ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ, ಜಾಗ್ರತೆಯಿಂದ ಇರಲು ಕೆಲ ಸಲಹೆ ಕೊಟ್ಟ ಹವಾಮಾನ ಇಲಾಖೆ

ಬಿರುಬಿಸಿಲಿಗೆ ಹೈರಾಣಾಗಿದ್ದ ಬೆಂಗಳೂರಿಗರಿಗೆ ಕಳೆದ ನಾಲ್ಕೈದು ದಿನಗಳಿಂದ ಆಗುತ್ತಿರುವ ಮಳೆ ಸಂತಸ ತಂದಿದೆ. ಆದರೆ, ಕೆಲವೆಡೆ ಅನಾಹುತಗಳಾಗಿದ್ದು, ಬಿಬಿಎಂಪಿ ಹೆಲ್ಪಲೈನ್​ ಕೂಡ ಸ್ಥಾಪನೆ ಮಾಡಿದೆ. ಅದರಂತೆ ಇಂದು (ಮೇ.09) ಕೂಡ ನಗರದಲ್ಲಿ ದಟ್ಟವಾಗಿ ಮೋಡ ಕವಿದ ವಾತಾವರಣವಿದೆ. ಹೀಗಾಗಿ ಗುಡುಗು ಸಹಿತ 40 ರಿಂದ 50 ಕೀ.ಮಿ ವೇಗದಲ್ಲಿ ಗಾಳಿಯೊಂದಿಗೆ ಮಳೆ ಬರಲಿದ್ದು, ಮಳೆಯಿಂದ ಜನರು ಜಾಗ್ರತೆ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. 

ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ, ಜಾಗ್ರತೆಯಿಂದ ಇರಲು ಕೆಲ ಸಲಹೆ ಕೊಟ್ಟ ಹವಾಮಾನ ಇಲಾಖೆ
ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ
Updated By: ಕಿರಣ್ ಹನುಮಂತ್​ ಮಾದಾರ್

Updated on: May 09, 2024 | 6:52 PM

ಬೆಂಗಳೂರು, ಮೇ.09: ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರು ನಗರದಲ್ಲಿ ಮಳೆ(Bengaluru Rain)ಯ ಅಬ್ಬರ ಜೋರಾಗಿದ್ದು, ಇಂದು (ಮೇ.09) ಕೂಡ ನಗರದಲ್ಲಿ ದಟ್ಟವಾಗಿ ಮೋಡ ಕವಿದ ವಾತಾವರಣವಿದೆ. ಹೀಗಾಗಿ ಗುಡುಗು ಸಹಿತ 40 ರಿಂದ 50 ಕೀ.ಮಿ ವೇಗದಲ್ಲಿ ಗಾಳಿಯೊಂದಿಗೆ ಮಳೆ ಬರಲಿದ್ದು, ಮಳೆಯಿಂದ ಜನರು ಜಾಗ್ರತೆ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.  ಜೊತೆಗೆ ಇನ್ನೂ ಮೇ. 12 ನೇ ತಾರೀಖಿನವರೆಗೂ ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆಯಿದೆ ಎಂದು ಮೂನ್ಸುಚನೆ ನೀಡಿದೆ.

ಸಾರ್ವಜನಿಕರಿಗೆ ಹವಾಮಾನ ಇಲಾಖೆ ಕೆಲ ಸಲಹೆ

ಮಳೆ ಸಂದರ್ಭದಲ್ಲಿ ಅವಘಡ ಸಂಭವ ಹಿನ್ನಲೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಕೆಲ ಸಲಹೆಗಳನ್ನು ಕೊಟ್ಟಿದೆ.

  • ಮನೆಯೊಳಗೆ ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಇರಬೇಕು.
  • ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ ಸುರಕ್ಷಿತ ಆಶ್ರಯವನ್ನು ತೆಗೆದುಕೊಳ್ಳಿ.
  • ಮರಗಳ ಕೆಳಗೆ ಆಶ್ರಯ ಪಡೆಯಬೇಡಿ.
  • ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ.
  • ಎಲೆಕ್ನಿಕಲ್/ಎಲೆಕ್ಟ್ರಾನಿಕ್ ಉಪಕರಣಗಳನ್ನು ತಕ್ಷಣವೇ ಅನ್‌ಪ್ಲಗ್ ಮಾಡಿ.
  • ಮಳೆ ವೇಳೆ ತಕ್ಷಣ ಜಲಮೂಲಗಳಿಂದ ಹೊರ ಬರುವಂತೆ ಸೂಚನೆ.
  • ವಿದ್ಯುಚ್ಛಕ್ತಿಯನ್ನು ನಡೆಸುವ ಎಲ್ಲಾ ವಸ್ತುಗಳಿಂದ ದೂರವಿರಿ.
  • ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ಹಲವೆಡೆ ಅನಾಹುತ; ಪಾಲಿಕೆ ಹೆಲ್ಪ್ ಲೈನ್​ಗೆ ಬಂತು ನೂರಾರು ದೂರುಗಳು

ಏರ್ಪೋಟ್​ನಲ್ಲಿ ಮಳೆಯ ಸಿಂಚನ

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ತುಂತುರು ಮಳೆ ಆರಂಭವಾಗಿದ್ದು, ಮಳೆಯಿಂದಾಗಿ ಕೆಂಪೇಗೌಡ ಏರ್ಪೋಟ್ ಕೂಲ್ ಆಗಿದೆ. ಬೆಳಗಿನಿಂದ ಬಿಸಿಲಿಗೆ ಕಂಗೆಟ್ಟಿದ್ದ ಏರ್ಪೋಟ್ ಪ್ರಯಾಣಿಕರು, ಟ್ಯಾಕ್ಸಿ ಚಾಲಕರು ಮಳೆ ಆಗಮನದಿಂದ ಖುಷ್​ ಆಗಿದ್ದು, ಏರ್ಪೋಟ್ ವಾತಾವರಣ ತಂಪಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:48 pm, Thu, 9 May 24