AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಲ್ಲಿ ಧಾರಾಕಾರ ಮಳೆಗೆ ವಾಹನ ಸವಾರರು ಹೈರಾಣ, 7 ಜಿಲ್ಲೆಗಳಲ್ಲಿ ನಾಳೆ ಭಾರಿ ವರ್ಷಧಾರೆಯ ಮುನ್ಸೂಚನೆ

ಬೆಂಗಳೂರಿನಲ್ಲಿ ದಿಢೀರ್ ಸುರಿದ ಧಾರಾಕಾರ ಮಳೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸಿದ್ದಾರೆ. ಇದರ ನಡುವೆಯೇ ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿಯಲ್ಲಿ ನಿನ್ನೆ ದಾಖಲೆಯ ಮಳೆಯಾಗಿದೆ.

Bengaluru Rain: ಬೆಂಗಳೂರಲ್ಲಿ ಧಾರಾಕಾರ ಮಳೆಗೆ ವಾಹನ ಸವಾರರು ಹೈರಾಣ, 7 ಜಿಲ್ಲೆಗಳಲ್ಲಿ ನಾಳೆ ಭಾರಿ ವರ್ಷಧಾರೆಯ ಮುನ್ಸೂಚನೆ
ಮಳೆImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Aug 04, 2026 | 7:44 PM

Share

ಮುಖ್ಯಾಂಶಗಳು

  • ಬೆಂಗಳೂರಿನ ಹಲವೆಡೆ ಅಬ್ಬರಿಸಿದ ವರುಣ
  • ಏಕಾಏಕಿ ಮಳೆಗೆ ವಾಹನ ಸವಾರರು ಹೈರಾಣ
  • ಹಲವು ಜಿಲ್ಲೆಗಲ್ಲಿಯೂ ಮಳೆಯ ಮುನ್ಸೂಚನೆ

ಬೆಂಗಳೂರು, ಆಗಸ್ಟ್​​ 04: ಸಿಲಿಕಾನ್ ಸಿಟಿ ಬೆಂಗಳೂರಿಗೆ (Bengaluru) ಮಳೆರಾಯ ಸರ್ಪ್ರೈಸ್ ಎಂಟ್ರಿ ಕೊಟ್ಟಿದ್ದು, ಕೆ. ಆರ್. ಮಾರ್ಕೆಟ್, ಟೌನ್ ಹಾಲ್, ಕೆ. ಆರ್. ಸರ್ಕಲ್, ವಿಧಾನಸೌಧ, ಎಂ.ಜಿ. ರೋಡ್, ಶಾಂತಿನಗರ ಸುತ್ತಮುತ್ತ ಭಾರಿ ಮಳೆಯಾಗಿದೆ. ಕೆ.ಆರ್. ಮಾರ್ಕೆಟ್ ಸುತ್ತಮುತ್ತ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಆದ ಪರಿಣಾಮ ವಾಹನ ಸವಾರರು ತೀವ್ರ ಪರದಾಡಿದ್ದು, ಟ್ರಾಫಿಕ್​​ನಲ್ಲಿ ಸಿಲುಕಿ ಆಂಬುಲೆನ್ಸ್ ಕೂಡ ಸಿಲುಕಿಕೊಂಡ ಪ್ರಸಂಗ ನಡೆದಿದೆ.

7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಗಳಲ್ಲಿ ನಾಲೆ ಧಾರಾಕಾರ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಸಾಧಾರ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಕೆಆರ್‌ಎಸ್, ಆಲಮಟ್ಟಿಗೆ ಬೃಹತ್‌ ಒಳಹರಿವು! ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ

ಉಡುಪಿಯಲ್ಲಿ ದಾಖಲೆಯ ಮಳೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿಯಲ್ಲಿ ನಿನ್ನೆ ದಾಖಲೆಯ ಅಂದರೆ ಬರೋಬ್ಬರಿಬ 189 ಮಿ.ಮೀ. ಮಳೆಯಾಗಿದೆ. ಬೆಳಗಾವಿಯ ಖಾನಾಪುರದ ಪಾರ್ವಾಡ್​​ನಲ್ಲಿ 174 ಮಿ.ಮೀ, ತೀರ್ಥಹಳ್ಳಿಯ ಆಗುಂಬೆಯಲ್ಲಿ 170 ಮಿ.ಮೀ, ಮಂಗಳೂರಿನ ಶಿರ್ಥಡಿಯಲ್ಲಿ 133.5 ಮಿ.ಮೀ ಮತ್ತು ಉತ್ತರ ಕನ್ನಡದ ಸಿದ್ದಾಪುರದ ದೊಡ್ಮನೆಯಲ್ಲಿ 124.5 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.​​

Published On - 7:28 pm, Tue, 4 August 26

Follow Us
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ