AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನ ಯಾವ್ಯಾವ ಪ್ರದೇಶಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ? ವಿವರ ಇಲ್ಲಿದೆ

Bengaluru Weather: ಮುಂದಿನ 24 ಗಂಟೆಗಳವರೆಗೆ ಹೆಚ್ಚು ಮಳೆ ಸಂಭವ ಇಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದಿಂದ ತಿಳಿಸಿದೆ. ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿತ್ತು. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. 

Bengaluru Rains: ಬೆಂಗಳೂರಿನ ಯಾವ್ಯಾವ ಪ್ರದೇಶಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ? ವಿವರ ಇಲ್ಲಿದೆ
ಮಳೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 17, 2021 | 6:05 PM

Share

ಬೆಂಗಳೂರು: ನಗರದಲ್ಲಿ ಇಂದು (ಅಕ್ಟೋಬರ್ 17) ಸಂಜೆ ವೇಳೆಗೆ ಸಾಧಾರಣ ಮಳೆ ಆಗುವ ಸಂಭವ ಇದೆ. ಬೆಂಗಳೂರು ಪೂರ್ವ ಹಾಗೂ ಮಹದೇವಪುರ ವಲಯದಲ್ಲಿ ಅತೀ ಕಡಿಮೆ ಮಳೆ ಆಗಲಿದೆ. ಅಂದಾಜು 0.1 ರಿಂದ 2.4 ಮಿಲಿ ಮೀಟರ್ ಮಳೆ ಸಾಧ್ಯತೆ ಇದೆ. ದಾಸರಹಳ್ಳಿ, ರಾಜರಾಜೇಶ್ವರಿನಗರ, ಬೊಮ್ಮನಹಳ್ಳಿ, ಯಲಹಂಕ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಪಶ್ಚಿಮ ವಲಯದಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದಿಂದ ಮಾಹಿತಿ ಲಭ್ಯವಾಗಿದೆ.

ದಾಸರಹಳ್ಳಿ, ರಾಜರಾಜೇಶ್ವರಿನಗರ, ಬೊಮ್ಮನಹಳ್ಳಿ, ಯಲಹಂಕ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಪಶ್ಚಿಮ ವಲಯದಲ್ಲಿ ಅಂದಾಜು 2.5 ಮಿಲಿ ಮೀಟರ್ ನಿಂದ 15.5 ಮಿಲಿ ಮೀಟರ್ ಮಳೆ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳವರೆಗೆ ಹೆಚ್ಚು ಮಳೆ ಸಂಭವ ಇಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದಿಂದ ತಿಳಿಸಿದೆ. ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿತ್ತು. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಮಳೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರದಲ್ಲಿ ಭಾರಿ ಮಳೆಯಾಗಿದೆ. ಇದರಿಂದ ತಾಲೂಕು ಕಚೇರಿ ಮುಂದಿನ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ವಾಹನ ಸವಾರರ ಪರದಾಟ ಕಂಡುಬಂದಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಇತ್ತ ಚಾಮರಾಜನಗರದಲ್ಲಿ ಕೂಡ ಮಳೆಯಾಗಿದೆ. ಭಾರಿ ಮಳೆಗೆ ಲಾರಿ ಟೈರ್ ಮಣ್ಣಿನಲ್ಲಿ ಸಿಲುಕಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಘಟನೆ ನಡೆದಿದೆ. ಕಳಪೆ ಕಾಮಗಾರಿಯಿಂದಾಗಿ ಲಾರಿಯ ಚಕ್ರ ಹೂತು ಹೋಗಿದೆ. ಲಾರಿಯ ಮುಂಭಾಗದ ಎಡ ಚಕ್ರ ಹೂತುಕೊಂಡಿದೆ.

ಬೆಂಗಳೂರು: ಮಳೆಗೆ ಮನೆ ಕುಸಿತ ಭಾರಿ ಮಳೆಗೆ ಬೆಂಗಳೂರು ನಗರದಲ್ಲಿ ಇಂದು (ಅಕ್ಟೋಬರ್ 17) ಮತ್ತೊಂದು ಮನೆ ಕುಸಿದಿದೆ. ಸುಮಾರು 80 ವರ್ಷದ ಹಿಂದೆ ನಿರ್ಮಾಣವಾದ ಮನೆಯೊಂದು ರಾಜಾಜಿನಗರದ ಆರ್.ಜಿ.ಐ ಕಾಲೋನಿಯ ವಾರ್ಡ್ ನಂ. 97 ದಯಾನಂದನಗರದಲ್ಲಿ ಕುಸಿದು ನೆಲಕ್ಕೆ ಉರುಳಿದೆ.

ಮೊನ್ನೆ ರಾತ್ರಿ‌ 9ರ ಸುಮಾರಿಗೆ ಮನೆಯ ಒಂದು ಭಾಗ ಉರುಳಿಬಿದ್ದಿತ್ತು. ಅಕ್ಕಪಕ್ಕದಲೇ ಇರುವ ಮನೆಯ ಗೋಡೆ ಕುಸಿದಿತ್ತು. ಕುಸಿದ ಮನೆಯಲ್ಲಿ 7 ಜನರು ವಾಸವಾಗಿದ್ದರು. ಮನೆ ಕುಸಿದು ಕುಟುಂಬ ಬೀದಿಗೆ ಬಿದ್ದಿತ್ತು. ಪತ್ನಿ ಮನೆ ಕೆಲಸ, ಗಂಡ ಗಾರೆ ಕೆಲಸ‌ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ 7 ಸದಸ್ಯರ ಕುಟುಂಬ ಮನೆ ಇಲ್ಲದೆ ಬಿದ್ದಿಯಲ್ಲೇ ಜೀವನ ಸಾಗಿಸುವಂತಾಗಿತ್ತು. ಊಟ, ನಿದ್ರೆಯಿಲ್ಲದೆ ಬೀದಿಯಲ್ಲೇ ಪರದಾಡುತ್ತಿದ್ದರು. ಮೊನ್ನೆ ರಾತ್ರಿಯೇ ದುರ್ಘಟನೆ ನಡೆದಿದ್ರೂ ಯಾವೊಬ್ಬ ಅಧಿಕಾರಿಯೂ ಇದುವರೆಗೂ ಭೇಟಿ ನೀಡಿಲ್ಲ. ಶಾಸಕ ಹಾಗೂ ಬಿಬಿಎಂಪಿ ಅಧಿಕಾರಿಗಳು ಇಲ್ಲಿಯವರೆಗೂ ಮನೆಯ ಸುತ್ತ ಸುಳಿದಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಉತ್ತರಾಖಂಡ್​​ನಲ್ಲಿ ಭಾರಿ ಮಳೆ ಸಾಧ್ಯತೆ; 13 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ರಕ್ಷಣಾ ತಂಡಗಳು ಸಜ್ಜು

ಇದನ್ನೂ ಓದಿ: Kerala Rain Updates: ಕೇರಳದಲ್ಲಿ ಧಾರಾಕಾರ ಮಳೆ; ಇದುವರೆಗೆ 18 ಮಂದಿ ಸಾವು, ಸೇನೆಯಿಂದ ಸಹಾಯಬೇಕೆಂದ ಪಿಣರಾಯಿ ವಿಜಯನ್​

Published On - 5:54 pm, Sun, 17 October 21

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​