ರೇವ್ ಪಾರ್ಟಿ ಪ್ರಕರಣ: ಆಂಧ್ರ ಸಚಿವ, ಎಂಎಲ್​ಎ ಆಪ್ತರು ವಶಕ್ಕೆ

ರೇವ್ ಪಾರ್ಟಿ ವೇಳೆ ಕಾರೊಂದರಲ್ಲಿ ಎಂಎಲ್​ಎ ಪಾಸ್ ಪತ್ತೆಯಾಗಿತ್ತು. ಸದ್ಯ ಈಗ ಸಚಿವರಾಗಿರುವ ಆಂಧ್ರದ ಕಾಕಾನಿ ಗೋವರ್ಧನ್ ರೆಡ್ಡಿ ಎಂಬ ಎಂಎಲ್​ಎ ಪಾಸ್ ಪತ್ತೆಯಾದ ಹಿನ್ನೆಲೆ ಜಾಡು ಬೆನ್ನತಿದ ಸಿಸಿಬಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ವೈಎಸ್​ಆರ್ ಪಕ್ಷದ ಎಂಎಲ್ಎ ಶ್ರೀಕಾಂತ್ ರೆಡ್ಡಿಗೆ ಆಪ್ತನಾಗಿರುವ ಅರೂಣ್​ನ್ನೂ ವಶಕ್ಕೆ ಪಡೆಯಲಾಗಿದೆ.

ರೇವ್ ಪಾರ್ಟಿ ಪ್ರಕರಣ: ಆಂಧ್ರ ಸಚಿವ, ಎಂಎಲ್​ಎ ಆಪ್ತರು ವಶಕ್ಕೆ
ಎಂಎಲ್ಎ ಶ್ರೀಕಾಂತ್ ರೆಡ್ಡಿಗೆ ಆಪ್ತನಾಗಿರುವ ಅರೂಣ್
Follow us
| Updated By: ಆಯೇಷಾ ಬಾನು

Updated on: May 25, 2024 | 8:02 AM

ಬೆಂಗಳೂರು, ಮೇ.25: ಜಿ.ಆರ್.ಫಾರ್ಮ್ ಹೌಸ್ ರೇವ್ ಪಾರ್ಟಿ (Rave Party) ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ಪಾರ್ಟಿಯೊಳಗಿನ ಮೋಜು ಮಸ್ತಿಯ ವಿಡಿಯೋಗಳು ವೈರಲ್ ಆದ್ರೆ, ಸಿಸಿಬಿ (CCB) ಅಧಿಕಾರಿಗಳಿಗಳ ಜೊತೆಗೆ ನಟಿ ಹೇಮಾ ಮಾಡಿದ ಡ್ರಾಮಾ ಕೂಡ ಗೊತ್ತಾಗಿದೆ. ಇದೆಲ್ಲದರ ನಡುವೆ ಹೆಬ್ಬಗೋಡಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಗಳ ತಲೆದಂಡ ಕೂಡ ಆಗಿದೆ. ಅಷ್ಟೇ ಅಲ್ಲದೆ ಇದೀಗ ಆಂಧ್ರ ಸಚಿವ ಕಾಕನಿ ಗೋವರ್ಧನ ರೆಡ್ಡಿ (Kakani Govardhan Reddy) ಹಾಘೂ  ಎಂಎಲ್ಎ ಶ್ರೀಕಾಂತ್ ರೆಡ್ಡಿ ಆಪ್ತರನ್ನು ಸಿಸಿಬಿ ವಶಕ್ಕೆ ಪಡೆದಿದೆ.

ಮೇ 19 ರಂದು ಎಲೆಕ್ಟ್ರಾನಿಕ್ ಸಿಟಿ ಹೊರವಲಯದ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಆಯೋಜನೆಯಾಗಿತ್ತು. ಈ ಪಾರ್ಟಿಗೆ ಸಿಸಿಬಿ ತಂಡ ದಾಳಿ ನಡೆಸಿದ್ದು ತೆಲಗು ನಟಿ ಹೇಮಾ, ಆಶಿ‌ ರಾಯ್ ಸೇರಿದಂತೆ ಹಲವು ಸ್ಟಾರ್​ಗಳನ್ನು ವಶಕ್ಕೆ ಪಡೆಯಲಾಗಿತ್ತು. ಆ ವೇಳೆ ಕಾರೊಂದರಲ್ಲಿ ಎಂಎಲ್​ಎ ಪಾಸ್ ಪತ್ತೆಯಾಗಿತ್ತು. ಸದ್ಯ ಈಗ ಸಚಿವರಾಗಿರುವ ಆಂಧ್ರದ ಕಾಕಾನಿ ಗೋವರ್ಧನ್ ರೆಡ್ಡಿ ಎಂಬ ಎಂಎಲ್​ಎ ಪಾಸ್ ಪತ್ತೆಯಾದ ಹಿನ್ನೆಲೆ ಜಾಡು ಬೆನ್ನತಿದ ಸಿಸಿಬಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾ, ಆಶು ರೈ ರಿಪೋರ್ಟ್ ಪಾಸಿಟಿವ್

ಪಾಸ್ ವಿಚಾರವಾಗಿ ಹುಡುಕಾಟ ನಡೆಸಿದ್ದ ಸಿಸಿಬಿ ಅಧಿಕಾರಿಗಳು ಹೈದರಾಬಾದ್ ಮೂಲದ ಪೂರ್ಣ ರೆಡ್ಡಿ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಈತ ಸಿಸಿಬಿ ದಾಳಿ ವೇಳೆ ಎಸ್ಕೇಪ್ ಆಗಿದ್ದ. ರೇವ್ ಪಾರ್ಟಿ ಆಯೋಜನೆಯಲ್ಲಿ ಈತ ಪ್ರಮುಖ ಪಾತ್ರವಹಿಸಿದ್ದ. ಜೊತೆಗೆ ಕಾಕಾನಿ ಗೋವರ್ಧನ ರೆಡ್ಡಿಗೆ ಆಪ್ತ ಎಂಬ ಮಾಹಿತಿ ತಿಳಿದುಬಂದಿದೆ. ಸದ್ಯ ಪೂರ್ಣ ರೆಡ್ಡಿಯ ವಿಚಾರಣೆ ನಡೆಸಲಾಗುತ್ತಿದೆ.

ಇನ್ನು ಈ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮತ್ತೋರ್ವ ಆರೋಪಿಗೆ ರಾಜಕೀಯ ನಂಟಿದೆ. ಅರೂಣ್ ಕುಮಾರ್ ‌ಅಲಿಯಾಸ್ ಅರೂಣ್ ಚೌದರಿಗೆ ರಾಜಕೀಯ ನಂಟು ಇದೆ ಎಂಬುವುದು ಪತ್ತೆಯಾಗಿದೆ. ವೈಎಸ್​ಆರ್ ಪಕ್ಷದ ಎಂಎಲ್ಎ ಶ್ರೀಕಾಂತ್ ರೆಡ್ಡಿಗೆ ಅರೂಣ್ ಆಪ್ತನಾಗಿದ್ದ. ಅಲ್ಲದೆ ಈ ರೇವ್ ಪಾರ್ಟಿ ಆಯೋಜನೆಯಲ್ಲಿ ಅರೂಣ್ ಪಾತ್ರವೂ ಇದೆ. ಹೀಗಾಗಿ ಸಿಸಿಬಿ ಅಧಿಕಾರಿಗಳು ಅರೂಣ್​ನನ್ನು ಅರೆಸ್ಟ್ ಮಾಡಿ ಮೊಬೈಲ್ ಜಪ್ತಿ ಮಾಡಿದ್ದಾರೆ. ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಮತ್ತು ಶ್ರೀಕಾಂತ್ ರೆಡ್ಡಿ ಜೊತೆಗೆ ಇರುವ ಅರೂಣ್ ಫೋಟೋಗಳು ಪತ್ತೆಯಾಗಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ