Bengaluru Rains: ಬೆಂಗಳೂರಿನಲ್ಲಿ ಬೆಳಗ್ಗೆಯೇ ಮಳೆ ಅಬ್ಬರ, ಮೆಜೆಸ್ಟಿಕ್-ಶಾಂತಿನಗರ ಸೇರಿ ಹಲವೆಡೆ ವರ್ಷಧಾರೆ

ಮೆಜೆಸ್ಟಿಕ್, ಶಾಂತಿನಗರ, ಯಶವಂತಪುರ, ಕೆಆರ್ ಮಾರುಕಟ್ಟೆ ಸೇರಿದಂತೆ ಬೆಂಗಳೂರು ನಗರದ ಅನೇಕ ಕಡೆಗಳಲ್ಲಿ ಸೋಮವಾರ (ಮೇ 4) ಬೆಳಗ್ಗೆಯೇ ತುಸು ಹೊತ್ತು ಭಾರಿ ಮಳೆ ಸುರಿದಿದೆ. ಕೆಆರ್ ಮಾರುಕಟ್ಟೆಯಲ್ಲಿ ಮಳೆಯಿಂದಾಗಿ ವ್ಯಾಪಾರಿಗಳು, ಗ್ರಾಹಕರು ಕಿರಿಕಿರಿ ಅನುಭವಿಸಿದರು. ಬೆಂಗಳೂರಿನಲ್ಲಿ ಮುಂದಿನ 72 ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Bengaluru Rains: ಬೆಂಗಳೂರಿನಲ್ಲಿ ಬೆಳಗ್ಗೆಯೇ ಮಳೆ ಅಬ್ಬರ, ಮೆಜೆಸ್ಟಿಕ್-ಶಾಂತಿನಗರ ಸೇರಿ ಹಲವೆಡೆ ವರ್ಷಧಾರೆ
ಬೆಂಗಳೂರಿನಲ್ಲಿ ಬೆಳಗ್ಗೆಯೇ ಮಳೆ
Image Credit source: tv9

Updated on: May 04, 2026 | 7:22 AM

ಬೆಂಗಳೂರು, ಮೇ 4: ಬೆಂಗಳೂರಿನ (Bengaluru) ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಾಂತಿನಗರ, ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್ ಸುತ್ತಮುತ್ತ ಸೋಮವಾರ (ಮೇ 4) ಬೆಳ್ಳಂ ಬೆಳಗ್ಗೆಯೇ ಭಾರಿ ಮಳೆ (Bangalore Rains) ಸುರಿದಿದೆ. ಕೆಆರ್ ಮಾರುಕಟ್ಟೆಯಲ್ಲಿ ಬೆಳಗ್ಗಿನ ವ್ಯಾಪಾರ ಜೋರಾಗಿದ್ದಲೇ ಏಕಾಏಕಿ ಭಾರಿ ಮಳೆ ಸುರಿದಿದ್ದರಿಂದ ಅವಾಂತರ ಸೃಷ್ಟಿಯಾಯಿತು. ಏತನ್ಮಧ್ಯೆ, ಬೆಂಗಳೂರಿನಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿಗೆ 3 ದಿನ ಮಳೆ ಅಲರ್ಟ್

ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದ ವಿವಿಧ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಮಳೆ ಮುನ್ಸೂಚನೆ ವಿವರ

  • ಮೇ 4 ಮತ್ತು 5 ರಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.
  • ಮಳೆಯ ಸಮಯದಲ್ಲಿ ಗಂಟೆಗೆ ಸುಮಾರು 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.
  • ನಗರದ ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಶಿಯಸ್​ನಿಂದ 36 ಡಿಗ್ರಿ ಸೆಲ್ಶಿಯಸ್​ ಆಸುಪಾಸಿನಲ್ಲಿರಲಿದ್ದು, ಕನಿಷ್ಠ ತಾಪಮಾನವು 23 ಡಿಗ್ರಿ ಸೆಲ್ಶಿಯಸ್​ ಇರಲಿದೆ.

ದಕ್ಷಿಣ ಒಳನಾಡಿನ ರಾಮನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಮಳೆ ಅವಾಂತರ: ಮರದ ಕೊಂಬೆ ಬಿದ್ದು ಕಾರು ಜಖಂ

ಮುಂದಿನ ಕೆಲವು ದಿನಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ನಗರ ಪ್ರದೇಶಗಳಲ್ಲಿ ಜನರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us