AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ಕೆಮಿಕಲ್ಸ್ ಪತ್ತೆ

Rameshwaram Cafe Bomb Blast: ಬೆಂಗಳೂರಿನ ವೈಟ್‌ಫೀಲ್ಡ್‌ನ ಬ್ರೂಕ್‌ ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಸ್ಫೋಟಗೊಂಡ ಸ್ಥಳದಲ್ಲಿ ಬ್ಯಾಟರಿ ಜೊತೆಗೆ ಟೈಮರ್ ಪತ್ತೆಯಾಗಿತ್ತು. ಇದೀಗ, ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ರಾಸಾಯನಿಕಗಳು ಪತ್ತೆಯಾಗಿವೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ಕೆಮಿಕಲ್ಸ್ ಪತ್ತೆ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ಕೆಮಿಕಲ್ ಪತ್ತೆ
Follow us
ರಾಚಪ್ಪಾಜಿ ನಾಯ್ಕ್
| Updated By: Rakesh Nayak Manchi

Updated on:Mar 03, 2024 | 5:33 PM

ಬೆಂಗಳೂರು, ಮಾ.3: ನಗರದ ವೈಟ್‌ಫೀಲ್ಡ್‌ನ ಬ್ರೂಕ್‌ ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್ ಸ್ಫೋಟ (Bomb Blast) ಪ್ರಕರಣ ಸಂಬಂಧ ಸ್ಥಳ ಪರಿಶೀಲನೆ ಮುಂದುವರಿಸಲಾಗಿದೆ. ಈಗಾಗಲೇ ಸ್ಫೋಟಗೊಂಡ ಸ್ಥಳದಲ್ಲಿ ಬ್ಯಾಟರಿ ಜೊತೆಗೆ ಟೈಮರ್ ಪತ್ತೆಯಾಗಿತ್ತು. ಇದೀಗ, ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ರಾಸಾಯನಿಕಗಳು ಪತ್ತೆಯಾಗಿವೆ.

ಸ್ಪೋಟಕ್ಕೆ ಬಳಸಲಾದ ಕೆಮಿಕಲ್​ಗಳ ಮಾಹಿತಿ ಟಿವಿ9ಗೆ ಲಭ್ಯವಾಗಿದೆ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಪೊಟ್ಯಾಷಿಯಂ ನೈಟ್ರೇಟ್ ಮತ್ತು ಹೈಡ್ರೋಜನ್ ಪರಾಕ್ಸೈಡ್ ಬಳಸಿ ಕೃತ್ಯ ಎಸಗಲಾಗಿದೆ. ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಈ ರಾಸಾಯನಿಕಗಳನ್ನು ಬಳಕೆ ಮಾಡಲಾಗಿದೆ. ಸದ್ಯ, ಸ್ಫೋಟದ ಅವಶೇಷಗಳ ಮಾದರಿಗಳನ್ನು ಎಫ್ಎಸ್​ಎಲ್ ಮತ್ತು ಸೋಕೋ ಟೀಂ ಸಂಗ್ರಹಿಸಿದೆ.

ಇದನ್ನೂ ಓದಿ: ಬೆಂಗಳೂರಿನ ಹೃದಯ ಭಾಗಬಿಟ್ಟು ಗಡಿ ಭಾಗದಲ್ಲೇ ಬಾಂಬ್ ಇಟ್ಟಿದ್ಯಾಕೆ? ಕೆಫೆ ಸ್ಫೋಟದ ಸಂಚಿನ ರಹಸ್ಯ ಬಯಲು!

ಬ್ಯಾಟರಿ, ಟೈಮರ್ ಪತ್ತೆ

ಸ್ಫೋಟಗೊಂಡ ಸ್ಥಳದಲ್ಲಿ ಈಗಾಗಲೇ ಬ್ಯಾಟರಿ, ಟೈಮರ್ ಪತ್ತೆಯಾಗಿದೆ. ಹೀಗಾಗಿ ಟೈಮರ್ ಇಟ್ಟು ಬಾಂಬ್ ಸ್ಫೋಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಾಂಬ್​ಗೆ ಟೈಮರ್ ಫಿಕ್ಸ್ ಮಾಡಿ ಬ್ಯಾಗಿನ ಒಳಗೆ ಇಟ್ಟು ಸ್ಫೋಟಿಸಲಾಗಿದೆ ಮಾಡಲಾಗಿದೆ ಎಂಬ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಮುಂದುವರಿಸಿದ ಸಿಸಿಬಿ ತನಿಖೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈಗಾಗಲೇ ನಾಲ್ವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದ್ದು, ಆಡುಗೋಡಿ ಟೆಕ್ನಿಕಲ್​ ಸೆಲ್​ಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಅಪರಾಧ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ, ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್ ಅವರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Sun, 3 March 24

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು