AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ವರುಣಾರ್ಭಟ: ನಗರದ ಹಲವೆಡೆ ಧಾರಾಕಾರ ಮಳೆ; ಸಂಚಾರ ಅಸ್ತವ್ಯಸ್ತ

ಬೆಂಗಳೂರು ನಗರದ ಹಲವೆಡೆ ಸಂಜೆಯಾಗುತ್ತಿದ್ದಂತೆ ಧಾರಾಕಾರ ಮಳೆಯಾಗಿದೆ. ಶಾಂತಿನಗರ, ಕೋರಮಂಗಲ, ಜಯನಗರ, ಮೆಜೆಸ್ಟಿಕ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದೆ. ಮಳೆಯಿಂದಾಗಿ ವಾಹನ ಸಂಚಾರ ಮಂದಗತಿಯಲ್ಲಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಇನ್ನು ದಿಢೀರ್‌ ಮಳೆಗೆ ನಗರದ ಜನಜೀವನ ಅಸ್ತವ್ಯಸ್ತವಾಗಿದೆ.

ಬೆಂಗಳೂರಲ್ಲಿ ವರುಣಾರ್ಭಟ: ನಗರದ ಹಲವೆಡೆ ಧಾರಾಕಾರ ಮಳೆ; ಸಂಚಾರ ಅಸ್ತವ್ಯಸ್ತ
ಮಳೆ
ಗಂಗಾಧರ​ ಬ. ಸಾಬೋಜಿ
|

Updated on:Jun 13, 2026 | 6:18 PM

Share

ಬೆಂಗಳೂರು, ಜೂನ್​​ 13: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ (Karnataka) ಮುಂಗಾರು ಚುರುಕುಗೊಂಡಿದೆ. ಅದರಲ್ಲೂ ಸಿಲಿಕಾನ್​ ಸಿಟಿಯ ವಾತಾವರಣ ಸಂಪೂರ್ಣ ಬದಲಾಗಿದೆ. ಸಂಜೆಯಾಗುತ್ತಿದ್ದಂತೆ ನಗರದ ಹಲವೆಡೆ ಧಾರಾಕಾರ ಮಳೆ (Rain) ಆರಂಭವಾಗಿದ್ದು, ಸಾರ್ವಜನಿಕರ ಜನಜೀವನ ಮತ್ತು ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇನ್ನು ಮಳೆಯಿಂದಾಗಿ ಹಲವೆಡೆ ಟ್ರಾಫಿಕ್ ಜಾಮ್​​ ಕೂಡ ಉಂಟಾಗಿದೆ.

ಮುಖ್ಯಾಂಶಗಳು

  • ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ
  • ಮಳೆಯಿಂದ ಮಂದಗತಿಯಲ್ಲಿ ವಾಹನಗಳ ಸಂಚಾರ
  • ಫ್ಲೈಓವರ್, ಸ್ಕೈವಾಕ್ ಕೆಳಗೆ ಆಶ್ರಯ ಪಡೆದ ಸವಾರರು

ಎಲ್ಲೆಲ್ಲಿ ಮಳೆ?

ಮೆಜೆಸ್ಟಿಕ್, ಕಾರ್ಪೊರೇಷನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್, ಕೋರಮಂಗಲ, ವಿಲ್ಸನ್ ಗಾರ್ಡನ್, ಕೆ.ಆರ್. ಮಾರ್ಕೆಟ್, ಜಯನಗರ, ಜೆ.ಪಿ. ನಗರ, ಶಿವಾನಂದ ಸರ್ಕಲ್, ಗಾಂಧಿನಗರ ಬಜಾರ್, ಲಾಲ್ ಬಾಗ್, ಚಿಕ್ಕಪೇಟೆ ಸುತ್ತಮುತ್ತ ಮತ್ತು ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಮಳೆರಾಯ ಆರ್ಭಟಿಸಿದೆ. ಮಳೆಯಿಂದಾಗಿ ಗಾಂಧಿ ಬಜಾರ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಇದನ್ನೂ ಓದಿ: Karnataka Weather Forecast: ನಾಳೆಯಿಂದ ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣದ್ದೇ ಹಾವಳಿ!

ಮಳೆಯ ತೀವ್ರತೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನಗಳ ಸಂಚಾರ ಅತ್ಯಂತ ಮಂದಗತಿಯಲ್ಲಿ ಸಾಗುತ್ತಿರುವುದರಿಂದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ದಿಢೀರ್‌ ಆರಂಭವಾದ ಮಳೆಯಿಂದಾಗಿ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಆಶ್ರಯಕ್ಕಾಗಿ ಫ್ಲೈ ಓವರ್‌ಗಳು ಮತ್ತು ಬಸ್ ನಿಲ್ದಾಣಗಳ ಕೆಳಗೆ ಆಶ್ರಯ ಪಡೆದಿರುವುದು ಕಂಡುಬಂತು.

ಇನ್ನು ನಿನ್ನೆ ತಡರಾತ್ರಿ ಕೂಡ ನಗರದಲ್ಲಿ ಸುರಿದ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿತ್ತು. ಎಲೆಕ್ಟ್ರಾನಿಕ್ ಸಿಟಿಯಲ್ಲಿ ರಾತ್ರಿ ಸುರಿದ ಮಳೆಗೆ ಬೆಂಗಳೂರು-ಹೊಸೂರು ರಸ್ತೆಯಲ್ಲಿ ಸಂಪೂರ್ಣವಾಗಿ ನೀರು ನಿಂತಿತ್ತು. ರಸ್ತೆ ಮೇಲೆ ನೀರು ನದಿಯಂತೆ ಹರಿದಿತ್ತು. ಹೆಣ್ಣೂರು-ಬಾಗಲೂರು ರಸ್ತೆಯೂ ಜಲಾವೃತವಾಗಿತ್ತು. ನ್ಯೂ ಏರ್ ರ್ಪೋರ್ಟ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

ರೈತರ ಮೊಗದಲ್ಲಿ ಮಂದಹಾಸ

ಇತ್ತ ಬೆಂಗಳೂರು ದಕ್ಷಿಣ ಜಿಲ್ಲೆ ರೇಷ್ಮೆನಗರಿ ರಾಮನಗರದಲ್ಲೂ ಧಾರಾಕಾರ ಮಳೆ ಸುರಿದಿದೆ. ಅರ್ಧಗಂಟೆ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ವರದಿ: ನಟರಾಜ್​​ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:16 pm, Sat, 13 June 26

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ?
ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ?