AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರಿಗೆ ಅಧಿಕಾರದ ಚಿಂತೆ ನಮಗೆ ಮಳೆಗೆ ಬೆಂಗಳೂರು ರಸ್ತೆಯ ಚಿಂತೆ; ಮಂತ್ರಿಗಿರಿಗಾಗಿ ಲಾಬಿ ಮತ್ತೆ ಮಾಡಿ ಮೊದಲು ನಮ್ಮ ಕಷ್ಟ ನೋಡಿ

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಗರದ ಮೂಲಸೌಕರ್ಯದ ಅಸಲಿ ಬಣ್ಣ ಬಯಲಾಗಿದೆ. ಮಹದೇವಪುರ, ಆರ್.ಆರ್. ನಗರ ಸೇರಿದಂತೆ ಹಲವು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡು ರಸ್ತೆಗಳು ನರಕಸದೃಶವಾಗಿವೆ. ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದು, ರಾಜಕಾಲುವೆಗಳ ಅಶುಚಿತ್ವವೇ ಇದಕ್ಕೆ ಕಾರಣ. ಬಿಬಿಎಂಪಿ ಮತ್ತು 'ಬ್ರ್ಯಾಂಡ್ ಬೆಂಗಳೂರು' ಪರಿಕಲ್ಪನೆಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಕೂಡಲೇ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಅವರಿಗೆ ಅಧಿಕಾರದ ಚಿಂತೆ ನಮಗೆ ಮಳೆಗೆ ಬೆಂಗಳೂರು ರಸ್ತೆಯ ಚಿಂತೆ; ಮಂತ್ರಿಗಿರಿಗಾಗಿ ಲಾಬಿ ಮತ್ತೆ ಮಾಡಿ ಮೊದಲು ನಮ್ಮ ಕಷ್ಟ ನೋಡಿ
ಬೆಂಗಳೂರಿನಲ್ಲಿ ಮಳೆ
ಅಕ್ಷಯ್​ ಪಲ್ಲಮಜಲು​​
|

Updated on:May 30, 2026 | 8:51 AM

Share

ಬೆಂಗಳೂರು, ಮೇ.30 : ಮಳೆಯಿಂದ ಜನರು ಪರದಾಡುತ್ತಿದ್ದಾರೆ. ಆದರೆ ಇದರ ಚಿಂತೆ ಜನಪ್ರತಿನನಿಧಿಗಳಿಗೆ ಇಲ್ಲದಂತೆ ಕಾಣಿಸುತ್ತಿದೆ. ಅವರಿಗೆ ಮಂತ್ರಿಗಿರಿಯ ಚಿಂತೆ ಇರುವಾಗ ಈ ಸಂಕಷ್ಟಗಳು ಕಾಣುವುದಿಲ್ಲ ಎಂದು ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಕೇವಲ ಒಂದೇ ಒಂದು ಭಾರಿ ಮಳೆಗೆ ರಾಜಧಾನಿಯ ಮೂಲಸೌಕರ್ಯದ ಅಸಲಿ ಬಣ್ಣ ಬಯಲಾಗಿದೆ. ನಗರದ ಪ್ರಮುಖ ಐಟಿ ಹಬ್ ಆಗಿರುವ ಮಹದೇವಪುರ ಮತ್ತು ರಾಜರಾಜೇಶ್ವರಿ ನಗರ (RR Nagar) ಸೇರಿದಂತೆ ಹಲವು ಭಾಗಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆಗಳು ವಾಹನ ಸವಾರರ ಪಾಲಿಗೆ ನರಕಸದೃಶವಾಗಿ ಮಾರ್ಪಟ್ಟಿವೆ. ಬಿಬಿಎಂಪಿ (BBMP) ಹಾಗೂ ನಗರಾಭಿವೃದ್ಧಿ ಸಚಿವರ ‘ಬ್ರ್ಯಾಂಡ್ ಬೆಂಗಳೂರು’ (Brand Bengaluru) ಪರಿಕಲ್ಪನೆಯನ್ನು ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಹದೇವಪುರದ ಮುಖ್ಯ ರಸ್ತೆಗಳು ಮತ್ತು ಲೇಔಟ್‌ಗಳು ಮಳೆನೀರಿನಿಂದ ತುಂಬಿ ತುಳುಕುತ್ತಿದ್ದು, ರಸ್ತೆಗಳು ಇಟಲಿಯ ವೆನಿಸ್ ನಗರದ ಕಾಲುವೆಗಳಂತೆ ಕಾಣಿಸುತ್ತಿವೆ. “ನಮ್ಮ ಇಲಾಖೆಗಳು ರಸ್ತೆಗಳನ್ನು ರಿಪೇರಿ ಮಾಡದಿದ್ದರೂ ನಮಗೆ ರಸ್ತೆಯಲ್ಲೇ ಬೀಚ್ ವೈಬ್ಸ್ (Beach Vibes) ಸಿಗುವಂತೆ ಮಾಡಿದ್ದಾರೆ” ಎಂದು ನಾಗರಿಕರು ವ್ಯಂಗ್ಯವಾಡಿದ್ದಾರೆ. ಸರಿಯಾದ ರಸ್ತೆ ಯೋಜನೆ ಇಲ್ಲದಿರುವುದು ಹಾಗೂ ಮಳೆಗಾಲಕ್ಕೂ ಮುನ್ನ ರಾಜಕಾಲುವೆ ಮತ್ತು ಡ್ರೈನೇಜ್‌ಗಳನ್ನು ಸಮರ್ಪಕವಾಗಿ ಸ್ವಚ್ಛಗೊಳಿಸದ ಕಾರಣ, ನೀರು ಸರಾಗವಾಗಿ ಹರಿದು ಹೋಗದೆ ರಸ್ತೆಯ ಮೇಲೆಯೇ ನಿಲ್ಲುತ್ತಿದ್ದು, ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಸೃಷ್ಟಿಸುತ್ತಿದೆ. ಈ ಬಗ್ಗೆ ಕೆಲವೊಂದು ವಿಡಿಯೋಗಳನ್ನು @Karnataka Portfolio ಎಂಬ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ವರುಣಾರ್ಭಟ: ರಸ್ತೆಗಳು ಜಲಾವೃತ, ಸಂಚಾರ ವ್ಯತ್ಯಯ

ಇದು ಆರ್​​​ಆರ್​​​ ನಗರದ ವಿಡಿಯೋ:

ಬೆಂಗಳೂರಿನಲ್ಲಿ ಹೊಸ ‘ಹಿಡನ್ ಲೇಕ್ಸ್’:

ಮಹಾದೇವಪುರದ ಸ್ಥಿತಿ ಹೇಗಿದೆ ನೋಡಿ:

“ಬೆಂಗಳೂರಿನ ಮಳೆಗಾಲದಲ್ಲಿ ನೀವು ಎಲ್ಲೂ ಹೋಗಬೇಕಾಗಿಲ್ಲ, ಬಿಬಿಎಂಪಿಯ ಅಭಿವೃದ್ಧಿ ಕಾಮಗಾರಿಗಳ ದಯೆಯಿಂದ ರಸ್ತೆಗಳಲ್ಲೇ ಹೊಸ ‘ಹಿಡನ್ ಲೇಕ್ಸ್’ (Hidden Lakes) ಸೃಷ್ಟಿಯಾಗಿವೆ, ಇವುಗಳನ್ನು ಒಮ್ಮೆ ವಿಸಿಟ್ ಮಾಡಿ!” ಎಂದು ಸಾರ್ವಜನಿಕರು ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೋಟ್ಯಂತರ ರೂಪಾಯಿ ತೆರಿಗೆ ಪಾವತಿಸುವ ನಾಗರಿಕರಿಗೆ ಪ್ರತಿ ಮಳೆಗಾಲದಲ್ಲೂ ಇಂತಹ ಜಲಾವೃತ ರಸ್ತೆಗಳೇ ಸಿಗುತ್ತಿರುವುದು ದುರ್ದೈವದ ಸಂಗತಿಯಾಗಿದೆ. ಬಿಬಿಎಂಪಿ ಮತ್ತು ಮುನ್ಸಿಪಲ್ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ನೀರು ನಿಲ್ಲುವ ಹಾಟ್‌ಸ್ಪಾಟ್‌ಗಳನ್ನು ಮುಕ್ತಗೊಳಿಸಬೇಕೆಂದು ಸಾರ್ವಜನಿಕರು ಕಟ್ಟುನಿಟ್ಟಿನ ಆಗ್ರಹ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:50 am, Sat, 30 May 26

Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ