AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Stampede: ಆರ್​ಸಿಬಿ ವಿರುದ್ಧ 3ನೇ ಎಫ್​ಐಆರ್​, ಹೆಚ್ಚಿದ ಸಂಕಷ್ಟ

Bengaluru RCB Victory Celebrations Stampede: ಆರ್​ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಈ ಪ್ರಕರಣ ಸಂಬಂಧ ಆರ್​ಸಿಬಿ ವಿರುದ್ಧ ಮೂರನೇ ಎಫ್​ಐಆರ್​ ​​ ದಾಖಲಾಗಿದೆ.

Bengaluru Stampede: ಆರ್​ಸಿಬಿ ವಿರುದ್ಧ 3ನೇ ಎಫ್​ಐಆರ್​, ಹೆಚ್ಚಿದ ಸಂಕಷ್ಟ
ಆರ್​ಸಿಬಿ, ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆ
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on: Jun 06, 2025 | 9:57 PM

Share

ಬೆಂಗಳೂರು, ಜೂನ್ 06: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ (Chinnaswamy stampede) ಪ್ರಕರಣ ಸಂಬಂಧ ಕಬ್ಬನ್​ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್​ಸಿಬಿ (RCB), ಕೆಎಸ್​ಸಿಎ, ಡಿಎನ್​ಎ ಕಂಪನಿ ವಿರುದ್ಧ ಮೂರನೇ ಎಫ್​ಐಆರ್​ ದಾಖಲಾಗಿದೆ. ಗಾಯಾಳು ಬಿಕಾಂ ವಿದ್ಯಾರ್ಥಿ ಸಿ.ವೇಣು ಅವರು ನೀಡಿದ ದೂರು ಆಧಾರಸಿ, ಎಫ್​ಐಆರ್​ ದಾಖಲಾಗಿದೆ.

ಆರ್​ಸಿಬಿಯ ಉಚಿತ ಟಿಕೆಟ್‌ ಜಾಹೀರಾತು ನೋಡಿ ಕ್ರೀಡಾಂಗಣಕ್ಕೆ ಬಂದಿದ್ದೆ. ಕ್ರೀಡಾಂಗಣದ ಗೇಟ್ ನಂಬರ್ 6ರ ಬಳಿ ನೂಕುನುಗ್ಗಲು ಉಂಟಾಗಿತ್ತು. ನೂಕುನುಗ್ಗಲಿನಲ್ಲಿ ಬಲಗಾಲಿನ ಮೇಲೆ ಬ್ಯಾರಿಕೇಡ್‌ ಬಿದ್ದಿತ್ತು. ಇದರಿಂದ ಗಾಯಗೊಂಡು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿಂದೆ ಎರಡು ಕೇಸ್​ ದಾಖಲು

ಕಾಲ್ತುಳಿತದಲ್ಲಿ ಗಾಯಗೊಂಡ ರೋಲನ್ ಗೊಮೆಸ್ ಎಂಬುವರು ಶುಕ್ರವಾರ ಸಂಜೆ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಆರ್​ಸಿಬಿ ಫ್ರಾಂಚೈಸಿ, ಕೆಎಸ್​ಸಿಎ ಮತ್ತು ಡಿಎನ್​ಎ ಕಂಪನಿ ವಿರುದ್ಧ ಬಿಎನ್​ಎಸ್​​ ಕಾಯ್ದೆ 2023 (U/s-125(a)) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ
Image
Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು
Image
ಚಿನ್ನಸ್ವಾಮಿ ದುರಂತ; ವಿರಾಟ್ ಕೊಹ್ಲಿ ವಿರುದ್ದ ದೂರು ದಾಖಲು
Image
RCB ಮಾರ್ಕೆಟಿಂಗ್​ ಮುಖಸ್ಥ​​​​​​​ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
Image
Bengaluru Stampede: ಸುಮೋಟೋ ಕೇಸ್​ ​ದಾಖಲಿಸಿಕೊಂಡ ಮಾನವ ಹಕ್ಕುಗಳ ಆಯೋಗ

ಜಾಲತಾಣದಲ್ಲಿ ಆರ್​ಸಿಬಿ ಪೋಸ್ಟ್​ ನೋಡಿ ನನ್ನ ಗೆಳೆಯರ ಜೊತೆ ಸಂಭ್ರಮಾಚರಣೆ ವೀಕ್ಷಿಸಲು ಬಂದಿದ್ದೆ. ತೆರದ ಬಸ್ ಮೂಲಕ ಮೆರಬಣಿಗೆ ಇದೆ ಎಂದು ತಿಳಿಸಲಾಗಿತ್ತು. ಗೇಟ್ ನಂಬರ್ 17ರಲ್ಲಿ ನಾನು ಹೋಗುವಾಗ ನೂಕುನುಗ್ಗಲು‌ ಆಯ್ತು. ಈ ವೇಳೆ ನನ್ನ ತೋಳಿಗೆ ಪೆಟ್ಟಾಗಿದೆ ಎಂದು ಗಾಯಾಳು ರೋಲನ್ ಗೊಮೆಸ್ ದೂರು ನೀಡಿದ್ದರು.

ಇದನ್ನೂ ಓದಿ: ಕಾಲ್ತುಳಿತ ಬೆನ್ನಲ್ಲೇ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ, ಗುಪ್ತಚರ ಇಲಾಖೆಗೆ ಹೊಸ ಮುಖ

ಪ್ರಕರಣ ಸಂಬಂಧ ನಾಲ್ವರ ಬಂಧನ

ಕಬ್ಬನ್ ಪಾರ್ಕ್ ಇನ್ಸ್​ಪೆಕ್ಟರ್ ಗಿರೀಶ್ ದೂರು ನೀಡಿದ್ದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 105, 115, 118ರಡಿ ಮೊಕದ್ದಮೆ ದಾಖಲಾಗಿತ್ತು. ಆರ್​ಸಿಬಿ ಮ್ಯಾನೇಜ್ಮೆಂಟ್ A-1 ಆಗಿದ್ದರೆ, ಕಾರ್ಯಕ್ರಮ ಆಯೋಜನೆ ಮಾಡಿದ್ದ DNA ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ A-2 ಆಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್​ನ A3 ಯನ್ನಾಗಿ ಮಾಡಿ ಎಫ್​ಐಆರ್ ದಾಖಲಿಸಲಾಗಿತ್ತು. ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ಸೇರಿ ನಾಲ್ವರನ್ನು ಬಂಧಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ