AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Stampede: ಸುಮೋಟೋ ಕೇಸ್​ ​ದಾಖಲಿಸಿಕೊಂಡ ಮಾನವ ಹಕ್ಕುಗಳ ಆಯೋಗ

Bengaluru RCB Victory Celebrations Stampede: ಆರ್​ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ಮಾನವ ಹಕ್ಕುಗಳ ಆಯೋಗ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ.

Bengaluru Stampede: ಸುಮೋಟೋ ಕೇಸ್​ ​ದಾಖಲಿಸಿಕೊಂಡ ಮಾನವ ಹಕ್ಕುಗಳ ಆಯೋಗ
ಮಾನವ ಹಕ್ಕುಗಳ ಆಯೋಗ, ಕಾಲ್ತುಳಿತ
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ|

Updated on: Jun 06, 2025 | 5:48 PM

Share

ಬೆಂಗಳೂರು, ಜೂನ್​ 06: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಹೊರಗಡೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ (RCB) ಅಭಿಮಾನಿಗಳು ಮೃತಪಟ್ಟಿದ್ದರು. ಶುಕ್ರವಾರ (ಜೂ.06) ಎಂ.ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮಾನವ ಹಕ್ಕುಗಳ ಆಯೋಗದ (Human Rights) ಅಧ್ಯಕ್ಷ ಶ್ಯಾಂಭಟ್, ಸದಸ್ಯ ಸುರೇಶ್, ಡಿವೈಎಸ್​ಪಿಗಳಾದ ಸುಧೀರ್ ಹೆಗ್ಡೆ, ಮೋಹನ್ ನೇತೃತ್ವದ ನಿಯೋಗ ಭೇಟಿ ನೀಡಿತು.

ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಂ ಭಟ್ ಕಾಲ್ತುಳಿತದಿಂದ 11 ಜನ ಮೃತಪಟ್ಟಿದ್ದು, 70 ಜನ ಗಾಯಗೊಂಡಿದ್ದಾರೆ. ಬೌರಿಂಗ್ ಮತ್ತು ವೈದೇಹಿಯಲ್ಲಿ ತಲಾ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆ್ಯಂಬುಲೆನ್ಸ್ ಇರಲಿಲ್ಲ, ಸರಿಯಾದ ಸಮಯಕ್ಕೆ ಗೇಟ್ ತೆಗೆದಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಮಾನವ ಹಕ್ಕುಗಳ ಆಯೋಗದಿಂದ 2 ಕೇಸ್ ದಾಖಲಿಸಿಕೊಂಡಿದ್ದೇವೆ. ಬೆಂಗಳೂರು ಪೊಲೀಸ್ ಕಮಿಷನರ್​, ಆರೋಗ್ಯ ಇಲಾಖೆ ಕಾರ್ಯದರ್ಶಿ ಮತ್ತು ಕ್ರೀಡಾಂಗಣದವರ ಮೇಲೆ ಸುಮೋಟೋ ಕೇಸ್ ದಾಖಲು ಮಾಡಿದ್ದೇವೆ ಎಂದು ತಿಳಿಸಿದರು.

ಮೃತರ ಕುಟುಂಬಕ್ಕೆ ಸರ್ಕಾರಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಸರ್ಕಾರ ಹೇಳಿದೆ. ಹೆಚ್ಚಿನ ಪರಿಹಾರ ಏನಾದರೂ ಬೇಕಾಗಿದ್ದರೆ ನಾವು ಸರ್ಕಾರಕ್ಕೆ ತಿಳಿಸುತ್ತೇವೆ. ನ್ಯಾಯಾಲಯ ಸೂಚನೆ ಕೊಟ್ಟರೆ ಆಯೋಗದಿಂದ ತನಿಖೆ ಮಾಡಿಸುತ್ತೇವೆ ಎಂದರು.

ಇದನ್ನೂ ಓದಿ
Image
Bengaluru Stampede: KSCA ಅಧಿಕಾರಿಗಳಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
Image
Stamped: RCB ವಿರುದ್ಧ ಕಬ್ಬನ್​ ಪಾರ್ಕ್ ಠಾಣೆಯಲ್ಲಿ​ ಮತ್ತೆರಡು ಕೇಸ್​
Image
ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಕರ್ನಾಟಕ ಪೊಲೀಸರು ದಾಖಲಿಸಿದ FIR!
Image
RCB ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ

ಇದನ್ನೂ ಓದಿ: RCB ಮಾರ್ಕೆಟಿಂಗ್ ಮುಖ್ಯಸ್ಥ ಬಂಧನ: ಕೋರ್ಟ್​ ಮೆಟ್ಟಿಲೇರಿದ ಪತ್ನಿ, ಡಿಕೆಶಿ ವಿರುದ್ಧ ಗಂಭೀರ ಆರೋಪ

ಹೈಕೋರ್ಟ್​ ಗೆ ಕೆಎಸ್​​​​ಸಿಎ ರಿಟ್ ಅರ್ಜಿ

ಇನ್ನೊಂದೆಡೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಸಹ ಹೈಕೋರ್ಟ್​ ಗೆ ರಿಟ್ ಅರ್ಜಿ ಸಲ್ಲಿಸಿದ್ದು,ಆರ್​ಸಿಬಿ (RCB) ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ರಿಟ್​ ಅರ್ಜಿಯಲ್ಲಿ ಸ್ಫೋಟಕ ಆರೋಪ ಮಾಡಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ಎಫ್​ಐಆರ್ ದಾಖಲಿಸಲಾಗಿದೆ ಎಂದು ರಿಟ್ ಅರ್ಜಿಯಲ್ಲಿ ಕೆಎಸ್​​ಸಿಎ ಉಲ್ಲೇಖಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ