AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬಿಸಿಲ ಬೇಗೆ, ತಾಪಮಾನದಿಂದ ಕಂಗೆಟ್ಟಿದ್ದ ಬೆಂಗಳೂರು ನಗರವಾಸಿಗಳಿಗೆ ಹವಾಮಾನ ಇಲಾಖೆ ಕೊನೆಗೂ ಶುಭ ಸುದ್ದಿ ನೀಡಿದೆ. ನಗರದಲ್ಲಿ ಇನ್ನೂ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಡಿಗ್ರಿ ಸೆಲ್ಸಿಯಸ್‌ ಮತ್ತು 24 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

Bengaluru Rains: ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಸೋಮವಾರ ರಾತ್ರಿ ಸುರಿದ ಮಳೆಗೆ ಬೆಂಗಳೂರಿನ ಭಾಷ್ಯಂ ಸರ್ಕಲ್​ನಲ್ಲಿ ಮರವೊಂದು ಧರೆಗುರುಳಿರುವುದು
ಗಣಪತಿ ಶರ್ಮಾ
|

Updated on:May 07, 2024 | 2:50 PM

Share

ಬೆಂಗಳೂರು, ಮೇ 7: ಏಪ್ರಿಲ್ ತಿಂಗಳಿಡೀ ಬೇಸಗೆಯ ಬೇಗೆಯಿಂದ ಬಸವಳಿದಿದ್ದ ಬೆಂಗಳೂರು (Bengaluru) ಜನತೆಗೆ ಕೊನೆಗೂ ಮಳೆ ತಂಪೆರೆದಿದೆ. ಕಳೆದ ಗುರುವಾರ, ಶುಕ್ರವಾರ ಹಾಗೂ ಸೋಮವಾರ ನಗರದಲ್ಲಿ ಮಳೆಯಾಗಿದ್ದು, ವಾತಾವರಣ ತುಸು ತಣ್ಣಗಾಗಿದೆ. ಈ ಮಧ್ಯೆ, ಮೇ 10ರ ವರೆಗೂ ಬೆಂಗಳೂರಿನಲ್ಲಿ ಮಳೆಯಾಗುವ (Bengaluru Rains) ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ನಗರದ ಹಲವೆಡೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಿದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿತ್ತು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಅಂಕಿಅಂಶಗಳ ಪ್ರಕಾರ, ರಾತ್ರಿ 9 ಗಂಟೆಯ ಹೊತ್ತಿಗೆ ರಾಜಮಹಲ್ ಗುಟ್ಟಹಳ್ಳಿಯಲ್ಲಿ ಗರಿಷ್ಠ 39.5 ಮಿಮೀ ಮಳೆಯಾಗಿದ್ದು, ನಂತರದ ದಯಾನಂದ ನಗರದಲ್ಲಿ (32.5 ಮಿಮೀ) ಮಳೆಯಾಗಿದೆ. ನಗರದ 18 ವಾರ್ಡ್‌ಗಳಲ್ಲಿ 10 ಮಿಮೀಗೂ ಹೆಚ್ಚು ಮಳೆಯಾಗಿದೆ.

ವಲಯವಾರು ನೋಡುವುದಾದರೆ ಬೊಮ್ಮನಹಳ್ಳಿಯಲ್ಲಿ ಗರಿಷ್ಠ ಮಳೆಯಾಗಿದ್ದು, ಯಲಹಂಕದಲ್ಲಿ ಅತಿ ಕಡಿಮೆ ಮಳೆಯಾಗಿದೆ. ಮಧ್ಯಾಹ್ನದ ವೇಳೆಗೆ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ತಾಪಮಾನ ತುಲನಾತ್ಮಕವಾಗಿ ಕಡಿಮೆ ಇತ್ತು.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36.3 ಡಿಗ್ರಿ ಸೆಲ್ಸಿಯಸ್ ಇದ್ದು, ಕಳೆದ ಕೆಲವು ದಿನಗಳಲ್ಲಿ ದಾಖಲಾದ 38 ಡಿಗ್ರಿ ಸೆಲ್ಸಿಯಸ್‌ನಿಂದ ಸ್ವಲ್ಪ ಕಡಿಮೆಯಾಗಿದೆ.

ಕಬ್ಬನ್ ರಸ್ತೆಯಲ್ಲಿ ಸೋಮವಾರ ಸಂಜೆ ಸುರಿದ ಮಳೆ

ನಗರದಲ್ಲಿ ಮೇ 10 ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಡಿಗ್ರಿ ಸೆಲ್ಸಿಯಸ್‌ ಮತ್ತು 24 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಧರೆಗುರುಳಿದ 25ಕ್ಕೂ ಹೆಚ್ಚು ಮರಗಳು

ಬೆಂಗಳೂರಿನಲ್ಲಿ ಸೋಮವಾರ ಮಳೆಯ ಅಬ್ಬರ ಜೋರಾಗಿಯೇ ಇತ್ತು. ಸಂಜೆ 6 ಗಂಟೆಗೆ ಗುಡುಗು ಸಹಿತ ಸುರಿದ ಮಳೆಗೆ ನಗರದ ಹಲವು ಕಡೆ ಅವಾಂತರಗಳೇ ಆದವು. 25ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, ಬಿಟಿಎಂ ಲೇಔಟ್, ಯಶವಂತಪುರ, ಜಯನಗರ, ಕೋರಮಂಗಲ, ಬಸವನಗುಡಿ, ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಸುರಿದ ಮಳೆಗೆ ವಾಹನ ಸವಾರರು ಹೈರಾಣಾಗಿ ಹೋದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ತಂಪೆರೆದ ವರುಣ, ನಗರದ ವಿವಿಧೆಡೆ ಆಲಿಕಲ್ಲು ಮಳೆ

ಮಳೆಯಿಂದಾಗಿ ಕಾರು ಪಲ್ಟಿಯಾಗಿ ಮಾಜಿ ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ಜಿಎನ್ ನಂಜುಂಡಸ್ವಾಮಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಅಪಘಾತ ಸಂಭವಿಸಿದ್ದು, ನಂಜುಂಡಸ್ವಾಮಿ ತಲೆಗೆ ಏಟಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 am, Tue, 7 May 24

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ