AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಸಣ್ಣಪುಟ್ಟ ಸಮಸ್ಯೆ ಆಗೇ ಆಗುತ್ತೆ: ಬಿಬಿಎಂಪಿ ಆಯುಕ್ತ ಉಡಾಫೆ ಮಾತು!

Bengaluru Rains: ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ವರುಣ ರೌದ್ರಾವಾತಾರ ತಾಳಿದ್ದು, ಬಿರುಸಿನ ಗಾಳಿ ಜೊತೆಗೆ ಸುರಿದ ಭಾರಿ ಮಳೆಯಿಂದಾಗಿ ನಗರದ ಹಲವು ಏರಿಯಾಗಳಲ್ಲಿ ದೊಡ್ಡ ಅವಾಂತಾರಗಳೇ ಸೃಷ್ಟಿಸಿದೆ. ಮಳೆ ನೀರು ಹೋಗಲಾಗದೇ ರಸ್ತೆಯಲ್ಲಿ ನಿಂತಿತ್ತಿದ್ದು, ರಸ್ತೆಗಳೆಲ್ಲ ನದಿಗಳಂತಾಗಿವೆ. ಇನ್ನು ಹಲವೆಡೆ ನೀರು ಮನೆಗಳಿಗೆ ನುಗ್ಗಿ ಜನರು ಪರದಾಡುವಂತಾಗಿದೆ. ಇಷ್ಟೆಲ್ಲಾ ಅವಾಂತರಗಳು ಆಗಿದ್ದರೂ ಸಹ ಬಿಬಿಎಂಪಿ ಆಯುಕ್ತ ಉಡಾಫೆ ಮಾತುಗಳನ್ನಾಡಿದ್ದಾರೆ.

ಮಳೆಗೆ ಸಣ್ಣಪುಟ್ಟ ಸಮಸ್ಯೆ ಆಗೇ ಆಗುತ್ತೆ: ಬಿಬಿಎಂಪಿ ಆಯುಕ್ತ ಉಡಾಫೆ ಮಾತು!
Maheshwar Rao
ರಮೇಶ್ ಬಿ. ಜವಳಗೇರಾ
|

Updated on: May 19, 2025 | 3:11 PM

Share

ಬೆಂಗಳೂರು, (ಮೇ.19): ಬೆಂಗಳೂರಿನ ಸುರಿದ ಮಹಾ ಮಳೆಗೆ (Bengaluru rain) ಸಾಲು ಸಾಲು ಅನಾಹುತಗಳು ಸಂಭವಿಸಿದೆ. ಮನೆಗಳಿಗೆ ನೀರು ನುಗ್ಗಿದ್ದರೆ, ಮತ್ತೊಂದಡೆ ವಾಹನಗಳು ನೀರಿನಲ್ಲಿ ತೇಲಾಡಿವೆ. ಇದರಿಂದ ಜನರು ಪರದಾಡುತ್ತಿದ್ದಾರೆ. ಪ್ರತಿ ಬಾರಿಯೂ ಭಾರಿ ಮಳೆಯಾದಗ ಇದೇ ಸ್ಥಿತಿ ನಿರ್ಮಾಣವಾಗುತ್ತಿದ್ದು, ಬಿಬಿಎಂಪಿ ಇದನ್ನು ಪರಿಹರಿಸುತ್ತಿಲ್ಲ ಎಂದು ಜನರು ಗೋಳಾಡುತ್ತಿದ್ದಾರೆ. ಆದ್ರೆ, ಬಿಬಿಎಂಪಿ (BBMP) ಮುಖ್ಯ ಆಯುಕ್ತ ಮಹೇಶ್ವರ್ ರಾವ್  ( BBMP Commissioner Maheshwar Rao) ಅವರು ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಳೆ ಆಗುವಾಗ ಸಣ್ಣಪುಟ್ಟ ಸಮಸ್ಯೆ ಆಗೇ ಆಗುತ್ತೆ ಎಂದು ಉಡಾಫೆ ಮಾತುಗಳನ್ನಾಡಿದ್ದಾರೆ. ಇದರೊಂದಿಗೆ ಸಂತ್ರಸ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮಳೆ ಸಂಬಂಧ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ಚೀಫ್ ಕಮಿಷನರ್ ಮಹೇಶ್ವರ್ ರಾವ್, ಬೆಂಗಳೂರಲ್ಲಿ ನಿನ್ನೆ (ಮೇ 18) ರಾತ್ರಿ ಇಡೀ ಭಾರೀ ಮಳೆಯಾಗಿದೆ. ಕಳೆದೊಂದು ದಶಕಗಳಲ್ಲಿ ಇದೇ ಅತಿ ಹೆಚ್ಚು ಮಳೆಯಾಗಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಳೆ ಆಗುವಾಗ ಸಣ್ಣಪುಟ್ಟ ಸಮಸ್ಯೆ ಆಗೇ ಆಗುತ್ತೆ. ನಮ್ಮ ತಂಡ ಎಲ್ಲಾ ಕಡೆಗಳಲ್ಲಿ ಕೆಲಸ ಮಾಡಿಕೊಂಡಿದೆ. ಎರಡ್ಮೂರು ಜಾಗದಲ್ಲಿ ಶಾಶ್ವತ ಪರಿಹಾರ ಬೇಕೇ ಬೇಕು. ಅದನ್ನು ನಾವು ಪತ್ತೆ ಮಾಡಿದ್ದೇವೆ, ಕೆಲಸ ಕೂಡ ಶುರುವಾಗಿದ್ದು, 206 ಸೂಕ್ಷ್ಮ ಪ್ರದೇಶಗಳನ್ನು ಪತ್ತೆ ಹಚ್ಚಿ ಹಲವು ಕಡೆಗಳಲ್ಲಿ ಪರಿಹಾರ ನೀಡಿದ್ದೇವೆ. ಇನ್ನೂ ಕೆಲವು ಕಡೆಗಳಲ್ಲಿ ಮಾತ್ರ ಕೆಲಸ ಬಾಕಿ ಇದೆ ಎಂದರು.

ಇದನ್ನೂ ಓದಿ: ಕರಾವಳಿಗೆ ಹೋಗುವ ಅವಶ್ಯಕತೆ ಇಲ್ಲ, ಬೆಂಗಳೂರಿನಲ್ಲೇ ಆರಂಭವಾಗಿದೆ ಸರ್ಫ್​ ರೇಡ್​, ಡಿಕೆಶಿ ಮೊದಲ ರೈಡರ್​!

ಜಲಮಂಡಳಿ, ಅಗ್ನಿ ಶಾಮಕ ದಳದ ಸಹಾಯದೊಂದಿಗೆ ಕೆಲಸ ಮಾಡುತ್ತಿದ್ದೇವೆ . ಸಾಯಿ ಲೇಔಟ್ ನಲ್ಲಿ ಡ್ರೈನೇಜ್ ವ್ಯವಸ್ಥೆ ಮತ್ತಷ್ಟು ವಿಶಾಲ ಮಾಡುತ್ತೇವೆ. ಎಲ್ಲೆಲ್ಲಿಂದ ನೀರು ಬಂತು ಅಂತ ಪತ್ತೆ ಮಾಡಿ ಸೀಲ್ ಡೌನ್ ಮಾಡುತ್ತೇವೆ. ಜನರಿಗೆ ತೊಂದರೆಗೆ ಪರಿಹಾರ ನೀಡಿವುದು ನಮ್ಮ ಸದ್ಯದ ಆದ್ಯತೆ. ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ, ಮಡಿವಾಳ ಕೆರೆಯಿಂದ ಇಲ್ಲಿಗೆ ನೀರು ಹರಿದು ಬರುತ್ತಿದೆ. ಅದಕ್ಕೊಂದು ಪರಿಹಾರ ನೀಡುವ ಪ್ಲ್ಯಾನ್ ನಡೆಯುತ್ತಿದೆ. SWD ಹೂಳೆತ್ತುವೆ ಕೆಲಸ ಪ್ರಗತಿಯಲ್ಲಿದೆ. ಅದು ನಿರಂತರವಾಗಿ ನಡೆಯುವ ಕೆಲಸವಾಗಿದ್ದು, ಅದು ಮುಂದುವರೆಯುತ್ತೆ. ರಾಜಕಾಲುವೆ ಒತ್ತುವರಿ ತೆರವು ಮಾಡುವ ಕೆಲಸ ನಡೆಯುತ್ತಿದೆ. ನಮ್ಮ ಅಧಿಕಾರಿಗಳು ಸ್ಥಳದಲ್ಲಿ ನಿರಂತರ ಕೆಲಸ ಮಾಡುತ್ತಿದ್ದಾರೆ. ಮಳೆಗಾಲದ ಸಮಸ್ಯೆಗೆ ಎಲ್ಲಾ ಪರಿಹಾರ ಒದಗಿಸಲು ಪ್ರಾಮಾಣಿಕ ವಾಗಿ ಶ್ರಮಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ
Image
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
Image
ಲೂಟಿಕೋರರ ಬೆಂಗಳೂರು: ಮಳೆ ಅವಾಂತರ ಬೆನ್ನಲ್ಲೇ ಹೆಚ್​ಡಿಕೆ ಟೀಕೆ
Image
ಯೋಧರು ಖರೀದಿಸುವ ಮದ್ಯದ ತೆರಿಗೆ ಹೆಚ್ಚಿಸಲು ಮುಂದಾದ ಕಾಂಗ್ರೆಸ್ ಸರ್ಕಾರ
Image
ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ

ಸಿಎಂ, ಡಿಸಿಎಂ ಬೆಂಗಳೂರು ಸಿಟಿ ರೌಂಡ್ಸ್

ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರಿನ ನಿವಾಸಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರವಾಗಿ ಸುರಿದ ಭಾರೀ ಮಳೆಯಿಂದ ಮನೆಗಳಿಗೆ ನೀರು ನುಗಿದ ಪರಿಣಾಮ ಸಾಕಷ್ಟು ಬಡಾವಣೆ ಜನರ ಜೀವನ ಅಸ್ತವ್ಯಸ್ತವಾಗಿದ್ದು, ಈ ಸಂಬಂಧ ಪರಿಸ್ಥತಿಯನ್ನು ಅವಲೋಕಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್​​ ಹಾಕಲಿದ್ದಾರೆ. ಇಂದು ಸಂಜೆ ಬಿಬಿಎಂಪಿ ಅಧಿಕಾರಿಗಳ ಜತೆ ಸಿಎಂ, ಡಿಎಸಿಂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಮಾನ್ಯತಾ ಟೆಕ್​ಪಾರ್ಕ್, ಸಾಯಿಲೇಔಟ್, HSR ಲೇಔಟ್, ಈಜಿಪುರ ಜಂಕ್ಷನ್ ಹಾಗೂ ಸಿಲ್ಕ್ ಬೋರ್ಡ್ ಸಿಗ್ನಲ್ ಹಾಗೂ BBMP ಕಂಟ್ರೋಲ್ ರೂಂಗೆ ಭೇಟಿ ನೀಡಲಿದ್ದಾರೆ. ಬಳಿಕ ಬೆಂಗಳೂರು ನಗರ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್​ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್