AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹಲವೆಡೆ ಮಳೆ: ದಿಢೀರ್ ಬಂದ ಮಳೆಗೆ ವಾಹನ ಸವಾರರು ಹೈರಾಣು

ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ. ಮೆಜೆಸ್ಟಿಕ್, ವಿಧಾನಸೌಧ ಸೇರಿದಂತೆ ನಗರದ ಹಲವೆಡೆ ಮಳೆ ಆಗಿದೆ. ಏಕಾಏಕಿ ಬಂದ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ವಿಧಾನಸೌಧದ ಬಳಿ ಡಾ. ಅಂಬೇಡ್ಕರ್ ಜಯಂತಿಯ ಹಿನ್ನೆಲೆಯಲ್ಲಿ ಹಾಕಲಾಗಿದ್ದ ಪೆಂಡಾಲ್‌ನಲ್ಲಿ ಜನರು ಆಶ್ರಯ ಪಡೆದರು. ಇತ್ತ ಹಲವು ಜಿಲ್ಲೆಗಳಲ್ಲಿ ಕೂಡ ಮಳೆ ಆಗಿದೆ.

ಬೆಂಗಳೂರಿನ ಹಲವೆಡೆ ಮಳೆ: ದಿಢೀರ್ ಬಂದ ಮಳೆಗೆ ವಾಹನ ಸವಾರರು ಹೈರಾಣು
ಬೆಂಗಳೂರಿನಲ್ಲಿ ಮಳೆ
Follow us
Shivaraj
| Updated By: ಗಂಗಾಧರ​ ಬ. ಸಾಬೋಜಿ

Updated on:Apr 14, 2025 | 6:23 PM

ಬೆಂಗಳೂರು, ಏಪ್ರಿಲ್ 14: ಮಳೆಗಾಲ ಆರಂಭಕ್ಕೂ ಮುನ್ನವೇ ಮಳೆರಾಯನ (rain) ಆರ್ಭಟ ಶುರುವಾಗಿದೆ. ಕರ್ನಾಟಕದಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ಬೆಂಗಳೂರು ಸೇರಿದಂತೆ ಕೆಲವೆಡೆ ಮಳೆ ಸುರಿದಿದೆ. ಇಂದು ಬೆಂಗಳೂರಿನಲ್ಲಿ (bangaluru) ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿತ್ತು. ಮಧ್ಯಾಹ್ನದಿಂದ ನಗರದೆಲ್ಲೆಡೆ ಮೋಡ ಕವಿದ ವಾತಾವರಣವಿತ್ತು. ಇದೀಗ ನಗರದ ಹಲವೆಡೆ ಧಾರಾಕಾರ ಮಳೆ ಆಗಿದೆ.

ಎಲ್ಲೆಲ್ಲಿ ಮಳೆ? 

ವಿಧಾನಸೌಧ, ಕೆ.ಆರ್ ಸರ್ಕಲ್, ಕಾರ್ಪೊರೇಷನ್, ಶಾಂತಿ ನಗರ, ಮೆಜೆಸ್ಟಿಕ್, ಮೈಸೂರ್ ಬ್ಯಾಂಕ್, ಟೌನ್​ಹಾಲ್, ರಿಚ್ಮಂಡ್​ ಟೌನ್, ಜಯನಗರ ಸೇರಿದಂತೆ ಹಲವೆಡೆ ಮಳೆ ಆಗಿದೆ. ಡಾ.ಅಂಬೇಡ್ಕರ್ ಜಯಂತಿ ಹಿನ್ನೆಲೆ ವಿಧಾನಸೌಧದ ಬಳಿ ಹಾಕಲಾಗಿದ್ದ ಪೆಂಡಾಲ್​ ಕೆಳಗೆ ಜನರು ಆಶ್ರಯ ಪಡೆದಿದ್ದಾರೆ. ಇನ್ನು ರಜೆ ಹಿನ್ನಲೆ ವಿಧಾನಸೌಧ, ಕಬ್ಬನ್ ಪಾರ್ಕ್ ನೋಡಲು ಬಂದಿದ್ದ ಸಾರ್ವಜನಿಕರು ಮಳೆಯಿಂದ ಪರದಾಡಿದರು.

ಹಾಸನದಲ್ಲಿ ಭಾರಿ ಮಳೆ: ಧರೆಗುರುಳಿದ ಮರಗಳು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೊಮ್ಮನಕೆರೆ, ಹರಗರಹಳ್ಳಿ, ವಳಲಹಳ್ಳಿ ಹಾಗೂ ಕರಡಿಗಾಲ ಸೇರಿದಂತೆ ಹಲವೆಡೆ ಆಲಿಕಲ್ಲು ಮಳೆ ಆಗಿದೆ. ಭಾರಿ ಗಾಳಿ ಮಳೆಯಿಂದ ಹಲವು ಕಡೆ ಮರಗಳು ಧರೆಗುರುಳಿವೆ. ಚಿಕ್ಕಮಗಳೂರು ಭಾಗದಲ್ಲಿ ಕೂಡ ಭಾರಿ ಮಳೆ ಆಗಿದೆ. ಕೊಪ್ಪ, ಕಳಸ, ಮೂಡಿಗೆರೆ ತಾಲೂಕಿನಲ್ಲಿ ಮಳೆ‌ ಅಬ್ಬರಿಸಿದೆ.

ಇದನ್ನೂ ಓದಿ
Image
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
Image
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
Image
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಇದನ್ನೂ ಓದಿ: Karnataka Weather: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯ ಮುನ್ಸೂಚನೆ

ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿದ್ದು, ಕಳಸ‌ ತಾಲೂಕಿನ ಹಳುವಳ್ಳಿ ಬಳಿ‌ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಬಿದಿದ್ದೆ. ಹೊರನಾಡು ಸಂಪರ್ಕಿಸುವ ರಸ್ತೆ ಬಂದ್ ಆಗಿದೆ. ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಸದ್ಯ ಮಳೆ‌ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ.

ಕೊಡಗಿನಲ್ಲಿ ಆಲಿಕಲ್ಲು ಮಳೆ: ಕಾಫಿ ಬೆಳೆಗಾರರ ಮೊಗದಲ್ಲಿ ಸಂತಸ

ಕೊಡಗು ಜಿಲ್ಲೆಯ ಹಲವೆಡೆ ಕೂಡ ಧಾರಾಕಾರ ಮಳೆ ಆಗಿದೆ. ಗುಡುಗು, ಸಿಡಿಲು ಸಹಿತ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಡಿಕೇರಿ ತಾಲೂಕಿನ ಮರಗೋಡು, ಕತ್ತಲೆಕಾಡು, ಹೊಸ್ಕೇರಿ, ಮೂರ್ನಾಡು, ಕೊಂಡಂಗೇರಿ ಸುತ್ತಮುತ್ತ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ ಸುರಿದಿದೆ. ಉತ್ತಮ ಮಳೆಯಿಂದ ಕಾಫಿ ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:45 pm, Mon, 14 April 25

ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್