Bengaluru Rains: ದೇವನಹಳ್ಳಿಯಲ್ಲಿ ಭಾರಿ ಮಳೆ: 19 ವಿಮಾನಗಳ ಲ್ಯಾಂಡಿಂಗ್​​ನಲ್ಲಿ ವ್ಯತ್ಯಯ, 8 ವಿಮಾನಗಳು ಚೆನ್ನೈಗೆ ವಾಪಸ್​

ರಾಜ್ಯ ರಾಜಧಾನಿಯಲ್ಲಿ ಇಂದು ಹಲವೆಡೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಸುಮಾರು 8 ವಿಮಾನಗಳನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಚೆನ್ನೈಗೆ ಡೈವರ್ಟ್ ಮಾಡಲಾಗಿದೆ.

Bengaluru Rains: ದೇವನಹಳ್ಳಿಯಲ್ಲಿ ಭಾರಿ ಮಳೆ: 19 ವಿಮಾನಗಳ ಲ್ಯಾಂಡಿಂಗ್​​ನಲ್ಲಿ ವ್ಯತ್ಯಯ, 8 ವಿಮಾನಗಳು ಚೆನ್ನೈಗೆ ವಾಪಸ್​
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Follow us
|

Updated on:Apr 04, 2023 | 7:17 PM

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂದು ಹಲವೆಡೆ ಧಾರಾಕಾರ ಮಳೆ (Rain) ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಸುಮಾರು 8 ವಿಮಾನಗಳನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಚೆನ್ನೈಗೆ ಡೈವರ್ಟ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಭಾರಿ ಮಳೆ ಹಿನ್ನೆಲೆ 19 ವಿಮಾನಗಳ ಲ್ಯಾಂಡಿಂಗ್​​ನಲ್ಲಿ ವ್ಯತ್ಯಯ ಉಂಟಾಗಿದ್ದು, ಬೇರೆ ಏರ್​ಪೋರ್ಟ್​​​ಗೆ ಡೈವರ್ಟ್ ಮಾಡಲಾಗಿದೆ. ಕೆಲ ವಿಮಾನಗಳು ಚೆನ್ನೈ, ಹೈದರಾಬಾದ್,​ ಕೋಲ್ಕತ್ತಾ, ಜೋಧ್​ಪುರ​, ಮುಂಬೈ, ರಾಜ್​ಕೋಟ್​​, ದುಬೈ, ಪಾಟ್ನಾ, ಬರೇಲಿ ಮತ್ತು ಇಂದೋರ್​​ನಿಂದ ಬರುತ್ತಿದ್ದ ವಿಮಾನಗಳನ್ನು ಬೇರೆ ಏರ್​ಪೋರ್ಟ್​​​ಗೆ ಕಳುಹಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿವಿಧೆಡೆಗೆ ತೆರಳಬೇಕಿದ್ದ ವಿಮಾನಗಳಲ್ಲೂ ವ್ಯತ್ಯಯ ಉಂಟಾಗಿದ್ದು, ಮಳೆಯಿಂದಾಗಿ ವಿಮಾನದಲ್ಲೇ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ.

ಬಿರುಗಾಳಿ‌ ಸಹಿತ ಭಾರಿ ಮಳೆ: ನೆಲಕ್ಕುರುಳಿದ ಬ್ಯಾರಿಕೇಡ್‌ಗಳು 

ಯಲಹಂಕ ಸುತ್ತಮುತ್ತ ಸೇರಿ ಬೆಂಗಳೂರಿನ ಹಲವೆಡೆ ಇಂದು ಕೂಡ ಧಾರಾಕಾರ ಮಳೆ ಆಗಿದೆ. ನಿನ್ನೆ ಸಹ ನಗರದ ಹಲವೆಡೆ ಮಳೆ ಸುರಿದಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಸುತ್ತಮುತ್ತ ಬಿರುಗಾಳಿ‌ ಸಹಿತ ಭಾರಿ ಮಳೆ ಆಗಿದ್ದು, ಕೆಂಪೇಗೌಡ ಸರ್ಕಲ್ ಬಳಿ ನಾಲ್ಕು ಅಡಿಗೂ ಹೆಚ್ಚು ನೀರು ನಿಂತಿದೆ. ದ್ವಿಚಕ್ರ ವಾಹನ ಹಾಗೂ ಗೂಡ್ಸ್ ಆಟೋ ಮಳೆ ನೀರಿನಲ್ಲಿ ಮುಳುಗಿವೆ. ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲಾಗದೆ ಕಾರು ಚಾಲಕರು ಪರದಾಡುವಂತಾಗಿದ್ದು, ರಸ್ತೆ ಕಾಣದೆ ಕಾರುಗಳು ನಿಂತಲ್ಲೆ ನಿಂತಿವೆ. ಬಿರುಗಾಳಿ ಸಹಿತ ಮಳೆಗೆ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳು ನೆಲಕ್ಕುರುಳಿದ್ದು, ದೇವನಹಳ್ಳಿಯಲ್ಲಿ ಒಂದು ಗಂಟೆ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: Bengaluru Rains: ಯಲಹಂಕ ಸುತ್ತಮುತ್ತ ಸೇರಿ ಬೆಂಗಳೂರಿನ ಹಲವೆಡೆ ಮಳೆ: ಜನಜೀವನ ಅಸ್ತವ್ಯಸ್ತ

ನಿನ್ನೆ ಕೂಡ ನಗರದ ಕೆಆರ್ ಮಾರ್ಕೆಟ್‌, ಕಾರ್ಪೊರೇಷನ್‌, ರಿಚ್ಮಂಡ್‌ ಸರ್ಕಲ್‌ ಸೇರಿದಂತೆ ಹಲವು ಕಡೆಗಳಲ್ಲಿ ಧಾರಕಾರವಾಗಿ ಮಳೆ ಸುರಿದಿತ್ತು. ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ವಿದ್ಯಾರಣ್ಯಪುರ, ನಾಗಸಂದ್ರ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ದಾಸರಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುಂತುರು ಮಳೆ ಆಗಿತ್ತು.

ಚಾಮರಾಜನಗರದಲ್ಲಿ ಇಂದು ಮುಂಜಾನೆಯಿಂದಲೆ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಜಿಲ್ಲೆಯ ಹಲವೆಡೆ ತುಂತುರು ಮಳೆ ಸುರಿದಿದೆ. ಸದ್ಯ ಈ ವರೆಗೆ ಮಳೆಯಿಂದ‌ ಹಾನಿ ಬಗ್ಗೆ ವರದಿಯಾಗಿಲ್ಲ. ಮಧ್ಯಾಹ್ನದ ನಂತರ ಎಂದಿನಂತೆ ವಾತಾವರಣ ಬಿಸಿಲಿನಿಂದ ಕೂಡಿತ್ತು.

ಇದನ್ನೂ ಓದಿ: Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ಕೆಆರ್ ಮಾರ್ಕೆಟ್‌, ಕಾರ್ಪೊರೇಷನ್‌ ಸೇರಿ ಹಲವೆಡೆ ತಂಪೆರೆದ ವರುಣ

ನಾಳೆನೂ ರಾಜ್ಯದಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಏಪ್ರಿಲ್ 5 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೋಮವಾರ ಬೆಳಿಗ್ಗೆಯಷ್ಟೇ ಮುನ್ಸೂಚನೆ ನೀಡಿತ್ತು. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:13 pm, Tue, 4 April 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ