AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಸೃಷ್ಟಿಸಿದ ಅವಾಂತರ ಬಗ್ಗೆ ಮಾಹಿತಿ ಪಡೆದ ಡಿಕೆ ಶಿವಕುಮಾರ್​; ನಗರಾಭಿವೃದ್ಧಿ ಸಚಿವರ ನೈಟ್​ ರೌಡ್ಸ್​​, ಬಿಬಿಎಂಪಿ ಅಧಿಕಾರಿಗಳಿಗೆ ಕ್ಲಾಸ್​

ಇಂಜಿನಿಯರ್​ಗಳು ಹಾಗೂ ಸಿಬ್ಬಂದಿ ತುರ್ತು ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಡೆ ಹಾನಿಯಾಗದಂತೆ ತುರ್ತು ಕೆಲಸ ಮಾಡುತ್ತಿದ್ದಾರೆ. ವಿಮಾನ ನಿಲ್ದಾಣದ ಕಡೆ ಸ್ವಲ್ಪ ಜಲಾವೃತವಾಗಿದೆ. ಆರ್.ಆರ್.ನಗರದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆ. ಕೆ.ಆರ್.ಸರ್ಕಲ್​ ಅಂಡರ್​ಪಾಸ್​ ಬಗ್ಗೆಯೂ ಮಾಹಿತಿ ಪಡೆದಿದ್ದೇನೆ. ಯಾವುದೇ ಅನಾಹುತ ಆಗದಂತೆ ನೋಡಿಕೊಳ್ಳಲು ಸೂಚಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಮಳೆ ಸೃಷ್ಟಿಸಿದ ಅವಾಂತರ ಬಗ್ಗೆ ಮಾಹಿತಿ ಪಡೆದ ಡಿಕೆ ಶಿವಕುಮಾರ್​; ನಗರಾಭಿವೃದ್ಧಿ ಸಚಿವರ ನೈಟ್​ ರೌಡ್ಸ್​​, ಬಿಬಿಎಂಪಿ ಅಧಿಕಾರಿಗಳಿಗೆ ಕ್ಲಾಸ್​
ಡಿಸಿಎಂ ಡಿಕೆ ಶಿವಕುಮಾರ್​, ಬಿಬಿಎಂಪಿ ಆಯುಕ್ತ ತುಷಾರ್​ ಗಿರಿನಾಥ್​
Shivaprasad B
| Edited By: |

Updated on: Nov 07, 2023 | 7:11 AM

Share

ಬೆಂಗಳೂರು ನ.07: ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು, ಹಿಂಗಾರು ಕೈ ಹಿಡಿಯುವ ಆಶಾಭಾವನೆ ಮೂಡಿದೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಸೃಷ್ಟಿಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸೋಮವಾರ ಭಾರಿ ಮಳೆಯಾಗಿತ್ತು. ಇದರಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ, ರಸ್ತೆ, ಕೆಳಸೇತುವೆಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗಿತ್ತು. ಧಾರಾಕಾರ ಮಳೆಯಿಂದ (Rain) ಅವಾಂತರ ಸೃಷ್ಟಿಯಾದ ಹಿನ್ನೆಲೆಯಲ್ಲಿ ಬಿಬಿಎಂಪಿ (BBMP) ಕೇಂದ್ರ ಕಚೇರಿಯ ವಾರ್​​ ರೂಮ್​ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭೇಟಿ ನೀಡಿದರು.

ಬಿಬಿಎಂಪಿಯ ಕೇಂದ್ರ ಕಚೇರಿ ವಾರ್​ ರೂಂನಿಂದಲೇ ಎಂಟೂ ವಲಯದ ಅಧಿಕಾರಿಗಳಿಗೆ ಕರೆ ಮಾಡಿ ಅಲ್ಲಿನ ಪರೀಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡರು. ಮಳೆಯಿಂದ ಎಲ್ಲೆಲ್ಲಿ ಮರ ಬಿದ್ದಿವೆ, ನೀರು ನುಗ್ಗಿರುವ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ ಏರ್​ಪೋರ್ಟ್​​ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್​ಜಾಮ್​ ಬಗ್ಗೆಯೂ ಮಾಹಿತಿ ಪಡೆದರು. ಎಲ್ಲ ವಲಯಗಳಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಎಲ್ಲರೂ ಸರಿಯಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಭಾರೀ ಮಳೆ, ತುಮಕೂರಿನಲ್ಲಿ ನೀರಿನಲ್ಲಿ ಸಿಲುಕಿದ ಆ್ಯಂಬುಲೆನ್ಸ್

ಡಿಕೆ ಶಿವಕುಮಾರ್​ ಮಳೆ ಪ್ರಮಾಣ ಕುರಿತಂತೆಯೂ ಮಾಹಿತಿ ಪಡೆದರು. ಆರ್​​.ಆರ್​​​.ನಗರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವ ಕುರಿತು ಹವಾಮಾನ ಇಲಾಖೆ ಅಧಿಕಾರಿಯಿಂದ ಮಾಹಿತಿ ಪಡೆದರು. ಏರ್ ಪೋರ್ಟ್ ರಸ್ತೆ, ಮಾರತ್ತ ಹಳ್ಳಿ ಸೇರಿದಂತೆ ಹಲವೆಡೆ ಹೆಚ್ಚು ಮಳೆಯಾಗಿದೆ. ಸ್ಟ್ರಾಮ್ ವಾಟರ್ ಫ್ಲೋಯಿಂಗ್ ಕುರಿತಂತೆ ಮಾಹಿತಿ ಸಂಗ್ರಹಿಸಿದರು.

ಈ ವೇಳೆ ಡಿಕೆ ಶಿವಕುಮಾರ್​ ಬಿಬಿಎಂಪಿ ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡ ಪ್ರಸಂಗವೂ ನಡೆಯಿತು. ಕಮಾಂಡ್ ಆ್ಯಂಡ ಕಂಟ್ರೋಲ್ ರೂಮ್​ನಲ್ಲಿ ಯಾಕೆ ಡಿಸ್ಪ್ಲೇ ಇಲ್ಲ? ಮೊಬೈಲ್​ನಲ್ಲಿ ಯಾಕೆ ತೋರಿಸ್ತಿದೀರಿ? ಎಂದು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಗಳು ಪಾಸ್ವರ್ಡ್ ಇನ್ನೂ ಅಪ್ರೂವಲ್ ಆಗಿಲ್ಲ ಸರ್ ಅಂತ ಉತ್ತರ ನೀಡಿದರು.

ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇಂಜಿನಿಯರ್​ಗಳು ಹಾಗೂ ಸಿಬ್ಬಂದಿ ತುರ್ತು ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಡೆ ಹಾನಿಯಾಗದಂತೆ ತುರ್ತು ಕೆಲಸ ಮಾಡುತ್ತಿದ್ದಾರೆ. ವಿಮಾನ ನಿಲ್ದಾಣದ ಕಡೆ ಸ್ವಲ್ಪ ಜಲಾವೃತವಾಗಿದೆ. ಆರ್.ಆರ್.ನಗರದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆ. ಕೆ.ಆರ್.ಸರ್ಕಲ್​ ಅಂಡರ್​ಪಾಸ್​ ಬಗ್ಗೆಯೂ ಮಾಹಿತಿ ಪಡೆದಿದ್ದೇನೆ. ಯಾವುದೇ ಅನಾಹುತ ಆಗದಂತೆ ನೋಡಿಕೊಳ್ಳಲು ಸೂಚಿಸಿದ್ದೇನೆ ಎಂದು ಹೇಳಿದರು.

ಮಳೆ ಬರುವ ನಿರೀಕ್ಷೆ ಇತ್ತು. ಟ್ರಾಫಿಕ್ ಸಮಸ್ಯೆ ಇರುತ್ತದೆ. ಯಾವುದೇ ಕಡೆ ಹಾನಿಯಾಗದಂತೆ ಎಮರ್ಜೆನ್ಸಿಗೆ ಸಿಬ್ಬಂದಿ, ಇಂಜಿನಿಯರ್ಸ, ಕೆಲಸ ಮಾಡುತ್ತಿದ್ದಾರೆ. ಯಾವ ವಲಯದಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆ ಬರುತ್ತಿದೆ ಅಂತ ಮಾಹಿತಿ ಪಡೆದಿದ್ದೇನೆ. ವಲಯ ಆಯುಕ್ತರು ನೋಡುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ