AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರಿನಲ್ಲಿ ಮತ್ತೆ ವರುಣನ ಆಗಮನ: ಮೆಜೆಸ್ಟಿಕ್ ಸೇರಿ ಹಲವೆಡೆ ಮಳೆ ಶುರು!

ಬೆಂಗಳೂರು ಮಳೆ ಹವಾಮಾನ ವರದಿ: ಬೆಂಗಳೂರಿನಲ್ಲಿ ಭಾರೀ ಮಳೆ ಪ್ರಾರಂಭವಾಗಿದ್ದು, ನಗರದ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಮೇ 8 ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿದೆ. ತಗ್ಗು ಪ್ರದೇಶದ ನಿವಾಸಿಗಳು ಹಾಗೂ ವಾಹನ ಸವಾರರು ಜಾಗರೂಕರಾಗಿರಿ, ಸಂಚಾರ ದಟ್ಟಣೆ ಹೆಚ್ಚಾಗಬಹುದು. ಕಳೆದ ವಾರದ ಘಟನೆಗಳನ್ನು ತಪ್ಪಿಸಲು ಎಚ್ಚರ ವಹಿಸುವುದು ಉತ್ತಮ.

Bangalore Rain: ಬೆಂಗಳೂರಿನಲ್ಲಿ ಮತ್ತೆ ವರುಣನ ಆಗಮನ: ಮೆಜೆಸ್ಟಿಕ್ ಸೇರಿ ಹಲವೆಡೆ ಮಳೆ ಶುರು!
ಸಾಂದರ್ಭಿಕ ಚಿತ್ರ Image Credit source: AI image
ಅಕ್ಷಯ್​ ಪಲ್ಲಮಜಲು​​
|

Updated on:May 05, 2026 | 5:35 PM

Share

ಬೆಂಗಳೂರು, ಮೇ.5: ನಗರದಲ್ಲಿ ಭಾರೀ ಮಳೆ ಆರಂಭವಾಗಿದೆ, ಮಧ್ಯಾಹ್ನದಿಂದ ಭಾರೀ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಬೆಂಗಳೂರಿನ ಹಲವು ಕಡೆ ಮಳೆ ಶುರುವಾಗಿದೆ. ಒಂದು ವಾರದ ಹಿಂದೆ ಮಳೆಯಿಂದ ಬೆಂಗಳೂರಿನಲ್ಲಿ ಭಾರೀ ದೊಡ್ಡಮಟ್ಟದ ಅನಾಹುತಗಳು ಸೃಷ್ಟಿಯಾಗಿತ್ತು. ಈ ರಣ ಮಳೆಗೆ 10 ಜನ ಸಾವನ್ನಪ್ಪಿದ್ದರು. ಇದೀಗ ಹವಾಮಾನ ಇಲಾಖೆ ತಿಳಿಸಿರುವಂತೆ ಬೆಂಗಳೂರಿನ ಹಲವು ಭಾಗದಲ್ಲಿ ಮಳೆ ಬರುತ್ತಿದೆ.

ಮಧ್ಯಾಹ್ನದಿಂದಲೇ ದಟ್ಟವಾದ ಮೋಡಗಳು ಆವರಿಸಿದ್ದು, ಸದ್ಯ ಮೆಜೆಸ್ಟಿಕ್, ಶಿವಾಜಿನಗರ, ಕೆ.ಆರ್. ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ ಬಡಾವಣೆಗಳಲ್ಲಿ ಮಳೆ ಆರಂಭವಾಗಿದೆ. ಬೆಂಗಳೂರಿನ ಹಲವು ಭಾಗಗಳಲ್ಲಿ ಮುಂದಿನ ಕೆಲ ಗಂಟೆಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಗ್ಗು ಪ್ರದೇಶದ ನಿವಾಸಿಗಳು ಮತ್ತು ವಾಹನ ಸವಾರರು ಜಾಗರೂಕರಾಗಿರಲು ಸೂಚಿಸಲಾಗಿದೆ. ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆಯಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ನಾಳೆಯಿಂದ ಮಂಗಳೂರಿನ ಜನ ಕೂಲ್​ ಕೂಲ್: ದಕ್ಷಿಣ ಕನ್ನಡ ಮತ್ತು ಉಡುಪಿಯ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ನಗರದಲ್ಲಿ ಗರಿಷ್ಠ ತಾಪಮಾನವು ಸುಮಾರು 35°C ಮತ್ತು ಕನಿಷ್ಠ ತಾಪಮಾನವು 21°C ಇರಲಿದೆ. ಬೆಂಗಳೂರು ನಗರ (Urban) ಮತ್ತು ಬೆಂಗಳೂರು ಗ್ರಾಮಾಂತರ (Rural) ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆ ಬರುತ್ತಿದೆ ಎಂದು ಹೇಳಲಾಗಿದೆ. ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮೇ 8 ರವರೆಗೆ ಬಿರುಗಾಳಿ (ಗಂಟೆಗೆ 30-40 ಕಿ.ಮೀ ವೇಗ) ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮಳೆಯು ಸದ್ಯಕ್ಕೆ ಅಲ್ಲಲ್ಲಿ ಚದುರಿದಂತೆ ಇರುವ ನಿರೀಕ್ಷೆ ಇರುವುದರಿಂದ, ಸಂಚಾರ ದಟ್ಟಣೆ ಹಾಗೂ ತಗ್ಗು ಪ್ರದೇಶಗಳಲ್ಲಿ ಜಾಗರೂಕರಾಗಿರುವುದು ಉತ್ತಮ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:01 pm, Tue, 5 May 26

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More