AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ದೇವನಹಳ್ಳಿಯಲ್ಲಿ ಭಾರಿ ಮಳೆ: 19 ವಿಮಾನಗಳ ಲ್ಯಾಂಡಿಂಗ್​​ನಲ್ಲಿ ವ್ಯತ್ಯಯ, 8 ವಿಮಾನಗಳು ಚೆನ್ನೈಗೆ ವಾಪಸ್​

ರಾಜ್ಯ ರಾಜಧಾನಿಯಲ್ಲಿ ಇಂದು ಹಲವೆಡೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಸುಮಾರು 8 ವಿಮಾನಗಳನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಚೆನ್ನೈಗೆ ಡೈವರ್ಟ್ ಮಾಡಲಾಗಿದೆ.

Bengaluru Rains: ದೇವನಹಳ್ಳಿಯಲ್ಲಿ ಭಾರಿ ಮಳೆ: 19 ವಿಮಾನಗಳ ಲ್ಯಾಂಡಿಂಗ್​​ನಲ್ಲಿ ವ್ಯತ್ಯಯ, 8 ವಿಮಾನಗಳು ಚೆನ್ನೈಗೆ ವಾಪಸ್​
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 04, 2023 | 7:17 PM

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂದು ಹಲವೆಡೆ ಧಾರಾಕಾರ ಮಳೆ (Rain) ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಸುಮಾರು 8 ವಿಮಾನಗಳನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಚೆನ್ನೈಗೆ ಡೈವರ್ಟ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಭಾರಿ ಮಳೆ ಹಿನ್ನೆಲೆ 19 ವಿಮಾನಗಳ ಲ್ಯಾಂಡಿಂಗ್​​ನಲ್ಲಿ ವ್ಯತ್ಯಯ ಉಂಟಾಗಿದ್ದು, ಬೇರೆ ಏರ್​ಪೋರ್ಟ್​​​ಗೆ ಡೈವರ್ಟ್ ಮಾಡಲಾಗಿದೆ. ಕೆಲ ವಿಮಾನಗಳು ಚೆನ್ನೈ, ಹೈದರಾಬಾದ್,​ ಕೋಲ್ಕತ್ತಾ, ಜೋಧ್​ಪುರ​, ಮುಂಬೈ, ರಾಜ್​ಕೋಟ್​​, ದುಬೈ, ಪಾಟ್ನಾ, ಬರೇಲಿ ಮತ್ತು ಇಂದೋರ್​​ನಿಂದ ಬರುತ್ತಿದ್ದ ವಿಮಾನಗಳನ್ನು ಬೇರೆ ಏರ್​ಪೋರ್ಟ್​​​ಗೆ ಕಳುಹಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿವಿಧೆಡೆಗೆ ತೆರಳಬೇಕಿದ್ದ ವಿಮಾನಗಳಲ್ಲೂ ವ್ಯತ್ಯಯ ಉಂಟಾಗಿದ್ದು, ಮಳೆಯಿಂದಾಗಿ ವಿಮಾನದಲ್ಲೇ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ.

ಬಿರುಗಾಳಿ‌ ಸಹಿತ ಭಾರಿ ಮಳೆ: ನೆಲಕ್ಕುರುಳಿದ ಬ್ಯಾರಿಕೇಡ್‌ಗಳು 

ಯಲಹಂಕ ಸುತ್ತಮುತ್ತ ಸೇರಿ ಬೆಂಗಳೂರಿನ ಹಲವೆಡೆ ಇಂದು ಕೂಡ ಧಾರಾಕಾರ ಮಳೆ ಆಗಿದೆ. ನಿನ್ನೆ ಸಹ ನಗರದ ಹಲವೆಡೆ ಮಳೆ ಸುರಿದಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಸುತ್ತಮುತ್ತ ಬಿರುಗಾಳಿ‌ ಸಹಿತ ಭಾರಿ ಮಳೆ ಆಗಿದ್ದು, ಕೆಂಪೇಗೌಡ ಸರ್ಕಲ್ ಬಳಿ ನಾಲ್ಕು ಅಡಿಗೂ ಹೆಚ್ಚು ನೀರು ನಿಂತಿದೆ. ದ್ವಿಚಕ್ರ ವಾಹನ ಹಾಗೂ ಗೂಡ್ಸ್ ಆಟೋ ಮಳೆ ನೀರಿನಲ್ಲಿ ಮುಳುಗಿವೆ. ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲಾಗದೆ ಕಾರು ಚಾಲಕರು ಪರದಾಡುವಂತಾಗಿದ್ದು, ರಸ್ತೆ ಕಾಣದೆ ಕಾರುಗಳು ನಿಂತಲ್ಲೆ ನಿಂತಿವೆ. ಬಿರುಗಾಳಿ ಸಹಿತ ಮಳೆಗೆ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳು ನೆಲಕ್ಕುರುಳಿದ್ದು, ದೇವನಹಳ್ಳಿಯಲ್ಲಿ ಒಂದು ಗಂಟೆ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: Bengaluru Rains: ಯಲಹಂಕ ಸುತ್ತಮುತ್ತ ಸೇರಿ ಬೆಂಗಳೂರಿನ ಹಲವೆಡೆ ಮಳೆ: ಜನಜೀವನ ಅಸ್ತವ್ಯಸ್ತ

ನಿನ್ನೆ ಕೂಡ ನಗರದ ಕೆಆರ್ ಮಾರ್ಕೆಟ್‌, ಕಾರ್ಪೊರೇಷನ್‌, ರಿಚ್ಮಂಡ್‌ ಸರ್ಕಲ್‌ ಸೇರಿದಂತೆ ಹಲವು ಕಡೆಗಳಲ್ಲಿ ಧಾರಕಾರವಾಗಿ ಮಳೆ ಸುರಿದಿತ್ತು. ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ವಿದ್ಯಾರಣ್ಯಪುರ, ನಾಗಸಂದ್ರ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ದಾಸರಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುಂತುರು ಮಳೆ ಆಗಿತ್ತು.

ಚಾಮರಾಜನಗರದಲ್ಲಿ ಇಂದು ಮುಂಜಾನೆಯಿಂದಲೆ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಜಿಲ್ಲೆಯ ಹಲವೆಡೆ ತುಂತುರು ಮಳೆ ಸುರಿದಿದೆ. ಸದ್ಯ ಈ ವರೆಗೆ ಮಳೆಯಿಂದ‌ ಹಾನಿ ಬಗ್ಗೆ ವರದಿಯಾಗಿಲ್ಲ. ಮಧ್ಯಾಹ್ನದ ನಂತರ ಎಂದಿನಂತೆ ವಾತಾವರಣ ಬಿಸಿಲಿನಿಂದ ಕೂಡಿತ್ತು.

ಇದನ್ನೂ ಓದಿ: Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ಕೆಆರ್ ಮಾರ್ಕೆಟ್‌, ಕಾರ್ಪೊರೇಷನ್‌ ಸೇರಿ ಹಲವೆಡೆ ತಂಪೆರೆದ ವರುಣ

ನಾಳೆನೂ ರಾಜ್ಯದಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಏಪ್ರಿಲ್ 5 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೋಮವಾರ ಬೆಳಿಗ್ಗೆಯಷ್ಟೇ ಮುನ್ಸೂಚನೆ ನೀಡಿತ್ತು. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:13 pm, Tue, 4 April 23

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ