AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಮಳೆಯಿಂದ ಜಲಾವೃತವಾಗಿದ್ದ ಯಲಹಂಕದ ಕೇಂದ್ರೀಯ ವಿಹಾರ್​ ಅಪಾರ್ಟ್​ಮೆಂಟ್​ಗೆ ಬಿಬಿಎಂಪಿ ನೋಟಿಸ್

ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್​ಮೆಂಟ್​ನ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗೆ ಬುಧವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದರು. ಈ ಅಪಾರ್ಟ್​ಮೆಂಟ್​ನ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿತ್ತು. ಆದರೆ, 20 ಫ್ಲಾಟ್​ಗಳ ಮಾಲೀಕರು ಮನೆಗೆ ಬೀಗ ಹಾಕಿಕೊಂಡು ಮನೆಯೊಳಗೆ ಕುಳಿತಿದ್ದರು. ಅವರು ಈ ಕಾರ್ಯಾಚರಣೆಗೆ ಸಹಕರಿಸಿರಲಿಲ್ಲ.

Bengaluru Rains: ಮಳೆಯಿಂದ ಜಲಾವೃತವಾಗಿದ್ದ ಯಲಹಂಕದ ಕೇಂದ್ರೀಯ ವಿಹಾರ್​ ಅಪಾರ್ಟ್​ಮೆಂಟ್​ಗೆ ಬಿಬಿಎಂಪಿ ನೋಟಿಸ್
ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್‌ ನೀರಿನಿಂದ ಆವೃತ
TV9 Web
| Edited By: |

Updated on: Oct 24, 2024 | 10:07 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಯಲಹಂಕವೊಂದರಲ್ಲೇ 1 ಸಾವಿರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿತ್ತು. ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್​ಮೆಂಟ್​ ಜಲಾವೃತವಾಗಿ ಅಲ್ಲಿಯ ನಿವಾಸಿಗಳನ್ನು ಬೇರೆಡೆ ಸ್ಥಳಾಂತರಿಸಲಾಗಿತ್ತು. 10 ದಿನಗಳಲ್ಲಿ 3ನೇ ಬಾರಿ ಜಲಾವೃತವಾಗಿದ್ದ ಈ ಅಪಾರ್ಟ್​ಮೆಂಟ್​ಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.

ಹೆಣ್ಣೂರು ಅವಘಡದ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಇದೀಗ ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್​ಮೆಂಟ್​ಗೆ ನೊಟೀಸ್ ಜಾರಿ ಮಾಡಿದ್ದಾರೆ. ಯಲಹಂಕ ವಲಯ ಜಂಟಿ ಆಯುಕ್ತರಿಂದ ನೊಟೀಸ್ ಜಾರಿಯಾಗಿದೆ. ಕಳೆದ 10 ದಿನದ ಅಂತರದಲ್ಲಿ ಮೂರು ಬಾರಿ ಅಪಾರ್ಟ್​ಮೆಂಟ್​ಗೆ ಜಲದಿಗ್ಭಂದನವಾಗಿತ್ತು. ಹೀಗಾಗಿ, ಈ ಅಪಾರ್ಟ್​ಮೆಂಟ್‌ ಸುತ್ತ 8 ಅಡಿ ಎತ್ತರದ ಆರ್.ಸಿ.ಸಿ. ತಡೆಗೋಡೆ ನಿರ್ಮಿಸಲು ಸೂಚನೆ ನೀಡಲಾಗಿದೆ. ಈಗಿರುವ ಕಾಂಪೌಡ್​ ಮತ್ತೆ ಕುಸಿತ ಕಾಣುತ್ತಿದೆ. ಇದರಿಂದ ಮಳೆ ನೀರು ಒಳಗೆ ನುಗ್ಗುತ್ತಿದೆ.

ಇದನ್ನೂ ಓದಿ: Bengaluru Rains: ಬೆಂಗಳೂರಲ್ಲಿ ಮಳೆಯಿಂದ ಇಂದು ಹಳದಿ ಅಲರ್ಟ್​ ಘೋಷಣೆ; ಶಾಲೆಗಳಿಗೆ ರಜೆ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ

ನೊಟೀಸ್​ನಲ್ಲಿ ಏನಿದೆ?:

ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್‌ ಸುತ್ತಲೂ ನಿರ್ಮಿಸಿರುವ ಕಲ್ಲು ಕಟ್ಟಡದ ಕಾಂಪೌಂಡ್ ಗೋಡೆಯು ಶಿಥಿಲಾವಸ್ಥೆಯಲ್ಲಿದೆ. ಕಾಂಪೌಂಡ್‌ ನಿಂದ ಮಳೆ ನೀರು ಅಪಾರ್ಟ್‌ಮೆಂಟ್‌ನ ಒಳಭಾಗಕ್ಕೆ ಹರಿದು ಬರುತ್ತಿರುವುದರಿಂದ ಈಗಿನ ಕಾಂಪೌಂಡ್ ಗೋಡೆಯನ್ನು ತೆರವುಗೊಳಿಸಿ ಹೊಸದಾಗಿ ಸುಮಾರು 8 ಅಡಿಗಳ ಎತ್ತರದ ಆರ್.ಸಿ.ಸಿ. ತಡೆಗೋಡೆಯನ್ನು ಅಪಾರ್ಟ್​ಮೆಂಟ್‌ ಸುತ್ತಲೂ ನಿರ್ಮಿಸಲು ಸೂಚನೆ ನೀಡಲಾಗಿದೆ. ಈ ಮೂಲಕ ಮಳೆ ನೀರು, ಅಪಾರ್ಟ್‌ ಮೆಂಟ್‌ನ ಒಳಭಾಗಕ್ಕೆ ಹರಿಯದಂತೆ ತಡೆಯಲು ಸೂಚನೆ ನೀಡಲಾಗಿದೆ.

ಅಪಾರ್ಟ್‌ಮೆಂಟ್‌ನ ಒಳಭಾಗದಲ್ಲಿ ಶೇಖರಣೆಯಾಗುತ್ತಿರುವ ಮಳೆ ನೀರನ್ನು ಆ ಅಪಾರ್ಟ್​ಮೆಂಟ್‌ ಪೂರ್ವ ದಿಕ್ಕಿನಲ್ಲಿರುವ ರಾಜಕಾಲುವೆಗೆ ನೇರವಾಗಿ ಕಲ್ಪಿಸಿರುವುದರಿಂದ ರಾಜಕಾಲುವೆಯಲ್ಲಿ ನೀರಿನ ಮಟ್ಟ ಹೆಚ್ಚಾದ ಸಂದರ್ಭದಲ್ಲಿ ಅಪಾರ್ಟ್​ಮೆಂಟ್‌ ಒಳಭಾಗದಲ್ಲಿ ನೀರು ಶೇಖರಣೆಯಾಗುತ್ತಿದೆ. ಮಳೆ ನೀರು ರಾಜಕಾಲುವೆಗೆ ಹರಿಯದೇ ಅಪಾರ್ಟ್​ಮೆಂಟ್‌ ಒಳಭಾಗದಲ್ಲಿಯೇ ನಿಂತು ನೀರಿನ ಮಟ್ಟ ಹೆಚ್ಚಾಗುತ್ತಿರುತ್ತದೆ. ರಾಜಕಾಲುವೆಗೆ ನೇರವಾಗಿ ಸಂಪರ್ಕ ಕಲ್ಪಿಸಿರುವ ಡ್ರೈನ್ ಅನ್ನು ಮುಚ್ಚಬೇಕು. ಶೇಖರಣೆಗೊಳ್ಳುವ ಎಲ್ಲಾ ನೀರನ್ನು ಒಂದು ಕಡೆ ಶೇಖರಣೆ ಮಾಡಲು ಸಂಪ್ ನಿರ್ಮಾಣ ಮಾಡಬೇಕು. ನೀರನ್ನು ಪಂಪ್ ಮೂಲಕ ರಾಜಕಾಲುವೆಗೆ ಹರಿದು ಬಿಡಲು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಮಳೆ ನೀರು ನುಗ್ಗಿ ಕೆರೆಯಂತಾದ ಬಿಎಂಟಿಸಿ ಬಸ್​!

ಸುಮಾರು 2500 ಜನರು ವಾಸವಾಗಿರುವ ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್‌ ನೀರಿನಿಂದ ಆವೃತವಾಗಿದ್ದು, NDRF ಮತ್ತು SDRF ಟೀಂ ಬೋಟಿಂಗ್ ಮೂಲಕ ಕಾರ್ಯಾಚರಣೆ ಶುರು ಮಾಡಿತ್ತು. ಬೋಟ್​ನಲ್ಲಿ ಅಪಾರ್ಟ್​ಮೆಂಟ್‌ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿತ್ತು.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ