AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic: ವಿಶ್ವಮಟ್ಟದಲ್ಲೂ ಸದ್ದು ಮಾಡಿದ ಬೆಂಗಳೂರು ಟ್ರಾಫಿಕ್..!

ಸಿಲಿಕಾನ್‌ ಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ದೇಶದಲ್ಲಿ ಮಾತ್ರವಲ್ಲ, ಇದೀಗ ವಿಶ್ವಮಟ್ಟದಲ್ಲೂ ಸುದ್ದಿಯಾಗುತ್ತಿದೆ. ಬೆಂಗಳೂರು ಟ್ರಾಫಿಕ್‌ ಜಾಮ್‌ ಸಮಸ್ಯೆಯ ಬಗ್ಗೆ ಹೊಸದಾಗಿ ವಿವರಿಸಿ ಹೇಳುವ ಅವಶ್ಯಕತೆ ಇಲ್ಲ. ಬೆಂಗಳೂರಲ್ಲಿ ವರ್ಷದಿಂದ ವರ್ಷಕ್ಕೆ ಟ್ರಾಫಿಕ್‌ ಜಾಮ್‌ ಜಾಸ್ತಿ ಆಗುತ್ತಲ್ಲೇ ಇದ್ದು, ಇದೀಗ ಬೆಂಗಳೂರು ಟ್ರಾಫಿಕ್‌ ಜಾಮ್‌ ವಿಚಾರದಲ್ಲಿ ಮತ್ತೊಂದು ಕುಖ್ಯಾತಿಯನ್ನು ಗಳಿಸಿದೆ.

Bengaluru Traffic: ವಿಶ್ವಮಟ್ಟದಲ್ಲೂ ಸದ್ದು ಮಾಡಿದ ಬೆಂಗಳೂರು ಟ್ರಾಫಿಕ್..!
ಬೆಂಗಳೂರು ಟ್ರಾಫಿಕ್ (ಸಾಂದರ್ಭಿಕ ಚಿತ್ರ)
ರಮೇಶ್ ಬಿ. ಜವಳಗೇರಾ
|

Updated on:Jan 13, 2025 | 7:28 PM

Share

ಬೆಂಗಳೂರು, (ಜನವರಿ 13): ಸದಾ ವಾಹನ ದಟ್ಟಣೆ, ಟ್ರಾಫಿಕ್ ಜಂಜಾಟದ ಮೂಲಕ ಸಿಟಿ ಜನರನ್ನ ಕಂಗಾಲಾಗಿಸಿದ್ದ ಬೆಂಗಳೂರಿನ ಟ್ರಾಫಿಕ್ ಜಾಮ್ ಭೂತ ಇದೀಗ ವಿಶ್ವಮಟ್ಟದಲ್ಲೂ ಸದ್ದು ಮಾಡುತ್ತಿದೆ. ನೆದರ್ ಲ್ಯಾಂಡ್ ನ ಲೋಕೆಷನ್ ಟೆಕ್ನಾಲಜಿ ಸಂಸ್ಥೆ ಟಾಮ್ ಟಾಮ್ ಬಿಡುಗಡೆ ಮಾಡಿರೋ ವಿಶ್ವದ ಅತಿಹೆಚ್ಚು ಸ್ಲೋ ಮೂವಿಂಗ್ ಟ್ರಾಫಿಕ್ ಹೊಂದಿರುವ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಮೂಲಕ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನ ವಿಶ್ವಮಟ್ಟದಲ್ಲಿ ಅನಾವರಣ ಮಾಡಿದೆ.

ಸದ್ಯ ವಿಶ್ವದ ಪ್ರಮುಖ ನಗರಗಳ ಟ್ರಾಫಿಕ್ ದಟ್ಟಣೆ ಬಗ್ಗೆ ಅಧ್ಯಯನ ನಡೆಸಿದ್ದ ಟಾಮ್ ಟಾಮ್ ಸಂಸ್ಥೆ, ಭಾರತದ ಮೂರು ನಗರಗಳಲ್ಲಿ ಅತಿಹೆಚ್ಚು ಟ್ರಾಫಿಕ್ ಇರುವುದಾಗಿ ವರದಿ ರಿಲೀಸ್ ಮಾಡಿದೆ. ಟಾಮ್ ಟಾಮ್ ವರದಿಯಲ್ಲಿ ಕಲ್ಕತ್ತಾ, ಪುಣೆ ಹಾಗೂ ಬೆಂಗಳೂರು ಅತಿಹೆಚ್ಚು ಸಂಚಾರ ದಟ್ಟಣೆ ಹೊಂದಿರುವುದಾಗಿ ವರದಿಯಿಂದ ತಿಳಿದುಬಂದಿದೆ. ಇತ್ತ ರಾಜಧಾನಿಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರೀ ವಾಹನ ದಟ್ಟಣೆ ಮತ್ತಷ್ಟು ಹೆಚ್ಚಾಗಿರುವ ವರದಿ ಬಹಿರಂಗವಾಗಿದ್ದು, ಬೆಂಗಳೂರಿನಲ್ಲಿ 10 ಕಿಲೋಮೀಟರ್ ದೂರ ತಲುಪೋಕೆ 34 ನಿಮಿಷ 10 ಸೆಕೆಂಡ್ ಸಮಯ ಬೇಕಿದೆ ಎಂದು ವರದಿ ತಿಳಿಸಿದೆ. ಅಲ್ಲದೇ ರಾಜಧಾನಿಯ ಜನರು ವರ್ಷದಲ್ಲಿ ಐದು ದಿನಗಳಷ್ಟು ಸಮಯವನ್ನ ಟ್ರಾಫಿಕ್ ನಲ್ಲೇ ಕಳೆಯುತ್ತಿರುವುದು ವರದಿ ಹೇಳಿದೆ.

ಇದನ್ನೂ ಓದಿ: ಕೆಟ್ಟು ನಿಂತ ವಾಹನ, ರಸ್ತೆ ದುರಸ್ತಿ: ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತ

ಇನ್ನು ಟಾಮ್ ಟಾಮ್ ಸಂಸ್ಥೆಯ ವರದಿ ಹೊರಬೀಳುತ್ತಿದ್ದಂತೆಯೇ ಬಿಜೆಪಿ ನಾಯಕರು ರಾಜ್ಯ ರಾಜಧಾನಿಯ ಟ್ರಾಫಿಕ್ ಕಂಟ್ರೋಲ್ ಮಾಡುವುದಕ್ಕೆ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಚಾಟಿ ಬೀಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯತೆ ಬಗ್ಗೆ ಟೀಕಿಸಿರೋ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಬೆಂಗಳೂರು ಅಂದ್ರೆ ಉದ್ಯಾನ ನಗರಿ ಅನ್ನೋ ಘನತೆ ಇತ್ತು, ಆದ್ರೆ, ಈಗ ವಾಹನ ದಟ್ಟಣೆಗೆ ಸಿಲುಕಿ ನರಳೋ ನಗರವಾಗಿದೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಇತ್ತ ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲೂ ಟ್ರಾಫಿಕ್ ಕಿರಿಕಿರಿ ನಿರ್ವಹಣೆಯಲ್ಲಿ ಎಡವಿದ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬ್ರ್ಯಾಂಡ್ ಬ್ರ್ಯಾಂಡ್ ಎನ್ನುತ್ತಲೇ ರಾಜಧಾನಿಯನ್ನ ಬ್ಯಾಡ್ ಮಾಡಿದ್ದು ಈ ಸರ್ಕಾರದ ಸಾಧನೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಬಾಣಬಿಟ್ಟಿದೆ. ಇತ್ತ ರಾಜಧಾನಿಯ ಟ್ರಾಫಿಕ್ ಸಮಸ್ಯೆ ಬಗ್ಗೆ ಸಿಟಿಜನರು ಕೂಡ ಅಭಿಪ್ರಾಯ ವ್ಯಕ್ತಪಡಿಸೋ ಜೊತೆಗೆ ಸಾರ್ವಜನಿಕ ಸಾರಿಗೆಯನ್ನ ಉತ್ತೇಜಿಸೋ ಕೆಲಸವಾಗಬೇಕು ಅಂತಿದ್ದಾರೆ

ಸದ್ಯ ಬೆಂಗಳೂರಿನಲ್ಲಿ ನಡೆಯುತ್ತಿರೋ ಅವೈಜ್ಞಾನಿಕ ಕಾಮಗಾರಿಗಳು, ರಸ್ತೆಗಳ ದುಸ್ಥಿತಿ ಜೊತೆಗೆ ದಿನೇ ದಿನೇ ಹೆಚ್ಚಳವಾಗುತ್ತಿರುವ ವಾಹನಗಳ ಸಂಖ್ಯೆಯಿಂದ ರಾಜಧಾನಿಯಲ್ಲಿ ಟ್ರಾಫಿಕ್ ಸಮಸ್ಯೆ ಸಹ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಸಿಲಿಕಾನ್ ಸಿಟಿಯ ಟ್ರಾಫಿಕ್ ಸಮಸ್ಯೆ ಇದೀಗ ವಿಶ್ವಮಟ್ಟದಲ್ಲಿ ಕುಖ್ಯಾತಿ ಪಡೆಯುವಂತೆ ಮಾಡಿದೆ. ಸದ್ಯ ಬೆಂಗಳೂರನ್ನ ಬ್ರ್ಯಾಂಡ್ ಮಾಡುತ್ತೇವೆ ಎಂದಿರುವ ಸರ್ಕಾರ, ರಾಜಧಾನಿಯ ಟ್ರಾಫಿಕ್ ಕಿರಿಕಿರಿಗೆ ಲಗಾಮು ಹಾಕೋ ಕ್ರಮಗಳನ್ನ ಜಾರಿಗೊಳಿಸುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ವರದಿ: ಶಾಂತಮೂರ್ತಿ,ಟಿವಿ9,ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:21 pm, Mon, 13 January 25

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?