ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಪೊಲೀಸರಿಗೆ ಸಿಕ್ತು ಶಂಕಿತನ ಟೋಪಿ, ಸುಳಿವು

ಶಂಕಿತನು 30ರ ಆಸುಪಾಸಿನವರಾಗಿದ್ದು, ಬಿಎಂಟಿಸಿ ವೋಲ್ವೋ ಬಸ್ ಪಡೆದು ಪರಾರಿಯಾಗಿದ್ದಾನೆ. ವೀಡಿಯೊದಲ್ಲಿ, ಆರೋಪಿಯು ಸಿಸಿಟಿವಿ ಕ್ಯಾಮರಾವನ್ನು ನೋಡಿದ್ದಾನೆ ಮತ್ತು ಪತ್ತೆ ಅದರಿಂದ ತಪ್ಪಿಸಲು ಮುಂದಿನ ಸೀಟಿನಲ್ಲಿ ಕುಳಿತುಕೊಂಡಿದ್ದ. ಸಿಸಿಬಿ ಪೊಲೀಸರ ಜತೆ ಎನ್‌ಐಎ ಕೂಡ ಪ್ರಕರಣದ ತನಿಖೆ ನಡೆಸುತ್ತಿದ್ದು, ಶಂಕಿತನ ಟೋಪಿಯನ್ನು ಹೂಡಿಯಲ್ಲಿ ವಶಪಡಿಸಿಕೊಂಡಿದೆ. ಇದರೊಂದಿಗೆ ಮಹತ್ವದ ಸುಳಿವು ದೊರೆತಂತಾಗಿದೆ.

ಬೆಂಗಳೂರು, ಮಾರ್ಚ್​ 7: ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್ ಸ್ಫೋಟ (Bomb Blast) ಪ್ರಕರಣಕ್ಕೆ ಸಂಬಂಧಿಸಿ ಶಂಕಿತನ ಮಹತ್ವದ ಸುಳಿವು ಪತ್ತೆಯಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಶಂಕಿತ ಹೂಡಿಯ ಬಳಿ ಬಟ್ಟೆ ಬದಲಿಸಿ ಟೋಪಿ ಬಿಟ್ಟು ಹೋಗಿರುವುದು ಗೊತ್ತಾಗಿದೆ. ಸಿಸಿಬಿ ಹಾಗೂ ಎನ್​ಐಎ ಪೊಲೀಸರ (CCB, NIA Police) ತಂಡಕ್ಕೆ ಆತ ಅಲ್ಲೇ ಟೋಪಿ ಬಿಟ್ಟು ಬಟ್ಟೆ ಬದಲಾಯಿಸಿ ಹೋಗಿರುವುದು ಗೊತ್ತಾಗಿದೆ.

ಶಂಕಿತನದ್ದು ಎನ್ನಲಾದ ಟೋಪಿಯನ್ನು ಇದೀಗ ಎನ್​ಐಎ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ, ಶಂಕಿತ ತುಮಕೂರು ಮೂಲಕ ಬಳ್ಳಾರಿಗೆ ತೆರಳಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಅಲ್ಲಿಂದ ಬೀದರ್​​ನತ್ತ ಹೊರಟಿರುವುದಾಗಿ ಮಾಹಿತಿ ದೊರೆತಿದೆ. ಸದ್ಯ ಶಂಕಿತನ ಸ್ಪಷ್ಟವಾದ ಭಾವಚಿತ್ರ ಪೊಲೀಸರಿಗೆ ಲಭ್ಯವಾಗಿದೆ ಎನ್ನಲಾಗಿದೆ. ಆತ ಹಿಂದಿ ಮಾತನಾಡುತ್ತಿದ್ದ. ಹೀಗಾಗಿ ಆತ ಹೊರ ರಾಜ್ಯದವನಿರಬಹುದು ಎಂದು ಶಂಕಿಸಲಾಗಿದೆ.

ಬಿಎಂಟಿಸಿಯಲ್ಲಿ ಶಂಕಿತ: ಫೋಟೊ ಬಹಿರಂಗಪಡಿಸಿದ ಪೊಲೀಸ್

ಈ ಮಧ್ಯೆ, ಬಿಎಂಟಿಸಿ ಬಸ್‌ನಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಆರೋಪಿಯ ಚಿತ್ರ ಸೆರೆಯಾಗಿದ್ದು, ಪೊಲೀಸರು ವಿಡಿಯೋವನ್ನು ವಿಶ್ಲೇಷಿಸುತ್ತಿದ್ದಾರೆ. ಇನ್ನೊಂದು ಚಿತ್ರದಲ್ಲಿ ಆರೋಪಿಯು ಮಾಸ್ಕ್ ಇಲ್ಲದೆ ಬಸ್ಸಿನೊಳಗೆ ಕುಳಿತಿರುವುದು ಕಂಡುಬಂದಿದೆ.

ಆರೋಪಿಯು ರಾಮೇಶ್ವರಂ ಕೆಫೆಗೆ ತೆರಳಲು ಬಿಎಂಟಿಸಿ ಬಸ್ ಬಳಸಿದ್ದ ಎಂದು ಪೊಲೀಸರು ಈ ಹಿಂದೆ ಹೇಳಿದ್ದರು. ಬಾಂಬ್ ಇದ್ದ ಬ್ಯಾಗ್ ಇಟ್ಟು ಆರೋಪಿ ಮತ್ತೊಂದು ಬಿಎಂಟಿಸಿ ಬಸ್ ಹಿಡಿದು ತಮಿಳುನಾಡಿನ ಗಡಿ ಭಾಗಕ್ಕೆ ತೆರಳಿದ್ದ ಎಂದು ಅವರು ಹೇಳಿದ್ದರು.

ಎನ್‌ಐಎ ಬಿಡುಗಡೆ ಮಾಡಿರುವ ಇನ್ನೊಂದು ಚಿತ್ರದಲ್ಲಿ ಆರೋಪಿ ಮಾಸ್ಕ್, ಕ್ಯಾಪ್ ಮತ್ತು ಕನ್ನಡಕ ಧರಿಸಿರುವುದು ಕಂಡುಬಂದಿತ್ತು. ಆತನ ಕುರಿತ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿತ್ತು.

ಬುಧವಾರ ರಾತ್ರಿ ಮತ್ತು ಗುರುವಾರ ತುಮಕೂರು ಮತ್ತು ಬಳ್ಳಾರಿಯ ಹಲವು ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿತ್ತು. ದಾಳಿ ಕುರಿತು ಪ್ರತಿಕ್ರಿಯಿಸಿದ್ದ ಗೃಹ ಸಚಿವ ಡಾ. ಜಿ ಪರಮೇಶ್ವರ, ಆರೋಪಿಗಳ ಬಗ್ಗೆ ಅಧಿಕಾರಿಗಳಿಗೆ ಕೆಲವು ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ: ಬಾಂಬರ್ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ

ಸ್ಫೋಟದ ನಂತರ ಶಂಕಿತ ತುಮಕೂರಿಗೆ ಬಸ್‌ನಲ್ಲಿ ತೆರಳಿದ್ದ ಎಂಬ ಮತ್ತೊಂದು ಸುಳಿವಿನ ಹಿನ್ನೆಲೆಯಲ್ಲಿ ಪೊಲೀಸರು ತುಮಕೂರಿನಲ್ಲಿ ಶೋಧ ನಡೆಸಿದ್ದರು. ತನಿಖೆ ವೇಳೆ ಪೊಲೀಸರಿಗೆ ಆರೋಪಿಗಳ ಬಗ್ಗೆ ಹೆಚ್ಚುವರಿ ಮಾಹಿತಿ ಸಿಕ್ಕಿದೆ. ಬಳ್ಳಾರಿಯಲ್ಲೂ ಶೋಧ ಕಾರ್ಯ ನಡೆಯುತ್ತಿದೆ ಎಂದು ಗೃಹ ಸಚಿವರು ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:19 pm, Thu, 7 March 24

Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
Follow Us