Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore rain: ಬೆಂಗಳೂರಿನಲ್ಲಿ ಇಂದು ಕೂಡ ಮುಂದುವರೆದ ಮಳೆ: ನಗರದ ಹಲವೆಡೆ ಸಾಧಾರಣ ವರ್ಷಧಾರೆ

ರಾಜ್ಯ ರಾಜಧಾನಿಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದ್ದು, ಗುರುವಾರ ಕೂಡ ಮಳೆ ಮುಂದುವರೆದಿದೆ. ಬೆಂಗಳೂರಿನ ಹಲವೆಡೆ ಸಾಧಾರಣ ಮಳೆ ಆಗಿದೆ.      

Bangalore rain: ಬೆಂಗಳೂರಿನಲ್ಲಿ ಇಂದು ಕೂಡ ಮುಂದುವರೆದ ಮಳೆ: ನಗರದ ಹಲವೆಡೆ ಸಾಧಾರಣ ವರ್ಷಧಾರೆ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:May 04, 2023 | 6:00 PM

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಳೆದ ಎರಡು ದಿನಗಳಿಂದ ಮಳೆ (Bengaluru Rains) ಆಗುತ್ತಿದ್ದು, ಗುರುವಾರ ಕೂಡ ಮಳೆ ಮುಂದುವರೆದಿದೆ. ಮೇ 6ರ ವರೆಗೂ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆ ಬೆಂಗಳೂರಿನ ಹಲವೆಡೆ ಸಾಧಾರಣ ಮಳೆ ಆಗಿದೆ. ರಸ್ತೆ, ತಗ್ಗು ಪ್ರದೇಶಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿತ್ತು. ನಗರದ ರಿಚ್​ಮಂಡ್ ರಸ್ತೆ, ಕಾರ್ಪೊರೇಷನ್ ವೃತ್ತ, ನಂಜಪ್ಪ ಸರ್ಕಲ್ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿದ್ದು, ವಾಹನ ಸವಾರರು ತೊಂದರೆ ಅನುಭವಿಸಿದ್ದಾರೆ. ಫ್ಲೈಓವರ್, ಸ್ಕೈವಾಕ್​ ಕೆಳಗೆ ಬೈಕ್​ ನಿಲ್ಲಿಸಿ ಸವಾರರು ಆಶ್ರಯ ಪಡೆದಿದ್ದಾರೆ.

ಶಾಂತಿನಗರ, ಮೆಜೆಸ್ಟಿಕ್, ರಾಜಾಜಿನಗರ, ಜಯನಗರ, ವಿಜಯನಗರ, ಚಂದ್ರಲೇಔಟ್, ನಂದಿನಿ ಲೇಔಟ್, ಬಸವೇಶ್ವರ ನಗರ, ಕಾಮಾಕ್ಷಿಪಾಳ್ಯ, ನಾಗರಬಾವಿ, ಬನಶಂಕರಿ, ಬಸವನಗುಡಿ, ಶ್ರೀನಗರ, ಗಿರಿನಗರ, ಹೆಬ್ಬಾಳ, ಆರ್.ಟಿ ನಗರ, ಜಯನಗರ, ಮತ್ತಿಕೆರೆ ಸೇರಿದಂತೆ ಹಲವೆಡೆ ಮಳೆ ಆಗಿದೆ. ಕೆಲಸ ಮುಗಿಸಿ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರರು ಪರದಾಡಿದ್ದಾರೆ.

ಇದನ್ನೂ ಓದಿ:  ಮಾಂಸ ಪ್ರಿಯರ ಗಮನಕ್ಕೆ: ನಾಳೆ (ಮೇ 5) ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

ನಗರದಲ್ಲಿ ಮುಂದಿನ ಕೆಲ ದಿನಗಳು ಮೋಡ ಕವಿದ ವಾತಾವರಣ

ನಗರದಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನವು 32-33 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿರುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಮಧ್ಯೆ, ವರ್ಷದ ಮೊದಲ ಚಂಡಮಾರುತ ಮೋಚಾ ಈ ವಾರ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇದರಿಂದ ನಗರದ ವಾತಾವರಣದ ಮೇಲೂ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.

ಕೋಲಾರದಲ್ಲಿ ಜೋರು ಮಳೆ: ಆಸ್ಪತ್ರೆಯ ಪ್ರಯೋಗಾಲಯಕ್ಕೆ ನುಗ್ಗಿದ ಮಳೆ‌ ನೀರು

ಬೆಂಗಳೂರಿನಲ್ಲಿ ಮಾತ್ರವಲ್ಲದೆ, ಕೋಲಾರದಲ್ಲಿಯೂ ಸಹ ಜೋರು ಮಳೆ ಸುರಿದಿದ್ದು, ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯ ಎಸ್‌ಎನ್​ಆರ್ ಆಸ್ಪತ್ರೆಯ ತಗ್ಗು ಪ್ರದೇಶದ ಪ್ರಯೋಗಾಲಯಕ್ಕೆ ಮಳೆ‌ ನೀರು ನುಗ್ಗಿದೆ. ಮಳೆ ನೀರನ್ನು ಆಸ್ಪತ್ರೆ ಸಿಬ್ಬಂದಿಗಳು ಹೊರ ಹಾಕುತ್ತಿದ್ದಾರೆ. ಪ್ರಯೋಗಾಲಯಕ್ಕೆ ಮಳೆ ನೀರು ನುಗ್ಗಿದ ಪರಿಣಾಮ ದುಬಾರಿ ಯಂತ್ರಗಳು ಹಾಳಾಗುವ ಆತಂಕ ಉಂಟಾಗಿದೆ. ಮಳೆ ಬಂದಾಗಲೆಲ್ಲಾ ಹೀಗೆ ನೀರು ನುಗ್ಗಿ ಅವಾಂತರ ಉಂಟಾಗುತ್ತಿದ್ದು, ಸರಿಪಡಿಸುವಂತೆ ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:36 pm, Thu, 4 May 23

ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ