AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಳೆ ಅವಾಂತರ; ಮುರಿದು ಬಿದ್ದ ಮರದ ಕೊಂಬೆ, ಕೂದಲೆಳೆ ಅಂತರದಲ್ಲಿ ಮೂವರು ಪಾರು

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಅಲಿ ಅಸ್ಗರ್ ರಸ್ತೆಯಲ್ಲಿ ಬೃಹತ್ ಮರದ ಕೊಂಬೆ ರಸ್ತೆಗೆ ಉರುಳಿದೆ. ನಗರ ಪೊಲೀಸ್ ಆಯುಕ್ತರ ಕಚೇರಿ ಬಳಿ ಘಟನೆ ನಡೆದಿದ್ದು, ಮೂವರು ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸದ್ಯ ಕನ್ನಿಂಗ್‌ಹ್ಯಾಮ್ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಬೆಂಗಳೂರು: ಮಳೆ ಅವಾಂತರ; ಮುರಿದು ಬಿದ್ದ ಮರದ ಕೊಂಬೆ, ಕೂದಲೆಳೆ ಅಂತರದಲ್ಲಿ ಮೂವರು ಪಾರು
ಉರುಳಿ ಬಿದ್ದ ಬೃಹತ್ ಮರದ ಕೊಂಬೆ
ಶಿವಪ್ರಸಾದ್​ ಬಿ.
| Edited By: |

Updated on:Oct 23, 2025 | 9:23 AM

Share

ಬೆಂಗಳೂರು, ಅಕ್ಟೋಬರ್​ 23: ಕರ್ನಾಟಕದಲ್ಲಿ ಹಿಂಗಾರು ಮಳೆಯ (rain) ಆರ್ಭಟ ಜೋರಾಗಿದೆ. ನಿರಂತರ ಮಳೆಗೆ ಬೆಳೆಗಳು ನೀರು ಪಾಲಾದರೆ, ಜನಜೀವನ ಅಸ್ತವ್ಯಸ್ತವಾಗಿದೆ. ಇತ್ತ ಸಿಲಿಕಾನ್​​​ ಸಿಟಿಯಲ್ಲೂ (bangaluru) ಮಳೆ ಅಬ್ಬರಿಸಿದೆ. ನಗರದಲ್ಲಿ ಕಳೆದ ರಾತ್ರಿ ಭಾರೀ ಮಳೆ ಸುರಿದಿದೆ. ಪರಿಣಾಮ ಕೆಲವು ಅವಾಂತರಗಳು ಸಂಭವಿಸಿವೆ. ಏಕಾಏಕಿ ಬೃಹತ್ ಮರದ ಕೊಂಬೆ ರಸ್ತೆಗೆ ಉರುಳಿ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಮೂವರು ಪಾರಾಗಿದ್ದಾರೆ.

ಕೂದಲೆಳೆ ಅಂತರದಲ್ಲಿ ಪಾರಾದ ಮೂವರು ಸಿಬ್ಬಂದಿ

ನಗರದಲ್ಲಿ ರಾತ್ರಿ ಸುರಿದ ಮಳೆಗೆ ಅಲಿ ಆಸ್ಗರ್ ರಸ್ತೆಯ ಪೊಲೀಸ್ ಕಮಿಷನರ್​​ ಕಚೇರಿ ಹಿಂದಿನ ಗೇಟ್​​ ಬಳಿ ಬೆಳಗ್ಗೆ 7:30 ರ ವೇಳೆಗೆ ಬೃಹತ್ ಮರದ ಕೊಂಬೆ ಏಕಾಏಕಿ ರಸ್ತೆಗೆ ಉರುಳಿ ಬಿದ್ದ ಘಟನೆ ನಡೆದಿದೆ. ಓರ್ವ ಟ್ರಾಫಿಕ್ ಪೊಲೀಸ್, ಸೆಕ್ಯೂರಿಟಿ ಗಾರ್ಡ್ ಮತ್ತು ಬಿಬಿಎಂಪಿ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಆ ಮೂಲಕ ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ.

ಬೆಂಗಳೂರು ಸಂಚಾರಿ ಪೊಲೀಸ್​​ ಟ್ವೀಟ್

ಇನ್ನು ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್​ ಮಾಡಿದ್ದು, ಅಲಿ ಅಸ್ಕರ್ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ಕನ್ನಿಂಗ್‌ಹ್ಯಾಮ್ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವಾಗಿ ಇನ್‌ಫೆಂಟ್ರಿ ರಸ್ತೆಯನ್ನು ಬಳಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಅ.29ರವರೆಗೂ ವಿಪರೀತ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಅದೇ ರೀತಿಯಾಗಿ ಆರ್‌ಸಿ ಪುರದಲ್ಲಿ ಕೂಡ ಮರ ಧರೆಗುರುಳಿ ಬಿದ್ದಿದೆ. ಪರಿಣಾಮ ರಾಮಚಂದ್ರಾಪುರ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವಾಗಿ ಭೂಪಸಂದ್ರ ರಸ್ತೆಯನ್ನು ಬಳಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:21 am, Thu, 23 October 25

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ