ಅವರಿಗೆ ಅಧಿಕಾರದ ಚಿಂತೆ ನಮಗೆ ಮಳೆಗೆ ಬೆಂಗಳೂರು ರಸ್ತೆಯ ಚಿಂತೆ; ಮಂತ್ರಿಗಿರಿಗಾಗಿ ಲಾಬಿ ಮತ್ತೆ ಮಾಡಿ ಮೊದಲು ನಮ್ಮ ಕಷ್ಟ ನೋಡಿ

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಗರದ ಮೂಲಸೌಕರ್ಯದ ಅಸಲಿ ಬಣ್ಣ ಬಯಲಾಗಿದೆ. ಮಹದೇವಪುರ, ಆರ್.ಆರ್. ನಗರ ಸೇರಿದಂತೆ ಹಲವು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡು ರಸ್ತೆಗಳು ನರಕಸದೃಶವಾಗಿವೆ. ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದು, ರಾಜಕಾಲುವೆಗಳ ಅಶುಚಿತ್ವವೇ ಇದಕ್ಕೆ ಕಾರಣ. ಬಿಬಿಎಂಪಿ ಮತ್ತು 'ಬ್ರ್ಯಾಂಡ್ ಬೆಂಗಳೂರು' ಪರಿಕಲ್ಪನೆಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಕೂಡಲೇ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಅವರಿಗೆ ಅಧಿಕಾರದ ಚಿಂತೆ ನಮಗೆ ಮಳೆಗೆ ಬೆಂಗಳೂರು ರಸ್ತೆಯ ಚಿಂತೆ; ಮಂತ್ರಿಗಿರಿಗಾಗಿ ಲಾಬಿ ಮತ್ತೆ ಮಾಡಿ ಮೊದಲು ನಮ್ಮ ಕಷ್ಟ ನೋಡಿ
ಬೆಂಗಳೂರಿನಲ್ಲಿ ಮಳೆ

Updated on: May 30, 2026 | 8:51 AM

ಬೆಂಗಳೂರು, ಮೇ.30 : ಮಳೆಯಿಂದ ಜನರು ಪರದಾಡುತ್ತಿದ್ದಾರೆ. ಆದರೆ ಇದರ ಚಿಂತೆ ಜನಪ್ರತಿನನಿಧಿಗಳಿಗೆ ಇಲ್ಲದಂತೆ ಕಾಣಿಸುತ್ತಿದೆ. ಅವರಿಗೆ ಮಂತ್ರಿಗಿರಿಯ ಚಿಂತೆ ಇರುವಾಗ ಈ ಸಂಕಷ್ಟಗಳು ಕಾಣುವುದಿಲ್ಲ ಎಂದು ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಕೇವಲ ಒಂದೇ ಒಂದು ಭಾರಿ ಮಳೆಗೆ ರಾಜಧಾನಿಯ ಮೂಲಸೌಕರ್ಯದ ಅಸಲಿ ಬಣ್ಣ ಬಯಲಾಗಿದೆ. ನಗರದ ಪ್ರಮುಖ ಐಟಿ ಹಬ್ ಆಗಿರುವ ಮಹದೇವಪುರ ಮತ್ತು ರಾಜರಾಜೇಶ್ವರಿ ನಗರ (RR Nagar) ಸೇರಿದಂತೆ ಹಲವು ಭಾಗಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆಗಳು ವಾಹನ ಸವಾರರ ಪಾಲಿಗೆ ನರಕಸದೃಶವಾಗಿ ಮಾರ್ಪಟ್ಟಿವೆ. ಬಿಬಿಎಂಪಿ (BBMP) ಹಾಗೂ ನಗರಾಭಿವೃದ್ಧಿ ಸಚಿವರ ‘ಬ್ರ್ಯಾಂಡ್ ಬೆಂಗಳೂರು’ (Brand Bengaluru) ಪರಿಕಲ್ಪನೆಯನ್ನು ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಹದೇವಪುರದ ಮುಖ್ಯ ರಸ್ತೆಗಳು ಮತ್ತು ಲೇಔಟ್‌ಗಳು ಮಳೆನೀರಿನಿಂದ ತುಂಬಿ ತುಳುಕುತ್ತಿದ್ದು, ರಸ್ತೆಗಳು ಇಟಲಿಯ ವೆನಿಸ್ ನಗರದ ಕಾಲುವೆಗಳಂತೆ ಕಾಣಿಸುತ್ತಿವೆ. “ನಮ್ಮ ಇಲಾಖೆಗಳು ರಸ್ತೆಗಳನ್ನು ರಿಪೇರಿ ಮಾಡದಿದ್ದರೂ ನಮಗೆ ರಸ್ತೆಯಲ್ಲೇ ಬೀಚ್ ವೈಬ್ಸ್ (Beach Vibes) ಸಿಗುವಂತೆ ಮಾಡಿದ್ದಾರೆ” ಎಂದು ನಾಗರಿಕರು ವ್ಯಂಗ್ಯವಾಡಿದ್ದಾರೆ. ಸರಿಯಾದ ರಸ್ತೆ ಯೋಜನೆ ಇಲ್ಲದಿರುವುದು ಹಾಗೂ ಮಳೆಗಾಲಕ್ಕೂ ಮುನ್ನ ರಾಜಕಾಲುವೆ ಮತ್ತು ಡ್ರೈನೇಜ್‌ಗಳನ್ನು ಸಮರ್ಪಕವಾಗಿ ಸ್ವಚ್ಛಗೊಳಿಸದ ಕಾರಣ, ನೀರು ಸರಾಗವಾಗಿ ಹರಿದು ಹೋಗದೆ ರಸ್ತೆಯ ಮೇಲೆಯೇ ನಿಲ್ಲುತ್ತಿದ್ದು, ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಸೃಷ್ಟಿಸುತ್ತಿದೆ. ಈ ಬಗ್ಗೆ ಕೆಲವೊಂದು ವಿಡಿಯೋಗಳನ್ನು @Karnataka Portfolio ಎಂಬ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ವರುಣಾರ್ಭಟ: ರಸ್ತೆಗಳು ಜಲಾವೃತ, ಸಂಚಾರ ವ್ಯತ್ಯಯ

ಇದು ಆರ್​​​ಆರ್​​​ ನಗರದ ವಿಡಿಯೋ:

ಬೆಂಗಳೂರಿನಲ್ಲಿ ಹೊಸ ‘ಹಿಡನ್ ಲೇಕ್ಸ್’:

ಮಹಾದೇವಪುರದ ಸ್ಥಿತಿ ಹೇಗಿದೆ ನೋಡಿ:


“ಬೆಂಗಳೂರಿನ ಮಳೆಗಾಲದಲ್ಲಿ ನೀವು ಎಲ್ಲೂ ಹೋಗಬೇಕಾಗಿಲ್ಲ, ಬಿಬಿಎಂಪಿಯ ಅಭಿವೃದ್ಧಿ ಕಾಮಗಾರಿಗಳ ದಯೆಯಿಂದ ರಸ್ತೆಗಳಲ್ಲೇ ಹೊಸ ‘ಹಿಡನ್ ಲೇಕ್ಸ್’ (Hidden Lakes) ಸೃಷ್ಟಿಯಾಗಿವೆ, ಇವುಗಳನ್ನು ಒಮ್ಮೆ ವಿಸಿಟ್ ಮಾಡಿ!” ಎಂದು ಸಾರ್ವಜನಿಕರು ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೋಟ್ಯಂತರ ರೂಪಾಯಿ ತೆರಿಗೆ ಪಾವತಿಸುವ ನಾಗರಿಕರಿಗೆ ಪ್ರತಿ ಮಳೆಗಾಲದಲ್ಲೂ ಇಂತಹ ಜಲಾವೃತ ರಸ್ತೆಗಳೇ ಸಿಗುತ್ತಿರುವುದು ದುರ್ದೈವದ ಸಂಗತಿಯಾಗಿದೆ. ಬಿಬಿಎಂಪಿ ಮತ್ತು ಮುನ್ಸಿಪಲ್ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ನೀರು ನಿಲ್ಲುವ ಹಾಟ್‌ಸ್ಪಾಟ್‌ಗಳನ್ನು ಮುಕ್ತಗೊಳಿಸಬೇಕೆಂದು ಸಾರ್ವಜನಿಕರು ಕಟ್ಟುನಿಟ್ಟಿನ ಆಗ್ರಹ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 8:50 am, Sat, 30 May 26

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us