AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೀರು ನಿರ್ವಹಣೆ, ಪ್ರವಾಹ ತಡೆಗೆ ವಿಶ್ವಬ್ಯಾಂಕ್​ನಿಂದ 3,000 ಕೋಟಿ ರೂ. ನಿರೀಕ್ಷೆ

ಬೆಂಗಳೂರಿಗೆ ವಿಶ್ವಬ್ಯಾಂಕ್ ಈ ಬಾರಿ ಭರ್ಜರಿ ಆರ್ಥಿಕ ನೆರವು ನೀಡುವ ನಿರೀಕ್ಷೆ ಇದೆ. ನಗರದ ಪ್ರವಾಹ ತಡೆ ಮತ್ತು ನೀರು ನಿರ್ವಹಣೆಗೆ ಹೆಚ್ಚಿನ ಆರ್ಥಿಕ ನೆರವನ್ನು ಸಾಲದ ರೂಪದಲ್ಲಿ ನೀಡಲು ವಿಶ್ವಬ್ಯಾಂಕ್ ಮುಂದಾಗಿದೆ. ವಿಶ್ವಬ್ಯಾಂಕ್ ಅನುದಾನ ಯಾವುದಕ್ಕೆಲ್ಲ ಬಳಕೆಯಾಗಲಿದೆ? ಬಿಬಿಎಂಪಿಗೆ ಎಷ್ಟು ಹಣ ಸಿಗಲಿದೆ ಇತ್ಯಾದಿ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ನೀರು ನಿರ್ವಹಣೆ, ಪ್ರವಾಹ ತಡೆಗೆ ವಿಶ್ವಬ್ಯಾಂಕ್​ನಿಂದ 3,000 ಕೋಟಿ ರೂ. ನಿರೀಕ್ಷೆ
ಬೆಂಗಳೂರಿನಲ್ಲಿ ನೀರು ನಿರ್ವಹಣೆ, ಪ್ರವಾಹ ತಡೆಗೆ ವಿಶ್ವಬ್ಯಾಂಕ್​ನಿಂದ 3,000 ಕೋಟಿ ರೂ. ನಿರೀಕ್ಷೆ
ಗಣಪತಿ ಶರ್ಮಾ
|

Updated on:May 09, 2024 | 10:18 AM

Share

ಬೆಂಗಳೂರು, ಮೇ 9: ಬೆಂಗಳೂರಿನಲ್ಲಿ ನೀರು ನಿರ್ವಹಣೆ ಮತ್ತು ಪ್ರವಾಹ ಪರಿಸ್ಥಿತಿ ಕಡಿಮೆ ಮಾಡುವ ಉಪಕ್ರಮಗಳಿಗೆ 3,000 ಕೋಟಿ ರೂ. ಸಾಲದ ರೂಪದ ಅನುದಾನ ನೀಡಲು ವಿಶ್ವಬ್ಯಾಂಕ್ ಮುಂದೆ ಬಂದಿದೆ. ಈ ಕುರಿತ ಪ್ರಸ್ತಾವನೆಗೆ ಸುಮಾರು ಒಂದು ತಿಂಗಳ ಹಿಂದೆ ಆರ್ಥಿಕ ವ್ಯವಹಾರಗಳ ಇಲಾಖೆ (DEA) ಗ್ರೀನ್ ಸಿಗ್ನಲ್‌ ನೀಡಿದ್ದು, ಮುಂದಿನ ಹಂತಗಳ ಬಗ್ಗೆ ಬಿಬಿಎಂಪಿ ಇತ್ತೀಚೆಗೆ ವಿಶ್ವಬ್ಯಾಂಕ್ ಪ್ರತಿನಿಧಿಗಳೊಂದಿಗೆ ಮೊದಲ ಸಭೆ ನಡೆಸಿದೆ. ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸಾಲದ ಮೊತ್ತವನ್ನು ಕ್ರಮವಾಗಿ 2,000 ಕೋಟಿ ಮತ್ತು 1,000 ಕೋಟಿ ರೂ. ಆಗಿ ಹಂಚಿಕೊಳ್ಳಲಿದೆ.

ಸಾಲದ ಮೊತ್ತದ ನೆರವಿನೊಂದಿಗೆ ಬಿಬಿಎಂಪಿಯು 173 ಕಿಲೋಮೀಟರ್‌ ವ್ಯಾಪ್ತಿಯಲ್ಲಿ ತಡೆಗೋಡೆಗಳನ್ನು ನಿರ್ಮಿಸುವ ಮೂಲಕ ಬಾಹ್ಯ ಪ್ರದೇಶಗಳಲ್ಲಿ ಮಳೆನೀರಿನ ಚರಂಡಿಗಳನ್ನು ನಿರ್ಮಾಣ ಮಾಡಲು ಯೋಜಿಸಿದೆ. ಕೋರಮಂಗಲ ವ್ಯಾಲಿ ವಾಟರ್​ವೇಯನ್ನು ದಕ್ಷಿಣ ಪಿನಾಕಿನಿ ನದಿಯೊಂದಿಗೆ ಸಂಪರ್ಕಿಸುವ ನಿಟ್ಟಿನಲ್ಲಿ ಯೋಜನೆಯನ್ನು ವಿಸ್ತರಿಸಲಿದೆ.

ಏತನ್ಮಧ್ಯೆ, ಜಲ ಮಂಡಳಿಯು ಹೊಸ ಒಳಚರಂಡಿ ಜಾಲಗಳು ಮತ್ತು ಕೊಳಚೆನೀರಿನ ಸಂಸ್ಕರಣಾ ಘಟಕಗಳನ್ನು ರಚಿಸಲು ತಮ್ಮ ನಿಯೋಜಿತ ಹಣವನ್ನು ಬಳಸಿಕೊಳ್ಳಲಿದೆ.

ಜಲ ಮಂಡಳಿಯು ಈ ಹಿಂದೆ ಹಲವು ಬಾರಿ ವಿಶ್ವಬ್ಯಾಂಕ್ ನಿಧಿಯನ್ನು ಬಳಸಿಕೊಂಡಿದ್ದರೂ, ಬಿಬಿಎಂಪಿಗೆ ಇದು ಮೊದಲ ಅನುಭವವಾಗಿದೆ. ಮಾಸಾಂತ್ಯದ ವೇಳೆಗೆ ವಿಶ್ವಬ್ಯಾಂಕ್‌ನೊಂದಿಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಹಂಚಿಕೊಳ್ಳಲಾಗುವುದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮೇ 11ರವರೆಗೂ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ; ಮರ ಬಿದ್ದು ಸಾಫ್ಟ್‌ವೇರ್ ಇಂಜಿನಿಯರ್ ಬೆನ್ನು ಮೂಳೆ ಮುರಿತ

ಎರಡು ಏಜೆನ್ಸಿಗಳಿಗೆ ಸಾಲದ ರೂಪದ ನಿಧಿಯ ಜೊತೆಗೆ ವಿಶ್ವಬ್ಯಾಂಕ್, ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ತಡೆಗಟ್ಟುವ ಯೋಜನೆಗಳಿಗಾಗಿ 2,000 ಕೋಟಿ ರೂಪಾಯಿಗಳನ್ನು ನೀಡಲಿದೆ ಎಂದು ತಿಳಿದುಬಂದಿದೆ. ಇದಕ್ಕಾಗಿ ಕರ್ನಾಟಕ ಕಂದಾಯ ಇಲಾಖೆ ವಿಶ್ವಬ್ಯಾಂಕ್ ಜತೆ ಮಾತುಕತೆ ನಡೆಸುತ್ತಿದೆ.

ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರಿನಲ್ಲಿ ಹಠಾತ್ ಪ್ರವಾಹ ಪುನರಾವರ್ತನೆಯಾಗುತ್ತಿದೆ. ಇದು ಜನರ ಜೀವ ಮತ್ತು ಆಸ್ತಿಗೆ ಅಪಾಯವನ್ನುಂಟುಮಾಡುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:17 am, Thu, 9 May 24

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್