AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆ ನೀರು ಇಳಿಯುವ ಮೊದಲೇ ಮತ್ತೊಂದು ಅಲರ್ಟ್; ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಶಾಂತಿನಗರದ ಬಿಎಂಟಿಸಿ ಬಸ್ ಡಿಪೊ ಮುಳುಗಡೆಯಾಗಿದೆ. ಹಲವು ಬಸ್​ಗಳು ನೀರಿನಲ್ಲೇ ನಿಂತಿವೆ.

Bengaluru Rain: ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆ ನೀರು ಇಳಿಯುವ ಮೊದಲೇ ಮತ್ತೊಂದು ಅಲರ್ಟ್; ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು ಸರ್ಜಾಪುರ ರಸ್ತೆ ಮತ್ತು ಮಾರತ್ತಹಳ್ಳಿ ಮನ್ನೇಕೊಳಲು ಬಡಾವಣೆಯಲ್ಲಿ ಮಳೆ ಸಂಕಷ್ಟImage Credit source: Tv9Kannada
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 05, 2022 | 9:22 AM

Share

ಬೆಂಗಳೂರು: ನಗರದಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ (Bengaluru Rains) ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು (Indian Meteorological Department) ಮುನ್ಸೂಚನೆ ನೀಡಿದೆ. ನಗರದಲ್ಲಿ ನಿನ್ನೆ ರಾತ್ರಿಯಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ರಾಜ್ಯದ 18 ಜಿಲ್ಲೆಗಳಿಗೆ ಇಂದು ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಕೊಪ್ಪಳ, ರಾಯಚೂರು, ಬಳ್ಳಾರಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಇಂದು ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಶಾಂತಿನಗರದ ಬಿಎಂಟಿಸಿ ಬಸ್ ಡಿಪೊ ಮುಳುಗಡೆಯಾಗಿದೆ. ಹಲವು ಬಸ್​ಗಳು ನೀರಿನಲ್ಲೇ ನಿಂತಿವೆ. ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ರಾಜಕಾಲುವೆಯಿಂದಲೇ ನೀರು ಡಿಪೊ ಒಳಗೆ ನುಗ್ಗಿದೆ. ಈಗಲೂ ರಾಜಕಾಲುವೆಯಿಂದ ನೀರು ಡಿಡೊ ಕಡೆಗೆ ಹರಿದು ಬರುತ್ತಿದ್ದು, ನೀರಿನ ಮಟ್ಟ ಕಡಿಮೆಯಾಗಿಲ್ಲ. ಮಳೆಯಿಂದ ಡಿಪೊದಲ್ಲಿ ಆಗಿರುವ ನಷ್ಟದ ಸಂಪೂರ್ಣ ಚಿತ್ರಣ ಇನ್ನೂ ಸಿಕ್ಕಿಲ್ಲ.

ಇದನ್ನೂ ಓದಿ: Bengaluru Rain: ಬೆಂಗಳೂರು ನಗರದಲ್ಲಿ ದಾಖಲೆ ಬರೆದ ಮಳೆ; 24 ಗಂಟೆಗಳಲ್ಲಿ ಧೋ ಎಂದು ಸುರಿದ ಮಳೆ ಪ್ರಮಾಣ 83 ಮಿಮೀ

ಭಾನುವಾರ ರಾತ್ರಿ ಸುರಿದ ಮಳೆಯಿಂದ ಸನ್ನಿ ಬ್ರೂಕ್ಸ್ ಲೇಔಟ್​​ನಲ್ಲಿ 10ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಲೇಔಟ್​ನ 10ಕ್ಕೂ ಹೆಚ್ಚು ಐಷಾರಾಮಿ ಮನೆಗಳು ಮುಳುಗಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

ಬೆಂಗಳೂರಿನಲ್ಲಿ ರಾಜಕಾಲುವೆ ಮತ್ತು ಇತರ ಮಳೆ ನೀರು ಹರಿಯುವ ಚರಂಡಿಗಳ ಒತ್ತುವರಿಯಾಗಿರುವುದೇ ಮಳೆ ಅನಾಹುತಕ್ಕೆ ಮುಖ್ಯ ಕಾರಣ ಎಂದು ಎಲ್ಲರೂ ಹೇಳುತ್ತಿದ್ದಾರೆ. ಒತ್ತುವರಿ ತೆರವುಗೊಳಿಸುವ ವಿಚಾರದಲ್ಲಿ ಬಿಬಿಎಂಪಿ ಅನುಸರಿಸಿದ ನಿಧಾನ ಕ್ರಮಗಳಿಂದಲೇ ಬೆಂಗಳೂರು ಜಲಾವೃತಗೊಂಡಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಬೆಂಗಳೂರಿನ ಹೈಟೆಕ್ ಐಟಿ-ಬಿಟಿ ಕಂಪನಿಗಳ ಪ್ರಭಾವಿಗಳೇ ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಆದರೆ ಪ್ರಭಾವಿಗಳ ಪ್ರಭಾವಕ್ಕೆ ಮಣಿದಿರುವ ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ಒತ್ತುವರಿ ಮಾಡಲು ಹಿಂದೇ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸರ್ಜಾಪುರ ರಸ್ತೆಯ ವಿಪ್ರೋ ಗೇಟ್ ಬಳಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಿಲೋಮೀಟರ್​ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದು, ಶಾಲಾ ಬಸ್ ಒಂದು ನೀರಿನಲ್ಲೇ ಸಿಲುಕಿತು. ನೀರಿಗೆ ಇಳಿದ ಸ್ಥಳೀಯರು ಬಸ್​ ತಳ್ಳಿದರು. ರೈನ್​ಬೋ ಲೇಔಟ್​​ಗೆ ನೀರು ನುಗ್ಗಿದ್ದು, ಕಾರುಗಳು ಮುಳುಗಿವೆ. ಲೇಔಟ್ ನಿವಾಸಿಗಳಿಗೆ ಓಡಾಡಲು ಅಗ್ನಿಶಾಮಕ ಸಿಬ್ಬಂದಿ ದೋಣಿಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಮಳೆಯಿಂದಾಗಿ ಮಾರತ್ತಹಳ್ಳಿ ಬಳಿಯ ಮನ್ನೇಕೊಳಲು ಜಲಾವೃತಗೊಂಡಿದೆ. ರಸ್ತೆಗಳಲ್ಲಿ ಕುತ್ತಿಗೆ ಮಟ್ಟಕ್ಕೆ ನೀರು ಹರಿಯುತ್ತಿದೆ. ಮನೆಗಳೂ ಜಲಾವೃತಗೊಂಡಿವೆ. ಕೆರೆಯಂತಾಗಿರುವ ರಸ್ತೆಗಳಲ್ಲಿ ಈಜಾಡಿ ಜನರು ಮನೆಗಳಿಗೆ ಸೇರುತ್ತಿದ್ದಾರೆ.

Published On - 9:21 am, Mon, 5 September 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​