AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರು ರಸ್ತೆಗಳಲ್ಲಿ ಕಡಿಮೆಯಾಗದ ನೀರು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಳೆಯಿಂದಾಗಿ ಸರ್ಜಾಪುರ, ಬೆಳ್ಳಂದೂರು ಮಾರತಹಳ್ಳಿ, ಔಟರ್ ರಿಂಗ್​ರೋಡ್​ಗಳಲ್ಲಿ ನೀರು ನಿಂತಿದೆ.

Bengaluru Rains: ಬೆಂಗಳೂರು ರಸ್ತೆಗಳಲ್ಲಿ ಕಡಿಮೆಯಾಗದ ನೀರು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ನೀರಿನಿಂದ ಸಮಸ್ಯೆಯಾಗಿದೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 06, 2022 | 9:18 AM

Share

ಬೆಂಗಳೂರು: ಭಾರೀ ಮಳೆಯಿಂದಾಗಿ ನಗರದ (Heavy Rain in Bengaluru) ರಸ್ತೆಗಳ ಮೇಲೆ ನೀರು ನಿಂತಿದೆ. ನೀರು ಕಡಿಮೆಯಾಗದ ಹಿನ್ನೆಲೆಯಲ್ಲಿ ರಸ್ತೆಗಳ ಮೇಲೆ ಸಂಚಾರ ದುಸ್ತರವಾಗಿದೆ. ಇಂದೂ ಮಳೆಯಾಗಬಹುದು ಎಂಬ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ನಗರದ ಮಹದೇವಪುರ, ಬೊಮ್ಮನಹಳ್ಳಿ, ಕೃಷ್ಣರಾಜಪುರ (ಕೆಆರ್ ಪುರಂ) ಮತ್ತು ಮಂಡೂರು ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ. ಕೆ.ಆರ್.ಪುರಂ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಮಾರತ್ತಹಳ್ಳಿ-ಸರ್ಜಾಪುರ ರಿಂಗ್​ರೋಡ್ ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ಇಂದು ರಿಂಗ್​ರೋಡ್​ನಲ್ಲಿ ಲಘು ವಾಹನಗಳಿಗೆ ನಿಷೇಧ ವಿಧಿಸಲಾಗಿದೆ. ಬೆಂಗಳೂರಿನ ಔಟರ್​ ರಿಂಗ್​​ ರೋಡ್​ನಲ್ಲಿ ಸಿಲುಕಿದ್ದ ಬೆಂಜ್ ಕಾರ್​ನಲ್ಲಿ ಮೂವರು ಹೊರಬರಲು ಪರದಾಡಿದರು. ಸಹಾಯ ಮಾಡುವಂತೆ ಸವಾರರು ಕೂಗುತ್ತಿರುವ ಘಟನೆ ಮಾರತ್ತಹಳ್ಳಿಯ ಔಟರ್​ ರಿಂಗ್​ ರೋಡ್​​ನಲ್ಲಿ ನಡೆದಿದೆ.

ಮಳೆಯಿಂದಾಗಿ ಸರ್ಜಾಪುರ, ಬೆಳ್ಳಂದೂರು ಮಾರತಹಳ್ಳಿ, ಔಟರ್ ರಿಂಗ್​ರೋಡ್​ಗಳಲ್ಲಿ ನೀರು ನಿಂತಿದೆ. ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ಇಂದೂ ಸಹ ಟ್ರಾಫಿಕ್ ಜಾಮ್ ಆಗಬಹುದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ವಿವಿಧ ಬಡಾವಣೆಗಳಲ್ಲಿ ಮುಂದುವರಿದ ಪರದಾಟ

ಬೆಂಗಳೂರಿನ ಸನ್ನಿ ಬ್ರೂಕ್ಸ್ ಲೇಔಟ್​ ಸಂಪೂರ್ಣವಾಗಿ ಜಲಾವೃತವಾಗಿದೆ. ನೀರಿನ ಪ್ರಮಣ ಇಂದು ಮತ್ತಷ್ಟು ಹೆಚ್ಚಾಗಿದ್ದು, ಜನರು ಲೇಔಟ್​ನಿಂದ ಹೊರಬರಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಲೇಔಟ್ ಒಳಭಾಗದಲ್ಲಿ ಮನೆಗಳ ಮುಂದೆ ನಿಲ್ಲಿಸಿರುವ ಐಷಾರಾಮಿ ಕಾರುಗಳು ನೀರಿನಲ್ಲಿ ತೇಲುತ್ತಿವೆ. ಕೆಲವೆಡೆ ಮನೆಯೊಳಗಿನ ಸೋಪಾಗಳು ತೇಲಿ ಹೊರಗೆ ಬಂದಿವೆ. ತುರ್ತು ಕೆಲಸಗಳಿಗೆ ಟ್ರ್ಯಾಕ್ಟರ್ ಮೂಲಕ ನಿವಾಸಿಗಳು ಸಂಚರಿಸುತ್ತಿದ್ದಾರೆ. ಸರ್ಜಾಪುರ ರಸ್ತೆಯ ದಿ ಕಂಟ್ರೀಸೈಡ್ ಅಪಾರ್ಟ್​ಮೆಂಟ್ ಸಂಪೂರ್ಣ ಜಲಾವೃತಗೊಂಡಿದೆ. ರೈನ್ ಬ್ರೂ ಡ್ರೈವ್ ಬಡಾವಣೆ ಪಕ್ಕದ ಕಂಟ್ರಿಸೈಡ್ ಅಪಾರ್ಟಮೆಂಟ್​ನಲ್ಲಿ ಸುಮಾರು 5 ಅಡಿಯಷ್ಟು ನೀರು ನಿಂತಿದೆ.

ಇಕೋಸ್ಪೇಸ್ ಬಳಿಯ ಮಾರತಹಳ್ಳಿ-ಸರ್ಜಾಪುರ ಮಾರ್ಗದ ಎರಡೂ ಬದಿಯ ರಸ್ತೆ ಜಲಾವೃತಗೊಂಡಿದೆ. ನಿನ್ನೆ ಒಂದು ಭಾಗದ ರಸ್ತೆ ಮಾತ್ರ ಮಳೆ ನೀರಿನಿಂದ ಮುಳುಗಿತ್ತು. ಇಂದು ಎರಡು ಬದಿಯ ರಸ್ತೆ ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ರಭಸವಾಗಿ ಹರಿಯುತ್ತಿದೆ. ವಿಭೂತಿಪುರ ಕೆರೆ, ಸಾವಳಕೆರೆಗಳು ಭರ್ತಿಯಾಗಿರುವುದರಿಂದ ನೀರು ರಸ್ತೆಗೆ ನುಗ್ಗುತ್ತಿದೆ.

Published On - 9:15 am, Tue, 6 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ