AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಭಾರೀ ಮಳೆಯಿಂದ ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್; ಈ ಮಾರ್ಗಗಳಲ್ಲಿ ಹೋಗದಿರುವುದೇ ಉತ್ತಮ

ಐಟಿ ನಗರವಾದ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದರಿಂದ ನೂರಾರು ವಾಹನ ಸವಾರರು ಕಚೇರಿಗಳಿಗೆ ತೆರಳಲು ಪರದಾಡಿದರು.

Bengaluru Rain: ಭಾರೀ ಮಳೆಯಿಂದ ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್; ಈ ಮಾರ್ಗಗಳಲ್ಲಿ ಹೋಗದಿರುವುದೇ ಉತ್ತಮ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್‌
TV9 Web
| Edited By: |

Updated on:Sep 05, 2022 | 2:31 PM

Share

ಬೆಂಗಳೂರು: ಬೆಂಗಳೂರಿನಲ್ಲಿ (Bengaluru Rains) ನಿನ್ನೆ ರಾತ್ರಿ ಸುರಿದ ಮಳೆಗೆ ಎಲ್ಲಿ ನೋಡಿದರೂ ನೀರು ನಿಂತು ಕೆರೆಯಂತೆ ಕಾಣುತ್ತಿದೆ. ಇದರಿಂದಾಗಿ ವೀಕೆಂಡ್ ರಜೆ ಮುಗಿಸಿ ಆಫೀಸ್​ಗಳಿಗೆ ತೆರಳಲು ಬೆಳಗ್ಗೆ ಮನೆಯಿಂದ ಹೊರಟ ಬೆಂಗಳೂರಿಗರು ರಸ್ತೆಯಲ್ಲೇ ಪರದಾಡುವಂತಾಯಿತು. ಮುಖ್ಯವಾಗಿ ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಜಂಕ್ಷನ್‌ಗಳಲ್ಲಿ ಒಂದಾದ ಮಾರತ್ತಹಳ್ಳಿ-ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್‌ನಿಂದಾಗಿ ಬೆಂಗಳೂರಿಗರು ಇಂದು ಬೆಳಗ್ಗೆ ಕಿರಿಕಿರಿ ಅನುಭವಿಸಿದರು.

ಐಟಿ ನಗರವಾದ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದರಿಂದ ನೂರಾರು ವಾಹನ ಸವಾರರು ಹಾಗೂ ಚಾಲಕರು ಕಚೇರಿಗಳಿಗೆ ತೆರಳಲು ಪರದಾಡಿದರು. ಜತೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿರುವ ರಿಚ್‌ಮಂಡ್‌ ರಸ್ತೆಯಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಜನರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಅನಿವಾರ್ಯವಲ್ಲದಿದ್ದರೆ ಮನೆಯಿಂದ ಹೊರಗೆ ಬಾರದಂತೆ ಸಂಚಾರ ಪೊಲೀಸರು ಜನರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಧಾರಕಾರ ಮಳೆ: ಜಲಾವೃತಗೊಂಡ ರಸ್ತೆಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ, ಇಲ್ಲಿದೆ ವೈರಲ್ ವಿಡಿಯೋ

ಈ ಮಾರ್ಗಗಳಲ್ಲಿ ಇಂದು ಸಂಚರಿಸುವುದನ್ನು ಅವಾಯ್ಡ್ ಮಾಡಿ: ಜಯಂತಿಗ್ರಾಮ ಸರ್ಕಲ್ ಕಲ್ಯಾಣನಗರ ಕೆಳ ಸೇತುವೆ ಗೆದ್ದಲಹಳ್ಳಿ ರೈಲ್ವೆ ಸೇತುವೆ ವಡ್ಡರಪಾಳ್ಯ ಜಂಕ್ಷನ್ ಇಕೋ ವರ್ಲ್ಡ್​ ಮಾರತ್ತಹಳ್ಳಿ- ಸಿಲ್ಕ್ ಬೋರ್ಡ್ ಜಂಕ್ಷನ್ ರಸ್ತೆ ಸರ್ಜಾಪುರ ಮುಖ್ಯ ರಸ್ತೆ ಹೊರ ವರ್ತುಲ ರಸ್ತೆ

14 ಜಿಲ್ಲೆಗಳಿಗೆ ಹಳದಿ ಅಲರ್ಟ್: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಈ 14 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:26 pm, Mon, 5 September 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ