Karnataka Weather Update: ಬೆಂಗಳೂರಿಗರಿಗೆ ತಂಪೆರೆದ ವರುಣ, ಅರ್ಧ ಕರ್ನಾಟಕಕ್ಕೆ ನಾಳೆ ಯೆಲ್ಲೋ ಅಲರ್ಟ್​

Monsoon 2026: ಬೆಂಗಳೂರಿನ ವಿವಿಧೆಡೆ ಗಾಳಿ ಸಹಿತ ಭಾರಿ ಮಳೆಯಾಗಿದೆ. ಈ ನಡುವೆ ಹವಾಮಾನ ಇಲಾಖೆಯು ನಾಳೆ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ ಅರ್ಧ ಕರ್ನಾಟಕಕ್ಕೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಉಡುಪಿ ಜಿಲ್ಲೆಯ ಬೈಂದೂರಿನ ಕೆರ್ಗಾಳುವಿನಲ್ಲಿ ನಿನ್ನೆ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ 160.5 ಮಿ.ಮೀ. ಮಳೆಯಾಗಿದೆ.

Karnataka Weather Update: ಬೆಂಗಳೂರಿಗರಿಗೆ ತಂಪೆರೆದ ವರುಣ, ಅರ್ಧ ಕರ್ನಾಟಕಕ್ಕೆ ನಾಳೆ ಯೆಲ್ಲೋ ಅಲರ್ಟ್​
ಬೆಂಗಳೂರಲ್ಲಿ ಮಳೆ
Image Credit source: Tv9 Kannada

Updated on: Jul 20, 2026 | 6:19 PM

ಮುಖ್ಯಾಂಶಗಳು

  • ಬೆಂಗಳೂರಿನ ಹಲವೆಡೆ ಧಾರಾಕಾರ ವರ್ಷಧಾರೆ
  • ಅರ್ಧ ಕರ್ನಾಟಕಕ್ಕೆ ನಾಳೆ ಯೆಲ್ಲೋ ಅಲರ್ಟ್​
  • ಬೈಂದೂರಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ

ಬೆಂಗಳೂರು, ಜುಲೈ 20: ಕಳೆದ 3-4 ದಿನಗಳಿಂದ ಬೆಂಗಳೂರಲ್ಲಿ (Bengaluru) ಮಳೆಯಾಗುತ್ತಿದ್ದು, ಇಂದು ಕೂಡ ನಗರದ ವಿವಿಧೆಡೆ ಉತ್ತಮ ವರ್ಷಧಾರೆಯಾಗಿದೆ. ಬಸವನಗುಡಿ, ಶಾಂತಿನಗರ, ಟೌನ್​ಹಾಲ್, ಮೆಜೆಸ್ಟಿಕ್, ಜಯನಗರ, ಮಲ್ಲೇಶ್ವರಂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಮಳೆ ಹಿನ್ನೆಲೆ ದ್ವಿಚಕ್ರ ವಾಹನಗಳ ಸವಾರರು ಮತ್ತು ಪಾದಚಾರಿಗಳು ಪರದಾಟ ನಡೆಸಿದ್ದು, ಬಸ್​​ ನಿಲ್ದಾಣ ಮತ್ತು ಅಂಗಡಿಮುಂಗಟ್ಟುಗಳ ಬಳಿ ನಿಂತು ಆಶ್ರಯ ಪಡೆದಿದ್ದಾರೆ.

ಅರ್ಧ ಕರ್ನಾಟಕಕ್ಕೆ ನಾಳೆ ಯೆಲ್ಲೋ ಅಲರ್ಟ್​

ಈ ನಡುವೆ ಹವಾಮಾನ ಇಲಾಖೆ ನಾಳೆ ಅರ್ಧ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್​​ ಘೊಷಿಸಿದೆ. ಬೀದರ್​​, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವಿವಿಧೆಡೆ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:

ಬೈಂದೂರಿನ ಕೆರ್ಗಾಳುವಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ

ಉಡುಪಿ ಜಿಲ್ಲೆಯ ಬೈಂದೂರಿನ ಕೆರ್ಗಾಳುವಿನಲ್ಲಿ ನಿನ್ನೆ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ 160.5 ಮಿ.ಮೀ. ಮಳೆಯಾಗಿದೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ 1ರಲ್ಲಿ 155 ಮಿ.ಮೀ. , ದಕ್ಷಿಣ ಕನ್ನಡದ ಬೆಳ್ತಂಗಡಿಯ ಮುಂಡಾಜೆಯಲ್ಲಿ 98.5 ಮಿ.ಮೀ. , ಮಡಿಕೇರಿಯ ಪೆರಾಜೆ ಮತ್ತು ಯಾದಗಿರಿಯ ಸುರಪುರದ ಮಾಲಗತ್ತಿಯಲ್ಲಿ ತಲಾ 64.5 ಮಿ.ಮೀ. , ರಾಯಚೂರಿನ ಪೂರ್ತಿಪ್ಲಿಯಲ್ಲಿ 59 ಮಿ.ಮೀ., ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ದೊಡ್ಮನೆಯಲ್ಲಿ 57.5 ಮಿ.ಮೀ. ಮತ್ತು ಬೆಳಗಾವಿಯ ಬೆಳವಟ್ಟಿಯಲ್ಲಿ 56 ಮಿ.ಮೀ. ಮಳೆಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:40 pm, Mon, 20 July 26

Follow Us