Bangalore Rains: ಬೆಂಗಳೂರಿನಲ್ಲಿ ಹಲವೆಡೆ ಇಂದೂ ಮುಂದುವರೆದ ಮಳೆ ಅವಾಂತರ; ರಸ್ತೆಗಳು ಜಲಾವೃತ

ಬೆಂಗಳೂರು ಮಳೆ ಅವಾಂತರ: ರಾಜಧಾನಿ ಬೆಂಗಳೂರು ಅಕ್ಷರಶಃ ಮಳೆನಾಡಾಗಿ ಬದಲಾಗಿದೆ. ಬಿಡುವೇ ಕೊಡದಂತೆ ವರುಣ ರುದ್ರನರ್ತನ ತೋರುತ್ತಿದ್ದಾನೆ. ಇದೀಗ ಇಂದೂ ಕೂಡ ನಗರದಲ್ಲಿ ಧಾರಾಕಾರ ಮಳೆ ಆಗಿದ್ದು, ಮತ್ತೆ ಅವಾಂತರಗಳು ಸೃಷ್ಟಿಯಾಗಿವೆ. ಹಲವೆಡೆ ಸುರಿಯುತ್ತಿರುವ ಭಾರೀ ಮಳೆಗೆ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಬೃಹದಾಕಾರ ಮರ ಧರೆಗುರುಳಿದಿದೆ.

Follow us
|

Updated on:Oct 23, 2024 | 5:10 PM

ಬೆಂಗಳೂರು, ಅಕ್ಟೋಬರ್​ 23: ನಗರದಲ್ಲಿ ಕಳೆದ ಒಂದು ವಾರದಿಂದ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಮಳೆ (rain) ಕೊಂಚ ವಿರಾಮ ನೀಡಿತ್ತು. ನಿನ್ನೆ ಸಂಜೆಯಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆರಾಯ ಇಂದು ಸಂಜೆಯಾಗುತ್ತಿದ್ದಂತೆ ಮತ್ತೆ ಎಂಟ್ರಿಕೊಟ್ಟಿದ್ದಾರೆ. ಆ ಮೂಲಕ ಸಿಟಿ ಮಂದಿ ಮತ್ತೆ ಕಂಗಾಲಾಗಿದ್ದಾರೆ.  ಹಲವೆಡೆ ಸುರಿಯುತ್ತಿರುವ ಭಾರೀ ಮಳೆಗೆ ಮಲ್ಲೇಶ್ವರಂನ ಹಳ್ಳಿ ಮನೆ ಮುಂದೆ ಬೃಹದಾಕಾರ ಮರ ಧರೆಗುರುಳಿದು ಅವಾಂತರ ಸೃಷ್ಟಿಯಾಗಿದೆ.

ಬೆಂಗಳೂರಿನಲ್ಲಿ ಎಲ್ಲೆಲ್ಲಿ ಮಳೆ?

ವಿಧಾನಸೌಧ, ಕೆ.ಆರ್.ಸರ್ಕಲ್‌, ಮೈಸೂರು ಬ್ಯಾಂಕ್ ಸರ್ಕಲ್​, ಮೆಜೆಸ್ಟಿಕ್‌, ಕೆ.ಆರ್‌.ಮಾರ್ಕೆಟ್‌, ಕಾರ್ಪೊರೇಷನ್ ಸರ್ಕಲ್​ ಶಾಂತಿನಗರ ಮತ್ತು ರಿಚ್ಮಂಡ್‌ ಸರ್ಕಲ್‌, ಡಾಲರ್ಸ್ ಕಾಲೋನಿ, ಹೆಬ್ಬಾಳ, ಸಂಜಯ್ ನಗರ, ಬಿಇಎಲ್ ರೋಡ್, ಎಂಎಸ್ ರಾಮಯ್ಯ ಆಸ್ಪತ್ರೆ ಸೇರಿದಂತೆ ಹಲವೆಡೆ ಭಾರೀ ಮಳೆ ಆಗಿದೆ. ಕೆಂಗೀರಿ ಸುತ್ತಮುತ್ತ ಜಿಟಿ‌ ಜಿಟಿ ಮಳೆ ಆರಂಭವಾಗಿದ್ದರೆ, ಜಯನಗರ 7ನೇ ಹಂತದಲ್ಲಿ ಸುಮಾರು 30 ನಿಮಿಷದಿಂದ ಜೋರು ಗಾಳಿ ಜೊತೆಗೆ ಧಾರಾಕಾರ ಮಳೆ ಸುರಿಯುತ್ತಿದೆ.

ಇದನ್ನೂ ಓದಿ: ಕರ್ನಾಟಕದ ಹಲವೆಡೆ ಮುಂದಿನ 6 ದಿನ ಭರ್ಜರಿ ಮಳೆ: ಇಂದಿನ ಹವಾಮಾನ ವರದಿ ನೋಡಿ

ಧಾರಾಕಾರ ಮಳೆಗೆ ಮ್ಯಾನ್ ಹೋಲ್ ಓಪನ್ ಆಗಿ ನೀರು ಉಕ್ಕಿ ಹರಿದಿದೆ. ಪರಿಣಾಮ ಶಾಂತಿನಗರದ ಬಿಟಿಎಸ್ ರಸ್ತೆ ಕೆಸರು ಮಯವಾಗಿದೆ. ನೀರು ತುಬಿಕೊಂಡ ಹಿನ್ನಲೆ ಗುಂಡಿಗಳು ಕಾಣದಂತಾಗಿದ್ದು, ಬೈಕ್ ಸವಾರರು ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಮತ್ತೆ ಮಳೆ ಎಚ್ಚರಿಕೆ: ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ

ಗುಂಡಿಯಲ್ಲಿ ಆಟೋ ರಿಕ್ಷಾಯೊಂದು ಸಿಲುಕಿಕೊಂಡಿದ್ದು, ಮುಂದಕ್ಕೆ ಹೋಗುವುದಕ್ಕೆ ಆಗದೇ ಪರದಾಡುವಂತಾಗಿದೆ. ರಸ್ತೆ ಗುಂಡಿ ನೋಡಿ ಬಿಬಿಎಂಪಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿ ರಸ್ತೆಯಲ್ಲಿ ಹೇಗೆ ಓಡಾಡೋದು. ನೋಡಿ ಸ್ವಲ್ಪ ಯಾಮರಿದರೂ ನಾನು ಬೀಳುತ್ತಿದ್ದೆ. ದಯವಿಟ್ಟು ಮೊದಲು ರಸ್ತೆ ಗುಂಡಿಗಳನ್ನು ಮುಚ್ಚಿ. ರಾಜಕಾಲುವೆಗೆ ಪೈಂಟ್ ಹೊಡೆದು ಹಣ ಹೊಡೆಯುತ್ತಿದ್ದಾರೆ. ಆದರೆ ರಾಜಕಾಲುವೆಯಲ್ಲಿ ಬರೀ ಕೊಳಚೆ ನೀರು ಹೋಗುತ್ತಿದೆ ಅಂತ ಆಕ್ರೋಶ ಹೊರಹಾಕಿದ್ದಾರೆ.

ಮತ್ತಷ್ಟು ಮಳೆಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 4:43 pm, Wed, 23 October 24

ತನ್ನನ್ನು ತಾನೇ ನಾಮಿನೇಟ್ ಮಾಡಿಕೊಂಡ ಹನುಮಂತ; ಈ ವಾರವೇ ಔಟ್?
ತನ್ನನ್ನು ತಾನೇ ನಾಮಿನೇಟ್ ಮಾಡಿಕೊಂಡ ಹನುಮಂತ; ಈ ವಾರವೇ ಔಟ್?
ಡಿಕೆ ಸುರೇಶ್ ಗೆಲುವು ಮತ್ತು ಸೋಲು ಎರಡಕ್ಕೂ ಕಾರಣನಾಗಿದ್ದೇನೆ: ಯೋಗೇಶ್ವರ್
ಡಿಕೆ ಸುರೇಶ್ ಗೆಲುವು ಮತ್ತು ಸೋಲು ಎರಡಕ್ಕೂ ಕಾರಣನಾಗಿದ್ದೇನೆ: ಯೋಗೇಶ್ವರ್
ಹೆಚ್ ಡಿ ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು
ಹೆಚ್ ಡಿ ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು