Bengaluru Rain: ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆ ನೀರು ಇಳಿಯುವ ಮೊದಲೇ ಮತ್ತೊಂದು ಅಲರ್ಟ್; ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಶಾಂತಿನಗರದ ಬಿಎಂಟಿಸಿ ಬಸ್ ಡಿಪೊ ಮುಳುಗಡೆಯಾಗಿದೆ. ಹಲವು ಬಸ್​ಗಳು ನೀರಿನಲ್ಲೇ ನಿಂತಿವೆ.

Bengaluru Rain: ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆ ನೀರು ಇಳಿಯುವ ಮೊದಲೇ ಮತ್ತೊಂದು ಅಲರ್ಟ್; ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು ಸರ್ಜಾಪುರ ರಸ್ತೆ ಮತ್ತು ಮಾರತ್ತಹಳ್ಳಿ ಮನ್ನೇಕೊಳಲು ಬಡಾವಣೆಯಲ್ಲಿ ಮಳೆ ಸಂಕಷ್ಟ
Image Credit source: Tv9Kannada
Edited By:

Updated on: Sep 05, 2022 | 9:22 AM

ಬೆಂಗಳೂರು: ನಗರದಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ (Bengaluru Rains) ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು (Indian Meteorological Department) ಮುನ್ಸೂಚನೆ ನೀಡಿದೆ. ನಗರದಲ್ಲಿ ನಿನ್ನೆ ರಾತ್ರಿಯಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ರಾಜ್ಯದ 18 ಜಿಲ್ಲೆಗಳಿಗೆ ಇಂದು ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಕೊಪ್ಪಳ, ರಾಯಚೂರು, ಬಳ್ಳಾರಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಇಂದು ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಶಾಂತಿನಗರದ ಬಿಎಂಟಿಸಿ ಬಸ್ ಡಿಪೊ ಮುಳುಗಡೆಯಾಗಿದೆ. ಹಲವು ಬಸ್​ಗಳು ನೀರಿನಲ್ಲೇ ನಿಂತಿವೆ. ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ರಾಜಕಾಲುವೆಯಿಂದಲೇ ನೀರು ಡಿಪೊ ಒಳಗೆ ನುಗ್ಗಿದೆ. ಈಗಲೂ ರಾಜಕಾಲುವೆಯಿಂದ ನೀರು ಡಿಡೊ ಕಡೆಗೆ ಹರಿದು ಬರುತ್ತಿದ್ದು, ನೀರಿನ ಮಟ್ಟ ಕಡಿಮೆಯಾಗಿಲ್ಲ. ಮಳೆಯಿಂದ ಡಿಪೊದಲ್ಲಿ ಆಗಿರುವ ನಷ್ಟದ ಸಂಪೂರ್ಣ ಚಿತ್ರಣ ಇನ್ನೂ ಸಿಕ್ಕಿಲ್ಲ.

ಇದನ್ನೂ ಓದಿ: Bengaluru Rain: ಬೆಂಗಳೂರು ನಗರದಲ್ಲಿ ದಾಖಲೆ ಬರೆದ ಮಳೆ; 24 ಗಂಟೆಗಳಲ್ಲಿ ಧೋ ಎಂದು ಸುರಿದ ಮಳೆ ಪ್ರಮಾಣ 83 ಮಿಮೀ

Rain In Benglauru: ಸರ್ಜಾಪುರದ ವಿಪ್ರೋ ಗೇಟ್ ಬಳಿ ರಸ್ತೆ ಜಲಾವೃತ | Tv9 Kannadaಭಾನುವಾರ ರಾತ್ರಿ ಸುರಿದ ಮಳೆಯಿಂದ ಸನ್ನಿ ಬ್ರೂಕ್ಸ್ ಲೇಔಟ್​​ನಲ್ಲಿ 10ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಲೇಔಟ್​ನ 10ಕ್ಕೂ ಹೆಚ್ಚು ಐಷಾರಾಮಿ ಮನೆಗಳು ಮುಳುಗಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

ಬೆಂಗಳೂರಿನಲ್ಲಿ ರಾಜಕಾಲುವೆ ಮತ್ತು ಇತರ ಮಳೆ ನೀರು ಹರಿಯುವ ಚರಂಡಿಗಳ ಒತ್ತುವರಿಯಾಗಿರುವುದೇ ಮಳೆ ಅನಾಹುತಕ್ಕೆ ಮುಖ್ಯ ಕಾರಣ ಎಂದು ಎಲ್ಲರೂ ಹೇಳುತ್ತಿದ್ದಾರೆ. ಒತ್ತುವರಿ ತೆರವುಗೊಳಿಸುವ ವಿಚಾರದಲ್ಲಿ ಬಿಬಿಎಂಪಿ ಅನುಸರಿಸಿದ ನಿಧಾನ ಕ್ರಮಗಳಿಂದಲೇ ಬೆಂಗಳೂರು ಜಲಾವೃತಗೊಂಡಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಬೆಂಗಳೂರಿನ ಹೈಟೆಕ್ ಐಟಿ-ಬಿಟಿ ಕಂಪನಿಗಳ ಪ್ರಭಾವಿಗಳೇ ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಆದರೆ ಪ್ರಭಾವಿಗಳ ಪ್ರಭಾವಕ್ಕೆ ಮಣಿದಿರುವ ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ಒತ್ತುವರಿ ಮಾಡಲು ಹಿಂದೇ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸರ್ಜಾಪುರ ರಸ್ತೆಯ ವಿಪ್ರೋ ಗೇಟ್ ಬಳಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಿಲೋಮೀಟರ್​ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದು, ಶಾಲಾ ಬಸ್ ಒಂದು ನೀರಿನಲ್ಲೇ ಸಿಲುಕಿತು. ನೀರಿಗೆ ಇಳಿದ ಸ್ಥಳೀಯರು ಬಸ್​ ತಳ್ಳಿದರು. ರೈನ್​ಬೋ ಲೇಔಟ್​​ಗೆ ನೀರು ನುಗ್ಗಿದ್ದು, ಕಾರುಗಳು ಮುಳುಗಿವೆ. ಲೇಔಟ್ ನಿವಾಸಿಗಳಿಗೆ ಓಡಾಡಲು ಅಗ್ನಿಶಾಮಕ ಸಿಬ್ಬಂದಿ ದೋಣಿಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

Rain In Benglauru: ಶಾಂತಿನಗರ ಬಸ್​ ಡಿಪೋ ಒಳಗೆ ನುಗ್ಗಿದ ಮಳೆ ನೀರು | Tv9 Kannadaಮಳೆಯಿಂದಾಗಿ ಮಾರತ್ತಹಳ್ಳಿ ಬಳಿಯ ಮನ್ನೇಕೊಳಲು ಜಲಾವೃತಗೊಂಡಿದೆ. ರಸ್ತೆಗಳಲ್ಲಿ ಕುತ್ತಿಗೆ ಮಟ್ಟಕ್ಕೆ ನೀರು ಹರಿಯುತ್ತಿದೆ. ಮನೆಗಳೂ ಜಲಾವೃತಗೊಂಡಿವೆ. ಕೆರೆಯಂತಾಗಿರುವ ರಸ್ತೆಗಳಲ್ಲಿ ಈಜಾಡಿ ಜನರು ಮನೆಗಳಿಗೆ ಸೇರುತ್ತಿದ್ದಾರೆ.

Published On - 9:21 am, Mon, 5 September 22

Follow Us