Bengaluru Rain: ರಾಜಧಾನಿಯಲ್ಲಿ ಸುರಿದ ಭಾರೀ ಮಳೆಗೆ ಕೆರೆಯಂತಾದ ರಸ್ತೆಗಳು, ವಾಹನ ಸಂಚಾರ ಅಸ್ತವ್ಯಸ್ತ

ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆಯಿಂದ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುತ್ತಿದ್ದಾರೆ.

Bengaluru Rain: ರಾಜಧಾನಿಯಲ್ಲಿ ಸುರಿದ ಭಾರೀ ಮಳೆಗೆ ಕೆರೆಯಂತಾದ ರಸ್ತೆಗಳು, ವಾಹನ ಸಂಚಾರ ಅಸ್ತವ್ಯಸ್ತ
ಸಂಗ್ರಹ ಚಿತ್ರ
Edited By: ವಿವೇಕ ಬಿರಾದಾರ

Updated on: Oct 15, 2022 | 9:05 PM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇಂದು (ಅ. 15) ಸಂಜೆಯಿಂದ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು (Rain), ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುತ್ತಿದ್ದಾರೆ. ನಗರದಲ್ಲಿ ಇನ್ನೂ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದು ಯಲ್ಲೋ ಅಲರ್ಟ್​​ ಘೋಷಣೆ ಮಾಡಿದ್ದಾರೆ. ತಗ್ಗುಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಕೆರೆಯಂತಾದ ರಸ್ತೆಗಳು

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಸಂಜೆಯಿಂದ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿವೆ. ಕಾರ್ಪೊರೇಷನ್, ಶಾಂತಿನಗರ ಜೋಡಿ ರಸ್ತೆ, ಎಂ.ಜಿ.ರಸ್ತೆ, K.R.ಮಾರ್ಕೆಟ್​, ಮೈಸೂರು ರಸ್ತೆ ಸೇರಿದಂತೆ ಹಲವೆಡೆ ಮಳೆಯಾಗಿದೆ. ಶಾಂತಿನಗರದ ಜೋಡಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಝರಿಯಂತೆ ಹರಿಯುತ್ತಿರುವ ನೀರಿನಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ. ಕೆ.ಆರ್ ಮಾರ್ಕೆಟ್ ಬಳಿ ಅಧಿಕ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ಮಳೆಯಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.

ಕಾಡಂಚಿನ ಗ್ರಾಮದ ಜನರ ನಿದ್ದೆಗೆಡಿಸಿದ ವರುಣ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಅಧಿಕ ಮಳೆಯಿಂದ ಗ್ರಾಮಸ್ಥರ ಪರೀಸ್ಥಿತಿ ಹೇಳತೀರದಂತಾಗಿದೆ. ಗ್ರಾಮದ ಬೀದಿಯಲ್ಲಿ ನೀರು ಹರಿಯುತ್ತಿದ್ದು, ಮನೆಯಿಂದ ಹೊರ ಬರಲು ಜನರು ಪರದಾಡುತ್ತಿದ್ದಾರೆ.

ಉಕ್ಕಿ ಹರಿದ ಹಲವು ಕೆರೆಗಳು, ಹಲವು ರಸ್ತೆಗಳ ಸಂಪರ್ಕ ಕಡಿತ: ಚಾಮರಾಜನಗರ ತಾಲೂಕಿನಲ್ಲಿ ಹಲವು ಕೆರೆಗಳು ಉಕ್ಕಿ ಹರಿದಿದ್ದು, ಹಲವು ರಸ್ತೆಗಳ ಸಂಪರ್ಕ ಕಡಿತವಾಗಿವೆ. ಚಾಮರಾಜನಗರ ತಾಲೂಕಿನ ಬ್ಯಾಡಮೂಡ್ಲು-ಕೋಡಿ ಮೊಳೆ ಸಂಪರ್ಕಿಸುವ ರಸ್ತೆಯಲ್ಲಿ ಕೆರೆ ನೀರು ಉಕ್ಕಿ ಹರಿಯುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ.

ಕೈಗೆ ಬಂದಿದ್ದು, ಬಾಯಿಗೆ ಬರದಂತಾದ ಬೆಳೆ

ಬೀದರ: ಗಡೀ ಜಿಲ್ಲೆ ಬೀದರ್​ನಲ್ಲಿ ಕಳೆದು ಮೂರು ದಿನದಿಂದ ‌ಸುರಿಯುತ್ತಿರುವ ಮಳೆಯಿಂದಾಗಿ ಹೊಲ-ಗದ್ದೆಗಳು ಜಲಾವೃತಗೊಂಡಿದ್ದು, ರೈತನಿಗೆ ದಿಕ್ಕೆ ತೋಚದಂತಾಗಿದೆ. ನಿರಂತರ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಉದ್ದು, ಸೋಯಾ, ಹೆಸರು ಬೆಳೆ ನೀರಿನಲ್ಲಿ ಮುಳುಗಿದ್ದು ಕಟಾವು ಮಾಡದಂತಾ ಸ್ಥಿತಿ ಎದುರಾಗಿದೆ.

ಇನ್ನೂ ಎರಡು ದಿನ ಮಳೆ ಬರುವ ಸಾಧ್ಯತೆಯಿದ್ದು ಇನ್ನೇರಡು ದಿನ ಮಳೆ ಸುರಿದರೆ ನೀರಿನಲ್ಲಿ ಮುಳುಗಿರುವ ಬೆಳೆ ಮೊಳಕೆಯೊಡೆದು ರೈತರು ನಷ್ಟಕ್ಕೆ ಒಳಗಾಗುತ್ತಾರೆ. ಜೊತೆಗೆ ತಿಂಗಳ ಹಿಂದೆ ಸುರಿದ‌ ಮಳೆಯಿಂದಾಗಿ ಜಿಲ್ಲೆಯ 23 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:00 pm, Sat, 15 October 22

Loading...
Unable to load recommendations.
Follow Us