AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain Today: ಬೆಂಗಳೂರಿನಲ್ಲಿ ತಡರಾತ್ರಿ ಭಾರಿ ಮಳೆ; ಇನ್ನೂ 4 ದಿನ ಮಳೆಯ ಮುನ್ಸೂಚನೆ

Karnataka Rains: ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯೂ ಮಳೆ ಸುರಿದಿದೆ. ನಗರದ ಕೆಆರ್​ ಮಾರುಕಟ್ಟೆ, ಜೆಸಿ ರಸ್ತೆ, ಮೆಜೆಸ್ಟಿಕ್, ರಾಜರಾಜೇಶ್ವರಿ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಮತ್ತೊಂದೆಡೆ, ರಾಜ್ಯದಾದ್ಯಂತ ಮಳೆಯಾಗುತ್ತಿದೆ. ಭಾನುವಾರ ರಾತ್ರಿ ಎಲ್ಲೆಲ್ಲಿ ಮಳೆಯಾಗಿದೆ? ಮಳೆಯಿಂದ ಎಲ್ಲಿ ಏನು ಅನಾಹುತ ಸಂಭವಿಸಿದೆ ಎಂಬ ವಿವರ ಇಲ್ಲಿದೆ.

Bengaluru Rain Today: ಬೆಂಗಳೂರಿನಲ್ಲಿ ತಡರಾತ್ರಿ ಭಾರಿ ಮಳೆ; ಇನ್ನೂ 4 ದಿನ ಮಳೆಯ ಮುನ್ಸೂಚನೆ
ಬಾಗಲಕೋಟೆಯಲ್ಲಿ ಭಾನುವಾರ ಗಾಳಿ ಸಹಿತ ಸುರಿದ ಮಳೆ
ಗಣಪತಿ ಶರ್ಮಾ
|

Updated on:May 13, 2024 | 6:59 AM

Share

ಬೆಂಗಳೂರು, ಮೇ 13: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿದಿನ (Bengaluru Rains) ಮಳೆಯಾಗುತ್ತಿದೆ. ಭಾನುವಾರ ತಡರಾತ್ರಿ ಸುರಿದ ಮಳೆ ನಗರದ ಹಲವೆಡೆ ಅವಾಂತರ ತಂದಿಟ್ಟಿದೆ. ಕೆಆರ್​ ಮಾರುಕಟ್ಟೆ, ಜೆಸಿ ರಸ್ತೆ, ಮೆಜೆಸ್ಟಿಕ್, ಗಿರಿನಗರ, ಶ್ರೀನಿವಾಸನಗರ, ಹೊಸಕೆರೆಹಳ್ಳಿ, ರಾಜರಾಜೇಶ್ವರಿ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಗುಡುಗು, ಸಹಿತ ಮಳೆಯಿಂದಾಗಿ ಕೆಲ ಏರಿಯಾಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಗಿದೆ. ಭಾನುವಾರ ರಾತ್ರಿಯೂ ರಾಜರಾಜೇಶ್ವರಿ ನಗರ (RR Nagar) ಗೇಟ್‌ಬಳಿಯ ರಸ್ತೆ ಜಲಾವೃತವಾಗಿ ವಾಹನ ಸವಾರರು ಪರತಪಿಸುವಂತಾಯಿತು.

ಚಿಕ್ಕಮಗಳೂರಿನಲ್ಲಿ ಮರಬಿದ್ದು ಮಹಿಳೆ ಸಾವು

ಚಿಕ್ಕಮಗಳೂರಿನಲ್ಲಿ ಕೂಡ ಕಳೆದೊಂದು ವಾರದಿಂದ ವರ್ಷಧಾರೆಯಾಗುತ್ತಿದೆ. ಕಟ್ಟಿನಮನೆ ಗ್ರಾಮದಲ್ಲಿ ಬೃಹತ್ ಮರಬಿದ್ದು ಮಹಿಳೆ ಸಾವನಪ್ಪಿದ್ದಾರೆ. 48ವರ್ಷದ ಸವಿತಾ ಮೃತ ದುರ್ದೈವಿಯಾಗಿದ್ದು, ಕಳೆದ ಒಂದು ತಿಂಗಳ ಅವಧಿಯಲ್ಲಿ ಮಳೆಗೆ ಸಾವನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಮಳೆಗೆ ತೊಯ್ದು ಹೋದ ಸ್ಮಾರ್ಟ್ ಸಿಟಿ ಬೆಳಗಾವಿ

ಬೆಳಗಾವಿಯಲ್ಲಿ ಮಳೆ ಅಬ್ಬರ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಮಜಗಾಂವ್ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಒಳಗಿದ್ದ ವಸ್ತುಗಳು ನೀರಲ್ಲಿ ತೇಲಿ ಹೋಗಿವೆ. ನಿವಾಸಿಗಳು ನೀರು ಹೊರಹಾಕಲು ಜಾಗರಣೆ ಮಾಡುವಂತಾಯಿತು. ಖಾಸಾಬಾಗ್‌ನಲ್ಲಿ ಬನಶಂಕರಿ ದೇವಾಲಯದ ಗರ್ಭಗುಡಿಗೆ ನೀರು ನುಗ್ಗಿ ಅರ್ಚಕರು ಪರದಾಡಬೇಕಾಯಿತು.

ಬೆಳಗಾವಿ ನಗರದ 5 ಕಡೆ ಮರಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಮಾರುಕಟ್ಟೆಗೂ ನೀರು ನುಗ್ಗಿದ್ದರಿಂದ ಟೊಮ್ಯಾಟೋ ಸೇರಿ ತರಕಾರಿಗಳೆಲ್ಲ ನೀರುಪಾಲಾಗಿವೆ.

ಕೋಲಾರದಲ್ಲಿ ಮಳೆ, ಬಿರುಗಾಳಿಗೆ ನೆಲಕಚ್ಚಿದ ಬಾಳೆ

ಕೋಲಾರದ ಜಂಗಂಬಸಾಪುರದಲ್ಲೂ ಮಳೆ, ಬಿರುಗಾಳಿಗೆ ರೈತ ಬಸವರಾಜು ಅನ್ನೋರ ಕಟಾವಿಗೆ ಬಂದಿದ್ದ 3 ಎಕರೆ ಬಾಳೆ ನೆಲಕಚ್ಚಿದೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಮರಬಿದ್ದು ಬಿದ್ದು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡದ ಪುತ್ತೂರಿನ ಉರ್ಲಾಂಡಿ ಎಂಬಲ್ಲಿ ಮರಬಿದ್ದು ಶೋಭಾ ಹೆಗ್ಡೆ ಅನ್ನೋರ ಮನೆ ಜಖಂಗೊಂಡಿದೆ. ಬಪ್ಪಳಿಗೆಯ ಸಿಂಗಾಣಿಯಲ್ಲಿ ಮರಬಿದ್ದು ಮಹಿಳೆ ಕಮಲ ಎಂಬವರ ಮನೆಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ 3ನೇ ಬಲಿ: ಮಹಿಳೆ ಮೇಲೆ ಮರ ಬಿದ್ದು ಸಾವು

ಮುಂದಿನ ನಾಲ್ಕು ದಿನ ಭಾರಿ ಮಳೆಯ ಮುನ್ಸೂಚನೆ

ರಾಜ್ಯದ ವಿವಿಧೆಡೆ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ, ದಕ್ಷಿಣ, ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೇ‌ 15ರ ವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Mon, 13 May 24

Follow Us
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?