Bengaluru Stampede: ಆರ್​ಸಿಬಿ ವಿರುದ್ಧ 3ನೇ ಎಫ್​ಐಆರ್​, ಹೆಚ್ಚಿದ ಸಂಕಷ್ಟ

Bengaluru RCB Victory Celebrations Stampede: ಆರ್​ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಈ ಪ್ರಕರಣ ಸಂಬಂಧ ಆರ್​ಸಿಬಿ ವಿರುದ್ಧ ಮೂರನೇ ಎಫ್​ಐಆರ್​ ​​ ದಾಖಲಾಗಿದೆ.

Bengaluru Stampede: ಆರ್​ಸಿಬಿ ವಿರುದ್ಧ 3ನೇ ಎಫ್​ಐಆರ್​, ಹೆಚ್ಚಿದ ಸಂಕಷ್ಟ
ಆರ್​ಸಿಬಿ, ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆ
Updated By: ವಿವೇಕ ಬಿರಾದಾರ

Updated on: Jun 06, 2025 | 9:57 PM

ಬೆಂಗಳೂರು, ಜೂನ್ 06: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ (Chinnaswamy stampede) ಪ್ರಕರಣ ಸಂಬಂಧ ಕಬ್ಬನ್​ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್​ಸಿಬಿ (RCB), ಕೆಎಸ್​ಸಿಎ, ಡಿಎನ್​ಎ ಕಂಪನಿ ವಿರುದ್ಧ ಮೂರನೇ ಎಫ್​ಐಆರ್​ ದಾಖಲಾಗಿದೆ. ಗಾಯಾಳು ಬಿಕಾಂ ವಿದ್ಯಾರ್ಥಿ ಸಿ.ವೇಣು ಅವರು ನೀಡಿದ ದೂರು ಆಧಾರಸಿ, ಎಫ್​ಐಆರ್​ ದಾಖಲಾಗಿದೆ.

ಆರ್​ಸಿಬಿಯ ಉಚಿತ ಟಿಕೆಟ್‌ ಜಾಹೀರಾತು ನೋಡಿ ಕ್ರೀಡಾಂಗಣಕ್ಕೆ ಬಂದಿದ್ದೆ. ಕ್ರೀಡಾಂಗಣದ ಗೇಟ್ ನಂಬರ್ 6ರ ಬಳಿ ನೂಕುನುಗ್ಗಲು ಉಂಟಾಗಿತ್ತು. ನೂಕುನುಗ್ಗಲಿನಲ್ಲಿ ಬಲಗಾಲಿನ ಮೇಲೆ ಬ್ಯಾರಿಕೇಡ್‌ ಬಿದ್ದಿತ್ತು. ಇದರಿಂದ ಗಾಯಗೊಂಡು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿಂದೆ ಎರಡು ಕೇಸ್​ ದಾಖಲು

ಕಾಲ್ತುಳಿತದಲ್ಲಿ ಗಾಯಗೊಂಡ ರೋಲನ್ ಗೊಮೆಸ್ ಎಂಬುವರು ಶುಕ್ರವಾರ ಸಂಜೆ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಆರ್​ಸಿಬಿ ಫ್ರಾಂಚೈಸಿ, ಕೆಎಸ್​ಸಿಎ ಮತ್ತು ಡಿಎನ್​ಎ ಕಂಪನಿ ವಿರುದ್ಧ ಬಿಎನ್​ಎಸ್​​ ಕಾಯ್ದೆ 2023 (U/s-125(a)) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ
Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು
ಚಿನ್ನಸ್ವಾಮಿ ದುರಂತ; ವಿರಾಟ್ ಕೊಹ್ಲಿ ವಿರುದ್ದ ದೂರು ದಾಖಲು
RCB ಮಾರ್ಕೆಟಿಂಗ್​ ಮುಖಸ್ಥ​​​​​​​ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
Bengaluru Stampede: ಸುಮೋಟೋ ಕೇಸ್​ ​ದಾಖಲಿಸಿಕೊಂಡ ಮಾನವ ಹಕ್ಕುಗಳ ಆಯೋಗ

ಜಾಲತಾಣದಲ್ಲಿ ಆರ್​ಸಿಬಿ ಪೋಸ್ಟ್​ ನೋಡಿ ನನ್ನ ಗೆಳೆಯರ ಜೊತೆ ಸಂಭ್ರಮಾಚರಣೆ ವೀಕ್ಷಿಸಲು ಬಂದಿದ್ದೆ. ತೆರದ ಬಸ್ ಮೂಲಕ ಮೆರಬಣಿಗೆ ಇದೆ ಎಂದು ತಿಳಿಸಲಾಗಿತ್ತು. ಗೇಟ್ ನಂಬರ್ 17ರಲ್ಲಿ ನಾನು ಹೋಗುವಾಗ ನೂಕುನುಗ್ಗಲು‌ ಆಯ್ತು. ಈ ವೇಳೆ ನನ್ನ ತೋಳಿಗೆ ಪೆಟ್ಟಾಗಿದೆ ಎಂದು ಗಾಯಾಳು ರೋಲನ್ ಗೊಮೆಸ್ ದೂರು ನೀಡಿದ್ದರು.

ಇದನ್ನೂ ಓದಿ: ಕಾಲ್ತುಳಿತ ಬೆನ್ನಲ್ಲೇ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ, ಗುಪ್ತಚರ ಇಲಾಖೆಗೆ ಹೊಸ ಮುಖ

ಪ್ರಕರಣ ಸಂಬಂಧ ನಾಲ್ವರ ಬಂಧನ

ಕಬ್ಬನ್ ಪಾರ್ಕ್ ಇನ್ಸ್​ಪೆಕ್ಟರ್ ಗಿರೀಶ್ ದೂರು ನೀಡಿದ್ದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 105, 115, 118ರಡಿ ಮೊಕದ್ದಮೆ ದಾಖಲಾಗಿತ್ತು. ಆರ್​ಸಿಬಿ ಮ್ಯಾನೇಜ್ಮೆಂಟ್ A-1 ಆಗಿದ್ದರೆ, ಕಾರ್ಯಕ್ರಮ ಆಯೋಜನೆ ಮಾಡಿದ್ದ DNA ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ A-2 ಆಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್​ನ A3 ಯನ್ನಾಗಿ ಮಾಡಿ ಎಫ್​ಐಆರ್ ದಾಖಲಿಸಲಾಗಿತ್ತು. ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ಸೇರಿ ನಾಲ್ವರನ್ನು ಬಂಧಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ