AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಜಲದಿಗ್ಬಂಧನ: ಅ.16ರಂದು ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನೀಡುವಂತೆ ಸೂಚನೆ

ವಾರದ ಹಿಂದಷ್ಟೆ ರಣರಣ ಅಂತಿದ್ದ ಬೆಂಗಳೂರು ಏಕಾಏಕಿ ಮಳೆಯೂರಾಗಿ ಬದಲಾಗಿದೆ. ಬಂಗಾಳ ಕೊಲ್ಲಿಯ ವಾಯು ಭಾರ ಕುಸಿತದ ಹೊಡೆತಕ್ಕೆ ಸಿಲಿಕಾನ್​ ಸಿಟಿ ಸಂಪೂರ್ಣವಾಗಿ ಜಲಮಯವಾಗಿಟ್ಟಿದೆ. ರಸ್ತೆಗಳು ಕೆರೆಯಂತಾದ್ರೆ ಟ್ರಾಫಿಕ್ ಸಮಸ್ಯೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಈ ವರುಣಾರ್ಭಟ ನಾಳೆಯೂ ಸಹ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ(ಅಕ್ಟೋಬರ್ 16) ಬೆಂಗಳೂರಿನ ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನೀಡುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಿಗೆ ಜಲದಿಗ್ಬಂಧನ: ಅ.16ರಂದು ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನೀಡುವಂತೆ ಸೂಚನೆ
ಬೆಂಗಳೂರು ಮಳೆ
TV9 Web
| Edited By: |

Updated on: Oct 15, 2024 | 10:57 PM

Share

ಬೆಂಗಳೂರು, (ಅಕ್ಟೋಬರ್ 15): ಸಿಲಿಕಾನ್ ಸಿಟಿ ಬೆಂಗಳೂರು ಈಗ ಮಳೆಯೂರು ಆಗಿ ಬದಲಾಗಿದೆ. ಹೌದು ಸರಿಸುಮಾರು 24 ಗಂಟೆ ಸುರಿದ ಮಳೆಗೆ ಬೆಂಗಳೂರು ಅಕ್ಷರಶಃ ಮಳೆಯೂರಾಗಿದೆ. ವರುಣನ ಅಬ್ಬರಕ್ಕೆ ರಾಜಧಾನಿ ಸಮಸ್ಯೆಗಳ ಗುಂಡಿಗೆ ಬಿದ್ದಿದೆ. ನಗರದ ಪ್ರಮುಖ ರಸ್ತೆಗಳೇ ಮುಳುಗಿ ಹೋಗಿದ್ದು, ಟ್ರಾಫಿಕ್​ಗೆ ಸವಾರರು ಹೆಣಗಾಡಿಬಿಟ್ಟಿದ್ದಾರೆ. ರಸ್ತೆ ಯಾವುದು? ರಸ್ತೆ ನಡುವೆ ಇರೋ ಗುಂಡಿಗಳ್ಯಾವುದು ಎನ್ನುವುದೇ ತಿಳಿಯದಂತಾಗಿದೆ. ಇನ್ನೂ ನಾಳೆಯೂ (ಅಕ್ಟೋಬರ್ 16)  ಸಹ ಬೆಂಗಳೂರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರಿನ ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನೀಡುವಂತೆ ಐಟಿ ಕಂಪನಿಗಳಿಗೆ ಸೂಚಿಸಲಾಗಿದೆ.

ಈ ಬಗ್ಗೆ ಇನೋವೇಷನ್ & ಟೆಕ್ನಾಲಜಿ ಸೊಸೈಟಿ ಸುತ್ತೋಲೆ ಹೊರಡಿಸಿದ್ದು, ಮಳೆಯಿಂದ ರಸ್ತೆಗಳಲ್ಲಿ ನೀರು ತಂಬಿದ್ದು, ಟ್ರಾಫಿಕ್ ಜಾಮ್​ ಹಿನ್ನೆಲೆಯಲ್ಲಿ ಕಚೇರಿಗೆ  ತೆರಳಲು ಉದ್ಯೋಗಿಗಳಿಗೆ ಕಷ್ಟವಾಗುತ್ತಿದೆ. ಹೀಗಾಗಿ ವರ್ಕ್ ಫ್ರಂ ಹೋಂಗೆ ಅನುಮತಿ ನೀಡುವಂತೆ ಐಟಿ ಕಂಪನಿಗಳಿಗೆ ಸೂಚಿಸಿದೆ.

ಇದನ್ನೂ ಓದಿ: ಅ.19 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಬೆಂಗಳೂರಿನಲ್ಲಿ ಆರೆಂಜ್ ಅಲರ್ಟ್

ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆ ಎಲ್ಲೆಡೆ ನೀರು ತುಂಬಿದ್ದುಮ ರಸ್ತೆಗಳೆಲ್ಲಾ ನದಿಯಂತಾಗಿವೆ. ಇದರಿಂದ ಎಲ್ಲೆಡೆ ಟ್ರಾಫಿಕ್ ಜಾಮ್​ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಾಳೆಯೂ ಸಹ ಮಳೆ ಮುನ್ಸೂಚನೆ ನೀಡಿರುವುದಿರಂದ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಂಗಳೂರಿನಲ್ಲಿ ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನೀಡಲು ಅನುಮತಿ ನೀಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಆರ್ಭಟ; ಜಲಾವೃತವಾದ ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!

ಇಂದಿನ ಮಳೆಗೆ ಬೆಂಗಳೂರಿನ ಹಲವು ರಸ್ತೆಗಳು ಅಕ್ಷರಶಃ ನರಕ ದರ್ಶನವಾಗಿದೆ. ದೊಡ್ಡ ದೊಡ್ಡ ಗುಂಡಿಗಳ ನಡುವೆ ಮುಳುಗಿ ಹೋದ ರಸ್ತೆಗಳಲ್ಲಿ ಪರತಪಿಸುವಂತಾಯ್ತು. ಬೆಳ್ಳಂದೂರು, ಮಾರತಹಳ್ಳಿ, ಮಾನ್ಯತ ಟೆಕ್​ಪಾರ್ಕ್ ಕೂಡ ಜಲಮಯವಾಗಿಬಿಟ್ಟಿದೆ. ರಸ್ತೆ ಥೇಟ್ ಹೊಳೆಯಂತೆ ಕಾಣ್ತಿದೆ. ORR ಮುಖ್ಯ ರಸ್ತೆಯಲ್ಲಿ ನಿಂತ ನೀರಿನಲ್ಲೇ ವಾಹನಗಳು ದೋಣಿಗಳಂತೆ ಹೋದ್ರೆ, ಕೆಟ್ಟುನಿಂತ ವಾಹನ ತಳ್ಳುತ್ತಲೇ ಸವಾರರು ಹೆಣಗಾಡಿದ್ರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ