AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ಕೆಫೆ ಎಂಡಿ!

Rameshwaram Cafe Blast: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಈಗ ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಹೋಟೆಲ್​ನಲ್ಲಿದ್ದ ಯಾವುದೇ ವಸ್ತು ಸ್ಫೋಟವಾಗಿಲ್ಲ. ಆದ್ರೆ, ಹೊರಗಡೆಯಿಂದ ತಂದಿರುವ ವಸ್ತು ಸ್ಫೋಟವಾಗಿರುವುದು ದೃಢಪಟ್ಟಿದೆ. ಹೀಗಾಗಿ ಸ್ಥಳಕ್ಕೆ ಹೆಚ್ಚುವರಿ ಪೊಲೀಸರು, ಬಾಂಬ್ ಸ್ಕ್ವಾಡ್, ಶ್ವಾನ ದಳ ಸೇರಿದಂತೆ ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದ್ದಾರೆ. ಇನ್ನು ಮೇಲ್ನೋಟಕ್ಕೆ ಇದು ದ್ವೇಷದ ಸ್ಪೋಟ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ಕೆಫೆ ಎಂಡಿ!
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ
TV9 Web
| Edited By: |

Updated on:Mar 01, 2024 | 4:34 PM

Share

ಬೆಂಗಳೂರು (ಮಾರ್ಚ್​ 01): ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ (Rameshwaram Cafe Blast) ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಘಟನೆ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಹೊರಗಡೆಯಿಂದ ತಂದಿಟ್ಟಿದ್ದ ಬ್ಯಾಗ್​ನಲ್ಲಿನ ವಸ್ತು ಸ್ಫೋಟವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಮೇಲ್ನೋಟಕ್ಕೆ ಇದು ದ್ವೇಷದ ಸ್ಪೋಟ ಎನ್ನಲಾಗುತ್ತಿದೆ. ಅಂಬಾನಿ ಕುಟುಂಬದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಇದೇ ರಾಮೇಶ್ವರ ಕೆಫೆ ಕ್ಯಾಟರಿಂಗ್ ವಹಿಸಿಕೊಂಡಿದೆ. ಅಲ್ಲದೇ ಭಾರತದ್ಯಾಂತ ಕ್ಯಾಟರಿಂಗ್ ವಿಸ್ತರಿಸಲು ನಿರ್ಧಾರಿಸಿದ್ದರು. ಈ ಹಿನ್ನೆಲೆಯಲ್ಲಿ ಬ್ಯುಸನೆಸ್‌ ಸಂಬಂಧ ಸ್ಪೋಟಿಸಿರುವ ಬಗ್ಗೆಯೂ ಅನುಮಾನಗಳು ವ್ಯಕ್ತವಾಗಿವೆ.

ಸ್ಫೋಟಕ ಅಂಶ ಬಿಚ್ಚಿಟ್ಟ ರಾಮೇಶ್ವರಂ ಕೆಫೆ ಎಂಡಿ

ಇನ್ನು ಈ ಬಗ್ಗೆ ಟಿವಿ9ಗೆ ರಾಮೇಶ್ವರಂ ಕೆಫೆ ವ್ಯವಸ್ಥಾಪಕ ನಿರ್ದೇಶಕಿ(ಎಂಡಿ) ದಿವ್ಯಾ ಪ್ರತಿಕ್ರಿಯಿಸಿದ್ದು, ರಾಮೇಶ್ವರಂ ಕೆಫೆಯ ಕೈತೊಳೆಯುವ ಸ್ಥಳದಲ್ಲಿ ಸ್ಫೋಟವಾಗಿದೆ. ಕಿಚನ್ ಹೊರಗಡೆ ಪ್ಲೇಟ್​ಗಳನ್ನು ಇಡುವ ಸ್ಥಳದಲ್ಲಿ ಸ್ಫೋಟವಾಗಿದೆ. ಕೆಫೆಯಲ್ಲಿ ವಿದ್ಯುತ್ ಅವಘಡ ಅಥವಾ ಸಿಲಿಂಡರ್ ಸ್ಫೋಟವಾಗಿಲ್ಲ. ಹೊರಗಿನಿಂದ ತಂದಿಟ್ಟ ಬ್ಯಾಗ್ ಸ್ಫೋಟವಾಗಿದೆ. 10 ಸೆಕೆಂಡ್ ಅಂತರದಲ್ಲಿ 2 ಬಾರಿ ಸ್ಫೋಟವಾಗಿದೆ. ಒಂದು ಬ್ಯಾಂಗ್ ತಂದಿಟ್ಟ ನಂತರ ಭಾರಿ ಪ್ರಮಾಣದಲ್ಲಿ ಸ್ಫೋಟವಾಗಿದ್ದು, ನಾಲ್ವರು ಗ್ರಾಹಕರು, ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಂಭೀರ ಗಾಯ!

ಈ ಹಿಂದೆ 2 ಬಾರಿ ಅನುಮಾನಾಸ್ಪದ ಬ್ಯಾಗ್ ತಂದಿಟ್ಟು ಹೋಗಿದ್ದರು. ಒಂದು ಬ್ಯಾಗ್ ತೆಗೆದು ನೋಡಿದಾಗ ಮಡಕೆ ಕುಡಿಕೆ ಪತ್ತೆಯಾಗಿತ್ತು. ಮತ್ತೊಂದು ಬ್ಯಾಗನ್ನು ನಿರ್ಜನ ಪ್ರದೇಶದಲ್ಲಿರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಬ್ಯಾಗನ್ನು ಪೊಲೀಸರಿಗೆ ಒಪ್ಪಿಸಿದ್ದೆವು, ಅದರಲ್ಲಿ ಏನಿತ್ತು ಗೊತ್ತಿಲ್ಲ. ಘಟನೆ ಬಗ್ಗೆ ಪೊಲೀಸರಿಗೆ ದೂರನ್ನು ನೀಡಿದ್ದೆವು. ಇಂದು ಕೂಡ ವಾಸ್ ಬೇಸಿನ್ ಬಳಿ ಬ್ಯಾಗ್ ತಂದಿಟ್ಟು ಹೋಗಿದ್ದರು. ಆ ಬ್ಯಾಗ್ ಇರಿಸಿದ್ದ ಸ್ಥಳದಲ್ಲೇ ಇಂದು ಸ್ಫೋಟವಾಗಿದೆ ಎಂದು ಹೇಳಿದರು.

ಸ್ಥಳದಲ್ಲಿ ಪೊಲೀಸರು, ವಿಧಿ ವಿಜ್ಞಾನ ತಜ್ಞರು ಮೊಕ್ಕಂ

ಇನ್ನು ಸ್ಫೋಟದ ಹಿಂದೆ ಹಲವು ಅನುಮಾನಗಳು ವ್ಯಕ್ತವಾದ ಬೆನ್ನಲ್ಲೇ ಸ್ಥಳಕ್ಕೆ ಸುತ್ತಮುತ್ತಲಿನ ಠಾಣೆಯ ಪೊಲೀಸರು, ಹಿರಿಯ ಅಧಿಕಾರಿಗಳು ಘಟನಾ ಸ್ಥಕ್ಕೆ ದೌಡಾಯಿಸಿದ್ದಾರೆ. ಎಸಿಪಿ ರೀನಾ ಸುವರ್ಣ ಮತ್ತು ಮಾರತ್ತಹಳ್ಳಿ ಪೊಲೀಸರು ಸಹ ಸ್ಳಳದಲ್ಲಿ ಮೊಕ್ಕಂ ಹೂಡಿದ್ದಾರೆ. ಇನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸಹ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಈ ಘಟನೆ ಬಗ್ಗೆ ಗೃಹ ಸಚಿವ ಪರಮೇಶ್ವರ್​ ಅವರು ಅಧಿಕಾರಿಗಳ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ)  ತಂಡ ಸಹ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದೆ. ಮತ್ತೊಂದು ತಂಡ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಬಳಿ ಮಾಹಿತಿ ಸಂಗ್ರಹಿಸುತ್ತಿದೆ.

ಕೈ ತೊಳೆಯುವ ಸಿಂಕ್ ಇಟ್ಟಿದ್ದ ಜಾಗದಲ್ಲಿ ಇದ್ದ ಬ್ಯಾಗ್ ಸ್ಪೋಟ ನಡೆದಿದ್ದು, ಇದು ಬೇಕೆಂತಲೇ ಮಾಡಿರುವ ಕೃತ್ಯ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸಿ ಸಿ ಕ್ಯಾಮರಾ ಪರೀಲನೆ ನಡೆಸಲಾಗುತ್ತಿದ್ದು, ಶಂಕಿತರಿಗಾಗಿ ಹುಡುಕಾಟ ನಡೆಯುತ್ತಿದೆ.  ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸಿದ್ದಾರೆ. ಅಗತ್ಯ ಉಪಕರಣಗಳ ಜೊತೆ ರಾಮೇಶ್ವರಂ ಕೆಫೆಗೆ ಬಂದಿರುವ FSL ತಂಡ ಪರಿಶೀಲನೆ ನಡೆಸಿದೆ. ಅಲ್ಲದೇ ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳ  ಬಂದಿದ್ದು, ತಪಾಸಣೆ ನಡೆಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Fri, 1 March 24

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು