AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಸಾಧ್ಯತೆ; ಕರಾವಳಿ, ಉತ್ತರ ಕರ್ನಾಟಕದಲ್ಲಿ ಒಣಹವೆ

Karnataka Weather Today: ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮಳೆಯ ಜೊತೆಗೆ ಚಳಿಯ ವಾತಾವರಣವೂ ಹೆಚ್ಚಾಗಲಿದೆ.

Bengaluru Rains: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಸಾಧ್ಯತೆ; ಕರಾವಳಿ, ಉತ್ತರ ಕರ್ನಾಟಕದಲ್ಲಿ ಒಣಹವೆ
ಮಳೆ
TV9 Web
| Edited By: |

Updated on:Dec 28, 2022 | 11:17 AM

Share

Bangalore Rains: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru Weather) ಇಂದು (ಡಿ. 28) ಕೂಡ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು ದಕ್ಷಿಣ ಒಳನಾಡಿನ (Karnataka Rain) ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಚಳಿಯ ವಾತಾವರಣವೂ ಹೆಚ್ಚಾಗಲಿದೆ. ಅದರ ಜೊತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Rain Alert ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 4 ದಿನ ಕರ್ನಾಟಕದ ಹಲವೆಡೆ ಮಳೆ

ಇಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಇನ್ನೂ 2 ದಿನ ತುಂತುರು ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ 2 ದಿನ ಎಂದರೆ ಡಿಸೆಂಬರ್‌ 29ರವರೆಗೆ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ. ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Karnataka Rain: ಮೈಸೂರು, ಕೊಡಗು, ಚಾಮರಾಜನಗರದಲ್ಲಿ ಇಂದು ವರುಣನ ಆರ್ಭಟ; ಡಿ. 29ರವರೆಗೆ ಈ ಜಿಲ್ಲೆಗಳಲ್ಲಿ ಮಳೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಲಕ್ಷದ್ವೀಪ, ಕೇರಳ ಮತ್ತು ತಮಿಳುನಾಡಿನಲ್ಲಿ ಗುಡುಗು ಸಹಿತ ಚದುರಿದಂತೆ ಮಳೆಯಾಗುವ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಸಿಕ್ಕಿಂನಲ್ಲಿ ಚದುರಿದ ಮಳೆ ಸಂಭವಿಸಬಹುದು. ಉತ್ತರ ರಾಜಸ್ಥಾನ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಶೀತದ ಅಲೆಯ ಪರಿಸ್ಥಿತಿಗಳು ಉಂಟಾಗಲಿದೆ. ಪಂಜಾಬ್‌ನಲ್ಲಿ ದಟ್ಟವಾದ ಮಂಜು ತುಂಬಿರುವ ಸಾಧ್ಯತೆಯಿದೆ. ಒಡಿಶಾ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಆಂಧ್ರಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಚಂಡೀಗಢಗಳಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ. ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವನ್ನು ನಿರೀಕ್ಷಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:24 am, Wed, 28 December 22

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ