AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ: ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಸಿಬಿ ಮ್ಯಾನೇಜ್​ಮೆಂಟ್​​ನ​​​​​​​ ಮೂವರು ಆಯೋಜಕರು ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಗುರುವಾರ ಕೆಲ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಸರ್ಕಾರದ ಈ ನಡೆಗೆ ವಿರೋಧ ಕೂಡ ವ್ಯಕ್ತವಾಗುತ್ತಿದೆ.

ಬೆಂಗಳೂರು ಕಾಲ್ತುಳಿತ: ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ
ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ
ಕಿರಣ ಹೆಚ್​. ವಿ.
| Edited By: |

Updated on:Jun 06, 2025 | 9:46 AM

Share

ಬೆಂಗಳೂರು, ಜೂನ್​ 06: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್​ಸಿಬಿ (RCB) ಅಭಿಮಾನಿಗಳ ಸಾವು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್​ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ದುರಂತಕ್ಕೆ ಸಂಬಂಧಿಸಿದಂತೆ ಇದೀಗ​​​ ಪೊಲೀಸರು ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ (Arrested).

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮುಂಬೈಗೆ ತೆರಳುತ್ತಿದ್ದ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ, ಡಿಎನ್​ಎ ಮ್ಯಾನೇಜ್​ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್​ ಬಂಧಿತರು. ಸದ್ಯ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ಮಾಡಿದ್ದಾರೆ.

ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಬಂಧನಕ್ಕೆ ಪ್ರಮುಖ ಕಾರಣಗಳು ಹೀಗಿವೆ.

  • ಬೆಂಗಳೂರಿನ ವಿಧಾನ ಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ವಿಕ್ಟರಿ ಪರೇಡ್ ಅಂತ ಪೊಲೀಸರು ಅನುಮತಿ ನಿರಾಕರಿಸಿದ ನಂತರವು ಸೊಶೀಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿರುವುದು.
  • ಸ್ಟೇಡಿಯಂನಲ್ಲಿ ಸೆಲೆಬ್ರೇಷನ್​ಗೆ ಉಚಿತ ಟಿಕೆಟ್ ಅಂತ ಘೋಷಿಸಿರುವುದು.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ಕೇಸ್: ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು

ಇದನ್ನೂ ಓದಿ
Image
ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು
Image
ಬೆಂಗಳೂರಿಗೆ ನೂತನ ಪೊಲೀಸ್​ ಕಮಿಷನರ್​ ಆಗಿ ಸೀಮಂತ್​ ಕುಮಾರ್ ಸಿಂಗ್ ನೇಮಕ
Image
ಬೆಂಗಳೂರು ಕಾಲ್ತುಳಿತ ಕೇಸ್ ಸಿಐಡಿಗೆ, ಬೆಂಗಳೂರು ಕಮಿಷನರ್ ಅಮಾನತು..!
Image
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
  • ಗೇಟ್ 9 ಮತ್ತು 10ರ ಬಳಿ ಮಧ್ಯಾಹ್ನ 1 ಗಂಟೆಗೆ ಟಿಕೆಟ್ ಸಿಗತ್ತೆ ಎಂದಿದ್ದು, 1 ಗಂಟೆ ಆದರೂ ಟಿಕೆಟ್ ವಿತರಣೆ ಆಗದಿರುವುದು. ಬಳಿಕ ಮಧ್ಯಾಹ್ನ 3 ಗಂಟೆಗೆ ಸ್ಟೇಡಿಯಂಗೆ ಅಭಿಮಾನಿಗಳ ಪ್ರವೇಶ ಅಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.
  • ಲಕ್ಷಾಂತರ ಜನ ಸೇರಲಿಕ್ಕೆ ಕಾರಣವಾಗಿದ್ದೇ ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿದ್ದ ಪೋಸ್ಟ್.
  • ನಿಖಿಲ್ ಸೂಚನೆಯಂತೆ ಡಿಎನ್​ಎ ಮ್ಯಾನೇಜ್‌ಮೆಂಟ್ ಕಂಪನಿ ವರ್ತಿಸಿದೆ.
  • 22 ಗೇಟ್​ಗಳ ಪೈಕಿ ಏಕಕಾಲಕ್ಕೆ ಕೇವಲ 19, 20 ಮತ್ತು 22ನೇ ಮೂರು ಗೇಟ್ ಮಾತ್ರ ಒಪನ್ ಮಾಡಿಸಿರುವುದು.

ಅಧಿಕಾರಿಗಳ ಮನೆ ಮೇಲೆ ದಾಳಿ: ನಾಪತ್ತೆ 

ಇನ್ನು ನಿನ್ನೆ ರಾತ್ರಿ ಬೆಂಗಳೂರಲ್ಲಿ ಕೆಎಸ್​ಸಿಎ ಕಾರ್ಯದರ್ಶಿ ಶಂಕರ್​ ಮನೆ ಮೇಲೆ ದಾಳಿ ಮಾಡಿದ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಎಸ್​ಸಿಎ ಖಜಾಂಚಿ ಜಯರಾಮ್​ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಕೆಎಸ್​ಸಿಎ ಕಾರ್ಯದರ್ಶಿ ಮತ್ತು ಖಜಾಂಚಿ ಇಬ್ಬರೂ ನಾಪತ್ತೆ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:20 am, Fri, 6 June 25

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್