AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಳೆ ಅವಾಂತರ; ಮುರಿದು ಬಿದ್ದ ಮರದ ಕೊಂಬೆ, ಕೂದಲೆಳೆ ಅಂತರದಲ್ಲಿ ಮೂವರು ಪಾರು

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಅಲಿ ಅಸ್ಗರ್ ರಸ್ತೆಯಲ್ಲಿ ಬೃಹತ್ ಮರದ ಕೊಂಬೆ ರಸ್ತೆಗೆ ಉರುಳಿದೆ. ನಗರ ಪೊಲೀಸ್ ಆಯುಕ್ತರ ಕಚೇರಿ ಬಳಿ ಘಟನೆ ನಡೆದಿದ್ದು, ಮೂವರು ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸದ್ಯ ಕನ್ನಿಂಗ್‌ಹ್ಯಾಮ್ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಬೆಂಗಳೂರು: ಮಳೆ ಅವಾಂತರ; ಮುರಿದು ಬಿದ್ದ ಮರದ ಕೊಂಬೆ, ಕೂದಲೆಳೆ ಅಂತರದಲ್ಲಿ ಮೂವರು ಪಾರು
ಉರುಳಿ ಬಿದ್ದ ಬೃಹತ್ ಮರದ ಕೊಂಬೆ
Shivaprasad B
| Edited By: |

Updated on:Oct 23, 2025 | 9:23 AM

Share

ಬೆಂಗಳೂರು, ಅಕ್ಟೋಬರ್​ 23: ಕರ್ನಾಟಕದಲ್ಲಿ ಹಿಂಗಾರು ಮಳೆಯ (rain) ಆರ್ಭಟ ಜೋರಾಗಿದೆ. ನಿರಂತರ ಮಳೆಗೆ ಬೆಳೆಗಳು ನೀರು ಪಾಲಾದರೆ, ಜನಜೀವನ ಅಸ್ತವ್ಯಸ್ತವಾಗಿದೆ. ಇತ್ತ ಸಿಲಿಕಾನ್​​​ ಸಿಟಿಯಲ್ಲೂ (bangaluru) ಮಳೆ ಅಬ್ಬರಿಸಿದೆ. ನಗರದಲ್ಲಿ ಕಳೆದ ರಾತ್ರಿ ಭಾರೀ ಮಳೆ ಸುರಿದಿದೆ. ಪರಿಣಾಮ ಕೆಲವು ಅವಾಂತರಗಳು ಸಂಭವಿಸಿವೆ. ಏಕಾಏಕಿ ಬೃಹತ್ ಮರದ ಕೊಂಬೆ ರಸ್ತೆಗೆ ಉರುಳಿ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಮೂವರು ಪಾರಾಗಿದ್ದಾರೆ.

ಕೂದಲೆಳೆ ಅಂತರದಲ್ಲಿ ಪಾರಾದ ಮೂವರು ಸಿಬ್ಬಂದಿ

ನಗರದಲ್ಲಿ ರಾತ್ರಿ ಸುರಿದ ಮಳೆಗೆ ಅಲಿ ಆಸ್ಗರ್ ರಸ್ತೆಯ ಪೊಲೀಸ್ ಕಮಿಷನರ್​​ ಕಚೇರಿ ಹಿಂದಿನ ಗೇಟ್​​ ಬಳಿ ಬೆಳಗ್ಗೆ 7:30 ರ ವೇಳೆಗೆ ಬೃಹತ್ ಮರದ ಕೊಂಬೆ ಏಕಾಏಕಿ ರಸ್ತೆಗೆ ಉರುಳಿ ಬಿದ್ದ ಘಟನೆ ನಡೆದಿದೆ. ಓರ್ವ ಟ್ರಾಫಿಕ್ ಪೊಲೀಸ್, ಸೆಕ್ಯೂರಿಟಿ ಗಾರ್ಡ್ ಮತ್ತು ಬಿಬಿಎಂಪಿ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಆ ಮೂಲಕ ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ.

ಬೆಂಗಳೂರು ಸಂಚಾರಿ ಪೊಲೀಸ್​​ ಟ್ವೀಟ್

ಇನ್ನು ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್​ ಮಾಡಿದ್ದು, ಅಲಿ ಅಸ್ಕರ್ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ಕನ್ನಿಂಗ್‌ಹ್ಯಾಮ್ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವಾಗಿ ಇನ್‌ಫೆಂಟ್ರಿ ರಸ್ತೆಯನ್ನು ಬಳಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಅ.29ರವರೆಗೂ ವಿಪರೀತ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಅದೇ ರೀತಿಯಾಗಿ ಆರ್‌ಸಿ ಪುರದಲ್ಲಿ ಕೂಡ ಮರ ಧರೆಗುರುಳಿ ಬಿದ್ದಿದೆ. ಪರಿಣಾಮ ರಾಮಚಂದ್ರಾಪುರ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವಾಗಿ ಭೂಪಸಂದ್ರ ರಸ್ತೆಯನ್ನು ಬಳಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:21 am, Thu, 23 October 25

Follow Us
Shivaprasad B
Shivaprasad B
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ
ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ!
ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ!