AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rapid Road: ರ್‍ಯಾಪಿಡ್ ರಸ್ತೆಯಲ್ಲಿ ಬಿರುಕು, ರಸ್ತೆ ನಿರ್ಮಾಣ ಮಾಡದಂತೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ಮುಖ್ಯಮಂತ್ರಿಯವರು ಉದ್ಘಾಟಿಸಿದ ಒಂದೇ ತಿಂಗಳಿಗೆ ದೇಶದ ಪ್ರಥಮ ರ್‍ಯಾಪಿಡ್​ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಕೋಟ್ಯಂತರ ಹಣ ಖರ್ಚು ಮಾಡಿ ನಿರ್ಮಾಣಗೊಂಡಿದ್ದ ರ್‍ಯಾಪಿಡ್​ ರಸ್ತೆ ಇದಾಗಿದೆ. ಈ ಹಿನ್ನಲೆ ರ್‍ಯಾಪಿಡ್ ರಸ್ತೆ ನಿರ್ಮಾಣ ಮಾಡದಂತೆ ಸಿಎಂ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Bengaluru Rapid Road: ರ್‍ಯಾಪಿಡ್ ರಸ್ತೆಯಲ್ಲಿ ಬಿರುಕು, ರಸ್ತೆ ನಿರ್ಮಾಣ ಮಾಡದಂತೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ
ಬೆಂಗಳೂರು ರ್‍ಯಾಪಿಡ್ ರಸ್ತೆ
TV9 Web
| Edited By: Rakesh Nayak Manchi|

Updated on: Jan 14, 2023 | 2:53 PM

Share

ಬೆಂಗಳೂರು: ಉದ್ಘಾಟನೆಗೊಂಡ ಒಂದೇ ತಿಂಗಳಿಗೆ ಬಿರುಕು ಕಂಡ ಹಿನ್ನಲೆ ರ್‍ಯಾಪಿಡ್ ರಸ್ತೆ (Rapid road) ನಿರ್ಮಾಣ ಮಾಡದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದ್ದಾರೆ. “ಪ್ರಿಕಾಸ್ಟ್ ತಂತ್ರಜ್ಞಾನ ಬಳಸಿ ನಿರ್ಮಿಸಿದ ಮೊದಲ ರ್‍ಯಾಪಿಡ್ ರಸ್ತೆಯಲ್ಲಿ ಬಿರುಕು ಕಂಡಿರುವ ಹಿನ್ನಲೆಯಲ್ಲಿ ರ್‍ಯಾಪಿಡ್ ರಸ್ತೆ ನಿರ್ಮಾಣ ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಕರ್ನಾಟಕ ಮುಖ್ಯಮಂತ್ರಿ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ಅಮೆರಿಕದಲ್ಲಿ ನಿರ್ಮಾನಗೊಂಡ ರ್‍ಯಾಪಿಡ್ ರಸ್ತೆ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಇದೇ ಮಾದರಿಯಲ್ಲಿ ನಗರದ ಸಿ.ವಿ.ರಾಮನ್​ನಗರ ಕ್ಷೇತ್ರದ ಹಳೇ ಮದ್ರಾಸ್​​ ರಸ್ತೆಯಲ್ಲಿ ನಿರ್ಮಿಸಲಾದ ರ್‍ಯಾಪಿಡ್​​ ರಸ್ತೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಡಿ.08 ರಂದು ಉದ್ಘಾಟಿಸಿದ್ದರು. ದೇಶದಲ್ಲಿ ಇದೇ ಮೊದಲು ಬಾರಿಗೆ ನಮ್ಮ ಬೆಂಗಳೂರಿನಲ್ಲಿ ರ್‍ಯಾಪಿಡ್ ರಸ್ತೆ ಪರಿಚಯಿಸಲಾಗಿತ್ತು. ಉದ್ಘಾಟನೆ ಬಳಿಕ ನಗರದ ಇನ್ನಿತರ ಕಡೆಗಳಲ್ಲಿ ಇದೇ ರೀತಿಯ ರಸ್ತೆ ನಿರ್ಮಾಣ ಮಾಡಲು ಬಿಬಿಎಂಪಿ ನಿರ್ಧರಿಸಿತ್ತು.

ಇದನ್ನೂ ಓದಿ: ಬೆಂಗಳೂರಲ್ಲಿ ನಿರ್ಮಿಸಿದ್ದ ದೇಶದ ಪ್ರಥಮ ರ್ಯಾಪಿಡ್​ ರಸ್ತೆ ಉದ್ಘಾಟನೆಗೊಂಡ ಒಂದೇ ತಿಂಗಳಿಗೆ ಬಿರುಕು

ನಗರದ ಹಳೆ ಮದ್ರಾಸ್ ರಸ್ತೆಯ ಬಿನ್ನಮಂಗಲ ವೃತ್ತದಿಂದ ಸುಮಾರು 500 ಮೀಟರ್ ತನಕ ಪ್ರಾಯೋಗಿಕವಾಗಿ ರ್‍ಯಾಪಿಡ್ ರಸ್ತೆಯನ್ನು ಕೇವಲ ಹದಿನೈದು ದಿನಗಳ ಒಳಗೆ ರಸ್ತೆ ಕಾಮಗಾರಿ ನಡೆಸಿ ಮುಗಿಸಿದ್ದರು. ಈ ರ್‍ಯಾಪಿಡ್ ರಸ್ತೆ (ಫ್ರೀಕಾಸ್ಟ್ ಪೋಸ್ಟ್ ಟೆನ್ಷನಿಂಗ್ ಕಾಂಕ್ರೀಟ್ ಪೇವ್ಮೆಂಟ್) ಫ್ರೀಕಾಸ್ಟ್ ಪ್ಯಾನೆಲ್​ನಿಂದ ನಿರ್ಮಿಸಲಾಗುತ್ತದೆ. ಮೊದಲಿಗೆ ರಸ್ತೆಯನ್ನು ಸಮತಟ್ಟಾಗಿ ಮಾಡಿಕೊಂಡು ಅದರ ಮೇಲೆ ಫ್ರೀಕಾಸ್ಟ್ ಪ್ಯಾನಲ್ ಗಳನ್ನು ಅಳವಡಿಸಲಾಗುತ್ತದೆ. ಪ್ರತಿ ಪ್ಯಾನಲ್​ನಲ್ಲಿ 4 ರಂದ್ರಗಳಿದ್ದು ವಾಹನಗಳು ಸಂಚಾರ ಮಾಡುವಾಗ ಅಲುಗಾಡದಂತೆ ನೀಡುತ್ತವೆ. ಹಾಗೆ ಒಂದು ಫ್ರೀಕಾಸ್ಟ್ ಪ್ಯಾನಲ್ 5 ಅಡಿ ಅಗಲ 20 ಅಡಿ ಉದ್ದ 7 ಇಂಚು ದಪ್ಪವಿದ್ದು ಪ್ರತಿ 45 ಮೀಟರ್​ಗೂ ರ್‍ಯಾಪಿಡ್ ಹಾರ್ಡನಿಂಗ್ ಕಾಂಕ್ರೀಟ್ ಹಾಕಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ