ ಭರ್ಜರಿ ಮಳೆಯಾಗುತ್ತಿದೆ. ಇದರಿಂದ ತಗ್ಗು ಪ್ರದೇಶದ ರಸ್ತೆಗಳು ಜಲಾವೃತವಾಗಿದೆ.

Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ, ರಸ್ತೆಗಳು ಜಲಾವೃತ
ಬೆಂಗಳೂರಿನಲ್ಲಿ ಮಳೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Jun 02, 2024 | 7:40 PM

ಬೆಂಗಳೂರು, ಜೂ.02: ಕೆಲವು ದಿನಗಳಿಂದ ಶಾಂತವಾಗಿದ್ದ ವರುಣ, ಜೂನ್​ ತಿಂಗಳ ಮೊದಲ ದಿನವಾದ ನಿನ್ನೆ (ಜೂ.01) ಯಿಂದಲೇ ಬೆಂಗಳೂರಿ(Bengaluru)ಗೆ ಆಗಮಿಸಿದ್ದಾನೆ. ಅದರಂತೆ ಇಂದು(ಜೂ.02) ಕೂಡ ಮುಂದುವರೆದಿದ್ದು, ನಗರದ ಹಲವೆಡೆ ಗಾಳಿ ಸಹಿತ ಮಳೆ(Rain) ಶುರುವಾಗಿದೆ. ಮೆಜೆಸ್ಟಿಕ್​​, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ವಿಧಾನಸೌಧ, ಟೌನ್​ಹಾಲ್​​, ಕೆ.ಆರ್​.ಮಾರ್ಕೆಟ್​ , ಕಾರ್ಪೊರೇಷನ್​​, ಶಿವಾಜಿನಗರ, ಯಲಹಂಕ ಸುತ್ತಮುತ್ತ ಭರ್ಜರಿ ಮಳೆ ಬಿಳುತ್ತಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಇತ್ತ ತಗ್ಗು ಪ್ರದೇಶದ ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ. ಜೊತೆಗೆ ಬಿರುಗಾಳಿಗೆ ಹಲವು ಕಡೆಗಳಲ್ಲಿ ಮರಗಳು ಧರೆಗುರುಳಿದೆ.

ನಿನ್ನೆ(ಜೂ.01)ಯಿಂದ ಐದು ದಿನ ನಗರದಲ್ಲಿ ಮಳೆ ಆಗಲಿದೆ ಎಂದು ಹವಾಮಾನ‌ ಇಲಾಖೆ ತಜ್ಞ ಸಿಎಸ್ ಪಾಟೀಲ್ ಹೇಳಿದ್ದರು. ಈಗಾಗಲೇ ನಿರೀಕ್ಷೆಗೂ ಮೊದಲೇ ಭಾರತದ ದಕ್ಷಿಣ ರಾಜ್ಯವಾದ ಕೇರಳವನ್ನು ನೈಋತ್ಯ ಮಾನ್ಸೂನ್ ಪ್ರವೇಶ  ಮಾಡಿದ್ದು, ಇವತ್ತು ಕರ್ನಾಟಕ ಗಡಿಗೆ ನೈಋತ್ಯ ಮಾನ್ಸೂನ್ ಪ್ರವೇಶ ಎಂಟ್ರಿ ಕೊಟ್ಟಿದೆ. ಜೊತೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಮಾನ್ಸೂನ್ ಪ್ರವೇಶವಾಗಿದೆ.

ಇದನ್ನೂ ಓದಿ:Monsoon: ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ, ದಕ್ಷಿಣ ಒಳನಾಡಿನಲ್ಲಿ 1 ವಾರ ಭಾರೀ ಮಳೆ

ಹೀಗಾಗಿ ಇವತ್ತಿನಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದಿನಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ ಇದ್ದು, ನೈಋತ್ಯ ಮಾನ್ಸೂನ್ ಹಿನ್ನೆಲೆ ಇವತ್ತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಯಚೂರು, ಕೊಪ್ಪಳ ಮಂಡ್ಯ, ಮೈಸೂರು ಸೇರಿದಂತೆ ಗುಡುಗು ಸಹಿತ ಭಾರೀ ಮಳೆ ಮೂನ್ಸುಚನೆ ನೀಡಲಾಗಿತ್ತು. 40-50 ಕಿಮೀ ವೇಗದ ಗಾಳಿಯೊಂದಿಗೆ ಮಳೆ ಸಾಧ್ಯತೆ ಇದೆ ಎಂದು ಮೊದಲೇ ಹವಾಮಾನ ಇಲಾಖೆ ತಿಳಿಸಿತ್ತು. ಅದರಂತೆ ನಗರದಲ್ಲಿ ಇನ್ನೂ 4ದಿನ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:02 pm, Sun, 2 June 24

ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?