AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ: ರಾಜ್ಯದಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆ

ಬಂಗಾಳಕೊಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್​​​​ ಹೇಳಿಕೆ ನೀಡಿದ್ದಾರೆ. 

Bengaluru Rain: ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ: ರಾಜ್ಯದಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 06, 2022 | 5:55 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಂಜೆಯ ಬಳಿಕ ಮಳೆ ಸುರಿಯಲಾರಂಭಿಸಿದೆ. ಮೂರ್ನಾಲ್ಕು ದಿನಗಳಿಂದ ಸಂಜೆ ವೇಳೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದ್ದು, ಇಂದು ಕೂಡ ಕಾರ್ಪೋರೇಷನ್, ಶಾಂತಿನಗರ, ಮೈಸೂರ್ ಬ್ಯಾಂಕ್ ಸರ್ಕಲ್ , ಕೆ.ಆರ್. ಮಾರ್ಕೆಟ್ ಸೇರಿದಂತೆ ಹಲವೆಡೆ ಗಾಳಿ ಸಹಿತ ಮಳೆರಾಯನ ಆರ್ಭಟ ಶುರುವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ಜನಸಂಚಾರ ಅಸ್ತವ್ಯಸ್ತವಾಗಿದೆ. ಹಲವೆಡೆ ಮಳೆಯಿಂದಾಗಿ ಟ್ರಾಫಿಕ್​ ಜಾಮ್​ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿದ್ದು, ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ಸಂಜೆಯ ಮಳೆಯಿಂದಾಗಿ ದ್ವಿಚಕ್ರ ವಾಹನ ಸಾವರಿಗೆ ಸಮಸ್ಯೆಯಾಗಿದ್ದು, ಗಾಳಿ ಸಹಿತ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ಹರಿಯುತ್ತಿದೆ.

ಬೆಂಗಳೂರು ಮಾತ್ರವಲ್ಲದೆ ಕರಾವಳಿ, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಕೂಡ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಬಂಗಾಳಕೊಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್​​​​ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ