AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ಕೆಮಿಕಲ್ಸ್ ಪತ್ತೆ

Rameshwaram Cafe Bomb Blast: ಬೆಂಗಳೂರಿನ ವೈಟ್‌ಫೀಲ್ಡ್‌ನ ಬ್ರೂಕ್‌ ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಸ್ಫೋಟಗೊಂಡ ಸ್ಥಳದಲ್ಲಿ ಬ್ಯಾಟರಿ ಜೊತೆಗೆ ಟೈಮರ್ ಪತ್ತೆಯಾಗಿತ್ತು. ಇದೀಗ, ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ರಾಸಾಯನಿಕಗಳು ಪತ್ತೆಯಾಗಿವೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ಕೆಮಿಕಲ್ಸ್ ಪತ್ತೆ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ಕೆಮಿಕಲ್ ಪತ್ತೆ
ರಾಚಪ್ಪಾಜಿ ನಾಯ್ಕ್
| Edited By: |

Updated on:Mar 03, 2024 | 5:33 PM

Share

ಬೆಂಗಳೂರು, ಮಾ.3: ನಗರದ ವೈಟ್‌ಫೀಲ್ಡ್‌ನ ಬ್ರೂಕ್‌ ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್ ಸ್ಫೋಟ (Bomb Blast) ಪ್ರಕರಣ ಸಂಬಂಧ ಸ್ಥಳ ಪರಿಶೀಲನೆ ಮುಂದುವರಿಸಲಾಗಿದೆ. ಈಗಾಗಲೇ ಸ್ಫೋಟಗೊಂಡ ಸ್ಥಳದಲ್ಲಿ ಬ್ಯಾಟರಿ ಜೊತೆಗೆ ಟೈಮರ್ ಪತ್ತೆಯಾಗಿತ್ತು. ಇದೀಗ, ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ರಾಸಾಯನಿಕಗಳು ಪತ್ತೆಯಾಗಿವೆ.

ಸ್ಪೋಟಕ್ಕೆ ಬಳಸಲಾದ ಕೆಮಿಕಲ್​ಗಳ ಮಾಹಿತಿ ಟಿವಿ9ಗೆ ಲಭ್ಯವಾಗಿದೆ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಪೊಟ್ಯಾಷಿಯಂ ನೈಟ್ರೇಟ್ ಮತ್ತು ಹೈಡ್ರೋಜನ್ ಪರಾಕ್ಸೈಡ್ ಬಳಸಿ ಕೃತ್ಯ ಎಸಗಲಾಗಿದೆ. ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಈ ರಾಸಾಯನಿಕಗಳನ್ನು ಬಳಕೆ ಮಾಡಲಾಗಿದೆ. ಸದ್ಯ, ಸ್ಫೋಟದ ಅವಶೇಷಗಳ ಮಾದರಿಗಳನ್ನು ಎಫ್ಎಸ್​ಎಲ್ ಮತ್ತು ಸೋಕೋ ಟೀಂ ಸಂಗ್ರಹಿಸಿದೆ.

ಇದನ್ನೂ ಓದಿ: ಬೆಂಗಳೂರಿನ ಹೃದಯ ಭಾಗಬಿಟ್ಟು ಗಡಿ ಭಾಗದಲ್ಲೇ ಬಾಂಬ್ ಇಟ್ಟಿದ್ಯಾಕೆ? ಕೆಫೆ ಸ್ಫೋಟದ ಸಂಚಿನ ರಹಸ್ಯ ಬಯಲು!

ಬ್ಯಾಟರಿ, ಟೈಮರ್ ಪತ್ತೆ

ಸ್ಫೋಟಗೊಂಡ ಸ್ಥಳದಲ್ಲಿ ಈಗಾಗಲೇ ಬ್ಯಾಟರಿ, ಟೈಮರ್ ಪತ್ತೆಯಾಗಿದೆ. ಹೀಗಾಗಿ ಟೈಮರ್ ಇಟ್ಟು ಬಾಂಬ್ ಸ್ಫೋಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಾಂಬ್​ಗೆ ಟೈಮರ್ ಫಿಕ್ಸ್ ಮಾಡಿ ಬ್ಯಾಗಿನ ಒಳಗೆ ಇಟ್ಟು ಸ್ಫೋಟಿಸಲಾಗಿದೆ ಮಾಡಲಾಗಿದೆ ಎಂಬ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಮುಂದುವರಿಸಿದ ಸಿಸಿಬಿ ತನಿಖೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈಗಾಗಲೇ ನಾಲ್ವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದ್ದು, ಆಡುಗೋಡಿ ಟೆಕ್ನಿಕಲ್​ ಸೆಲ್​ಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಅಪರಾಧ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ, ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್ ಅವರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Sun, 3 March 24

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ