AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಒಂದೇ ದಿನದಲ್ಲಿ 133 ವರ್ಷಗಳ ದಾಖಲೆ ಮುರಿದ ಬೆಂಗಳೂರು ಮಳೆ

ಬೆಂಗಳೂರಿನಲ್ಲಿ ಜೂನ್‌ ತಿಂಗಳಲ್ಲಿ ಒಂದೇ ದಿನ ದಾಖಲೆ ಮಟ್ಟದಲ್ಲಿ ಮಳೆಯಾಗಿದೆ. 133 ವರ್ಷಗಳ ಹಿಂದೆ ಸುರಿದಿದ್ದ ಮಳೆ ಪ್ರಮಾಣ ಕೇವಲ ಒಂದು ದಿನದಲ್ಲಿ ಸುರಿದಿದ್ದು ಹೊಸ ದಾಖಲೆ ಬರೆದಿದೆ. ಮಳೆ ತಿಂಗಳ ಸರಾಸರಿ 110.3ಮಿಮೀ ಮೀರಿದ್ದು, ನಗರದಲ್ಲಿ ಕಳೆದ ಎರಡು ದಿನಗಳಿಂದ 140.7ಮಿಮೀ ಮಳೆಯಾಗಿದೆ.

Bengaluru Rain: ಒಂದೇ ದಿನದಲ್ಲಿ 133 ವರ್ಷಗಳ ದಾಖಲೆ ಮುರಿದ ಬೆಂಗಳೂರು ಮಳೆ
ಬೆಂಗಳೂರು ಮಳೆ
ಆಯೇಷಾ ಬಾನು
|

Updated on: Jun 03, 2024 | 11:24 AM

Share

ಬೆಂಗಳೂರು, ಜೂನ್.03: ನಗರದಲ್ಲಿ ಭಾನುವಾರ ಸಂಜೆ ಸುರಿದ ಮಹಾಮಳೆ ಅವಾಂತರಗಳಿಗೆ ಸಾಕ್ಷಿಯಾಗಿದೆ. ಒಂದೇ ದಿನದಲ್ಲಿ 206 ಮರಗಳು ಧರೆಗುರುಳಿವೆ (Bengaluru Rain). ರಸ್ತೆಗಳಲ್ಲಿ ಮರ ಬಿದ್ದಿದ್ದರಿಂದ ಕಂಬಗಳೂ ಬಿದ್ದು ವಿದ್ಯುತ್‌ ಸಂಪರ್ಕವಿಲ್ಲದೇ ಹಲವು ಪ್ರದೇಶಗಳಲ್ಲಿ ಕಗ್ಗತ್ತಲು ಆವರಿಸಿದೆ. ರಸ್ತೆ ಸಂಚಾರ ಬಂದ್ ಆಗಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಇನ್ನು ಇಡೀ ತಿಂಗಳ ವಾಡಿಕೆ ಮಳೆ ಒಂದೇ ಸಂಜೆ ಸುರಿದಿದ್ದು, ಹೊಸ ದಾಖಲೆ ಸೃಷ್ಟಿಯಾಗಿದೆ. 133 ವರ್ಷಗಳ ಹಿಂದೆ ಸುರಿದಿದ್ದ ಮಳೆ ಪ್ರಮಾಣವನ್ನು ಮೀರಿಸಿ ಹೊಸ ದಾಖಲೆ ಬರೆದಿದೆ.

ನೈಋತ್ಯ ಮಾನ್ಸೂನ್ ಕರ್ನಾಟಕಕ್ಕೆ ಅಪ್ಪಳಿಸುತ್ತಿರುವುದರಿಂದ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯು (IMD) ಬೆಂಗಳೂರಿಗೆ ಹಳದಿ ಅಲರ್ಟ್ ನೀಡಿದೆ. ಸೋಮವಾರ ಮೋಡ ಕವಿದ ವಾತಾವರಣದೊಂದಿಗೆ ಕೆಲವು ಕಡೆ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಜೂನ್ 5 ರವರೆಗೆ ಮಳೆ ಮುಂದುವರೆಯುವ ನಿರೀಕ್ಷೆಯಿದೆ.

ಇನ್ನು @Bnglrweatherman ಅವರು ಎಕ್ಸ್‌ನಲ್ಲಿ ಹಂಚಿಕೊಂಡ ಪೋಸ್ಟ್ ಪ್ರಕಾರ, ಬೆಂಗಳೂರಿನಲ್ಲಿ ಜೂನ್‌ ತಿಂಗಳಲ್ಲಿ ಒಂದೇ ದಿನ ದಾಖಲೆ ಮಟ್ಟದಲ್ಲಿ ಮಳೆಯಾಗಿದೆ. 133 ವರ್ಷಗಳ ಹಿಂದೆ ಸುರಿದಿದ್ದ ಮಳೆ ಪ್ರಮಾಣ ಕೇವಲ ಒಂದು ದಿನದಲ್ಲಿ ಸುರಿದಿದ್ದು ಹೊಸ ದಾಖಲೆ ಬರೆದಿದೆ. ಮಳೆ ತಿಂಗಳ ಸರಾಸರಿ 110.3ಮಿಮೀ ಮೀರಿದ್ದು, ನಗರದಲ್ಲಿ ಕಳೆದ ಎರಡು ದಿನಗಳಿಂದ 140.7ಮಿಮೀ ಮಳೆಯಾಗಿದೆ.

ಇದನ್ನೂ ಓದಿ: Bangalore Rains: ಬೆಂಗಳೂರು ಮಳೆ; ವರುಣನಿಂದ ಸೃಷ್ಟಿಯಾದ ಅವಾಂತರಗಳು ಒಂದಾ ಎರಡಾ, 206 ಮರಗಳು ಧರಾಶಾಹಿ

ಬೆಂಗಳೂರಿನಲ್ಲಿ ಜೂನ್ 2ರಿಂದ 5ರ ವರೆಗೆ ಗುಡುಗು ಸಹಿತ ಮಳೆ ಹಾಗೂ ಮೋಡ ಕವಿದ ವಾತಾವರಣ ಇರಲಿದೆ. ಬಳಿಕ ಜೂನ್ 8 ಮತ್ತು 9 ರಂದು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಮಳೆಗೆ ಭಾರೀ ಅವಾಂತರ

ಭಾನುವಾರ ಸುರಿದ ಮಳೆಯಿಂದಾಗಿ ನಗರದ ಹಲವು ಭಾಗಗಳಲ್ಲಿ ರಸ್ತೆಗಳು ಜಲಾವೃತಗೊಂಡಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಕಳೆದ ರಾತ್ರಿ ಹೆಬ್ಬಾಳ ಅಂಡರ್‌ಪಾಸ್‌, ಕೆಎಫ್‌ಸಿ ರಸ್ತೆಯಿಂದ ಗುಂಜೂರು ರಸ್ತೆ, ಚಿಕ್ಕಜಾಲ ಕೋಟೆ ಕ್ರಾಸ್‌, ಬೆನ್ನಿಗಾನಹಳ್ಳಿ ರೈಲ್ವೆ ಸೇತುವೆ, ಹೆಬ್ಬಾಳ ವೃತ್ತದಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್