AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಳೆಗೆ ಮತ್ತಿಬ್ಬರು ಬಲಿ: ನುಗ್ಗಿ ಬಂದ ನೀರು ಖಾಲಿ ಮಾಡುವ ವೇಳೆ ದುರ್ಘಟನೆ

ಬೆಂಗಳೂರಿನಲ್ಲಿ ಮಳೆಯಿಂದ ಮತ್ತಿಬ್ಬರು ಸಾವನ್ನಪ್ಪಿರುವಂತಹ ದುರ್ಘಟನೆ ಬಿಟಿಎಂ ಲೇಔಟ್​ನ 2ನೇ ಹಂತದ ಎನ್.ಎಸ್.ಪಾಳ್ಯದ ಮಧುವನ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​ನಲ್ಲಿ ನಡೆದಿದೆ. ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಎಲೆಕ್ಟ್ರಿಕ್ ಶಾಕ್​ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಮೈಕೋ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಳೆಗೆ ಮತ್ತಿಬ್ಬರು ಬಲಿ: ನುಗ್ಗಿ ಬಂದ ನೀರು ಖಾಲಿ ಮಾಡುವ ವೇಳೆ ದುರ್ಘಟನೆ
ಮಧುವನ ಅಪಾರ್ಟ್​ಮೆಂಟ್​
Shivaprasad B
| Edited By: |

Updated on:May 19, 2025 | 10:35 PM

Share

ಬೆಂಗಳೂರು, ಮೇ 19: ಎಡೆಬಿಡದೆ ಸುರಿಯುತ್ತಿರುವ ಮಳೆ (rain) ನಗರದಲ್ಲಿ ನೂರೆಂಟು ಅವಾಂತರಗಳನ್ನು ಸೃಷ್ಟಿಸಿದೆ. ಇಂದು ಬೆಳ್ಳಿಗೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದರು (death). ಇದರ ಬೆನ್ನಲ್ಲೇ ಇದೀಗ ಮಳೆಯಿಂದ ಮತ್ತಿಬ್ಬರು ಸಾವನ್ನಪ್ಪಿರುವಂತಹ ಘಟನೆ ಬಿಟಿಎಂ ಲೇಔಟ್​ನ 2ನೇ ಹಂತದ ಎನ್.ಎಸ್.ಪಾಳ್ಯದಲ್ಲಿ ನಡೆದಿದೆ. ಮಧುವನ ಅಪಾರ್ಟ್​ಮೆಂಟ್​ನ ನಿವಾಸಿ 55 ವರ್ಷದ ಮನೋಹರ ಕಾಮತ್​​ ಮತ್ತು ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ಮೃತರು.

ಮಳೆಯಿಂದ ಮಧುವನ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​ ಜಲಾವೃತವಾಗಿತ್ತು. ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಎಲೆಕ್ಟ್ರಿಕ್ ಶಾಕ್​ನಿಂದ ಮನೋಹರ ಕಾಮತ್ ಮತ್ತು ದಿನೇಶ್ ದುರ್ಮರಣ ಹೊಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ವರುಣಾರ್ಭಟಕ್ಕೆ ಮೊದಲ ಬಲಿ: ಯಾವ್ಯಾವ ಏರಿಯಾದಲ್ಲಿ ಎಷ್ಟು ಮಳೆ? ಇಲ್ಲಿದೆ ವಿವರ

ಇದನ್ನೂ ಓದಿ
Image
ಮಳೆಗೆ ಸಣ್ಣಪುಟ್ಟ ಸಮಸ್ಯೆ ಆಗೇ ಆಗುತ್ತೆ: ಬಿಬಿಎಂಪಿ ಆಯುಕ್ತ ಉಡಾಫೆ ಮಾತು!
Image
ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ
Image
ಬೆಂಗಳೂರು ಮಳೆ ಸೃಷ್ಟಿಸಿದ ಅಧ್ವಾನ ಒಂದೆರಡಲ್ಲ; ಎಲ್ಲೆಲ್ಲಿ ಏನೇನಾಯ್ತು ನೋಡಿ
Image
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಹುಚ್ಚು ಮಳೆ

ಸ್ಥಳಕ್ಕೆ ಮೈಕೋ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವಗಳು ಸೇಂಟ್ ಜಾನ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ಮಧುವನ ಅಪಾರ್ಟ್​ಮೆಂಟ್​ಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ.

ಗೋಡೆ ಕುಸಿದು ಮಹಿಳೆ ಸಾವು

ಪ್ರತಿರಾತ್ರಿ ನಗರವಾಸಿಗಳಿಗೆ ಕಾಡುತ್ತಿರುವ ಮಳೆ ನಿನ್ನೆ ಭಾರಿ ಹೊಡೆತ ಕೊಟ್ಟಿದೆ. ಗುಡುಗು ಸಹಿತ ಮಳೆಗೆ ವೈಟ್‌ಫೀಲ್ಡ್‌ನಲ್ಲಿ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಚನ್ನಸಂದ್ರ ಬಳಿ ಬೃಹತ್ ಕಾಂಪೌಂಡ್​ನ ಗೋಡೆ ಕುಸಿದಿದ್ದು, ಕೆಲಸಕ್ಕೆಂದು ಹೋಗುತ್ತಿದ್ದ ಶಶಿಕಲಾ ಎಂಬ ಮಹಿಳೆ ಮೇಲೆ ಬಿದ್ದು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಇದನ್ನೂ ಓದಿ: ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಮ್

ಸೊಂಟದೆತ್ತರದ ನೀರಲ್ಲಿ ಬಸ್ಸು ಸಿಲುಕಿಕೊಂಡಿದ್ದರೆ ಒಳಗಡೆ ಓರ್ವ ಗರ್ಭಿಣಿ ಸಿಲುಕಿ ಪರದಾಡಿದ್ದರು. ನಗರದ ಸಿಲ್ಕ್​​ಬೋರ್ಡ್​ನಲ್ಲಿ ಘಟನೆ ನಡೆದಿತ್ತು. ತಡರಾತ್ರಿ ಮಳೆಗೆ ರಸ್ತೆಯಲ್ಲಿ ಸೊಂಟದೆತ್ತರಕ್ಕೆ ನೀರು ನಿಂತಿತ್ತು. ಅದೇ ನೀರಲ್ಲಿ ಬರಲು ಸಾಹಸ ಮಾಡಿದ ಬಿಎಂಟಿಸಿ ಬಸ್​ ಏಕಾಏಕಿ ಮಧ್ಯದಲ್ಲಿ ಕೆಟ್ಟು ನಿಂತಿತ್ತು. ಪ್ರಯಾಣಿಕರನ್ನ ಕಿಟಕಿ ಮೂಲಕ ಕೆಳಗಿಳಿಸಲಾಗಿತ್ತು. ಆದರೆ ಓರ್ವ ಗರ್ಭಿಣಿಯೂ ಬಸ್​ನಲ್ಲಿ ಸಿಲುಕಿಕೊಂಡಿದ್ದರು. ಬಳಿಕ ಜೆಸಿಬಿ ಮೂಲಕ ತಳ್ಳಿ ಬಸ್​ನ್ನ ನೀರಿನಿಂದ ಹೊರತಂದು ಗರ್ಭಿಣಿಯನ್ನ ರಕ್ಷಿಸಲಾಯ್ತು.

ಸಿಡಿಲು ಬಡಿದು ವೃದ್ಧ ಸ್ಥಳದಲ್ಲೇ ಸಾವು

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಉಳವರೆ ಗ್ರಾಮದಲ್ಲಿ ಸಿಡಿಲು ಬಡಿದು ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಉಳವರೆ ಗ್ರಾಮದ ತಮ್ಮಣ್ಣಿ ಅನಂತಗೌಡ(65) ಮೃತ ದುರ್ದೈವಿ. ಕಳೆದ ವರ್ಷ ಶಿರೂರು ಭೂಕುಸಿತ ದುರಂತದಲ್ಲಿ ಸ್ವಲ್ಪದರಲ್ಲೇ ಪಾರಾಗಿದ್ದರು. ಅಂಕೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:23 pm, Mon, 19 May 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್