AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ಹಲವೆಡೆ ಅನಾಹುತ; ಪಾಲಿಕೆ ಹೆಲ್ಪ್ ಲೈನ್​ಗೆ ಬಂತು ನೂರಾರು ದೂರುಗಳು

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭರ್ಜರಿ ಮಳೆಯಾಗುತ್ತಿದ್ದು, ಬಿರುಬಿಸಿಲಿಗೆ ಹೈರಾಣರಾಗಿದ್ದ ಜನರು ಖುಷ್​ ಆಗಿದ್ದಾರೆ. ಅದರಂತೆ ನಿನ್ನೆ(ಮೇ.08) ಸುರಿದ ಬಿರುಗಾಳಿ ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವೆಡೆ ಮರಗಳು ಧರೆಗುರುಳಿದಿವೆ. ಈ ಹಿನ್ನಲೆ ಪಾಲಿಕೆ ಹೆಲ್ಪ್ ಲೈನ್​ಗೆ ನೂರಾರು ಕರೆಗಳು ಬಂದಿವೆ.

ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ಹಲವೆಡೆ ಅನಾಹುತ; ಪಾಲಿಕೆ ಹೆಲ್ಪ್ ಲೈನ್​ಗೆ ಬಂತು ನೂರಾರು ದೂರುಗಳು
ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರ, ಪಾಲಿಕೆ ಹೆಲ್ಪಲೈನ್​ಗೆ ದೂರು
ಬಿ ಮೂರ್ತಿ, ನೆಲಮಂಗಲ
| Edited By: |

Updated on:May 09, 2024 | 6:19 PM

Share

ಬೆಂಗಳೂರು, ಮೇ.09: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ(Bengaluru Rain) ದರ್ಶನಕ್ಕಾಗಿ ಕಾದು ಕಾದು ಸುಸ್ತಾಗಿದ್ದರು. ವರುಣ ದೇವನಿಗಾಗಿ ಹಲವರು ಪ್ರಾರ್ಥನೆ ಕೂಡ ಮಾಡಿದ್ದರು. ಅದರಂತೆ ವರುಣ ಕೃಫೆ ತೋರಿದ್ದು, ಕಳೆದ ನಾಲ್ಕೈದು ದಿನಗಳಿಂದ ಸಿಲಿಕಾನ್​ ಸಿಟಿಯಲ್ಲಿ ಭರ್ಜರಿ ಮಳೆಯಾಗಿದೆ. ಬಿಸಿಲಿನ ಬೇಗೆಗೆ ಕಂಗಾಲಾಗಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಇದೇ ಮಳೆ ನಗರದ ಕೆಲವೆಡೆ ಅನಾಹುತವನ್ನೇ ಸೃಷ್ಟಿ ಮಾಡಿದ್ದು, ನಿನ್ನೆ ಸುರಿದ ಮಳೆಗೆ ಬೆಂಗಳೂರಿನ ಹಲವೆಡೆ ಮರಗಳು ಧರೆಗುರುಳಿದಿವೆ.

ಪಾಲಿಕೆ ಹೆಲ್ಪ್ ಲೈನ್​ಗೆ ಬಂತು ನೂರಾರು ದೂರುಗಳು

ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ  ಮರಗಳು, ರೆಂಬೆ, ಕೊಂಬೆ ಉರುಳಿದ ಬಗ್ಗೆ ಪಾಲಿಕೆ ಹೆಲ್ಪ್ ಲೈನ್​ಗೆ ನೂರಾರು ದೂರುಗಳು ದಾಖಲಾಗಿವೆ. ಜೊತೆಗೆ ವಿವಿಧ ವಲಯಗಳಿಂದ ಮರ ಬಿದ್ದ ಬಗ್ಗೆ ದೂರು ಬರುತ್ತಿದ್ದಂತೆ ಸಿಬ್ಬಂದಿಗಳು ತೆರಳಿ ಸಮಸ್ಯೆ ಬಗೆಹರಿಸಿದ್ದಾರೆ.

ಎಲ್ಲೆಲ್ಲಿ ಎಷ್ಟು ಮರ-ಕೊಂಬೆ ಬಿದ್ದ ಬಗ್ಗೆ ದೂರು

                          ದೂರು ದಾಖಲು                                         ತೆರವು
                       ಆರ್.ಆರ್. ನಗರ – 70                                           04
                        ದಕ್ಷಿಣ ವಲಯ    -16                                           08
                       ಬೊಮ್ಮನಹಳ್ಳಿ     -2                                            02
                       ಪಶ್ಚಿಮ ವಲಯ   -30                                            10
                   ಯಲಹಂಕ ವಲಯ -7                                             03
                       ಪೂರ್ವವಲಯ    -24                                             12
                   ದಾಸರಹಳ್ಳಿ ವಲಯ -3                                              01

ಇನ್ನು ಆರ್.ಆರ್. ನಗರ ವಲಯದಿಂದ ಅತೀ ಹೆಚ್ಚು ಅಂದರೆ ಬರೊಬ್ಬರಿ 70 ಮರ ಬಿದ್ದ ದೂರು ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಅವಾಂತರ, ಬೋರ್ ಬ್ಯಾಂಕ್ ರಸ್ತೆ ಕುಸಿತ

ಮಳೆಗಾಲ ಶುರುವಾದ ಹಿನ್ನಲೆ ಈ ಬಾರಿ ಮಳೆ ಅವಾಂತರಗಳನ್ನು ಬೇಗ ಬಗೆಹರಿಸಲು ಬಿಬಿಎಂಪಿ ಹೊಸ ಪ್ಲಾನ್ ಮಾಡಿದ್ದು, ವಲಯವಾರು ವಿಪತ್ತು ನಿರ್ವಹಣೆಯ ಕಂಟ್ರೋಲ್ ರೂಂ ಸ್ಥಾಪನೆ ಮಾಡಿದೆ. ಸಹಾಯವಾಣಿ ಸಂಖ್ಯೆ 1533 ಜೊತೆಗೆ ವಿವಿಧ ಎಂಟು ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಮ್‌ ಓಪನ್ ಆಗಿದೆ.

ಇಲ್ಲಿದೆ ಹೆಲ್ಪಲೈನ್​ ಸಂಖ್ಯೆ

ಬೊಮ್ಮನಹಳ್ಳಿ ವಲಯ: 080-25732447,25735642,9480685707

ದಾಸರಹಳ್ಳಿ ವಲಯ: 080-28394909,9480685709

ಪೂರ್ವ ವಲಯ: 080-22975803,9480685702

ಮಹದೇವಪುರ ವಲಯ: 080-28512300,9480685706

ರಾಜರಾಜೇಶ್ವರಿ ನಗರ ವಲಯ: 080-28601851,9480685708

ದಕ್ಷಿಣ ವಲಯ: 9480685704,8026566362,8022975703

ಪಶ್ಚಿಮ ವಲಯ: 080-23463366,23561692,9480685703

ಯಲಹಂಕ ವಲಯ: 080-23636671,22975936,9480685705

ತುರ್ತು ಸಂದರ್ಭಗಳಲ್ಲಿ ತಮ್ಮ ವ್ಯಾಪ್ತಿಯ ಕಂಟ್ರೋಲ್ ರೂಂಗೆ ಕರೆ ಮಾಡಿ ದೂರು ಸಲ್ಲಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Thu, 9 May 24

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ