AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Stamped: RCBಗೆ ಮತ್ತಷ್ಟು ಸಂಕಷ್ಟು, ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ಮತ್ತೆರಡು ಕೇಸ್ ದಾಖಲು

Bengaluru RCB Victory Celebrations Stampede: ಆರ್​ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದಾರೆ. ಈ ಕಾಲ್ತುಳಿತದಲ್ಲಿ ಗಾಯಗೊಂಡ ಓರ್ವ ವ್ಯಕ್ತಿ ಆರ್​ಸಿಬಿ ಫ್ರಾಂಚೈಸಿ ವಿರುದ್ಧ ದೂರು ನೀಡಿದ್ದಾರೆ. ಈ ಮೂಲಕ ಆರ್​ಸಿಬಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

Bengaluru Stamped: RCBಗೆ ಮತ್ತಷ್ಟು ಸಂಕಷ್ಟು, ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ಮತ್ತೆರಡು ಕೇಸ್ ದಾಖಲು
ಆರ್​ಸಿಬಿ, ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jun 06, 2025 | 4:04 PM

Share

ಬೆಂಗಳೂರು, ಜೂನ್​ 06: ಬೆಂಗಳೂರಿನ (Bengaluru) ಎಂ. ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಹೊರಗೆ ನಡೆದ ಕಾಲ್ತುತಿಳಿತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಂಭ್ರಮಾಚರಣೆಗೆ ಸೂತಕ ಅಂಟಿಕೊಂಡಿದೆ. ಈ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್​ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೆ ಎರಡು ಪ್ರಕರಣ ದಾಖಲಾಗಿವೆ. ಕಾಲ್ತುಳಿತದಲ್ಲಿ ಗಾಯಗೊಂಡ ರೋಲನ್ ಗೊಮೆಸ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಆರ್​ಸಿಬಿ ಫ್ರಾಂಚೈಸಿ, ಕೆಎಸ್​ಸಿಎ ಮತ್ತು ಡಿಎನ್​ಎ ಕಂಪನಿ ವಿರುದ್ಧ ಬಿಎನ್​ಎಸ್​​ ಕಾಯ್ದೆ 2023 (U/s-125(a)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾಲತಾಣದಲ್ಲಿ ಆರ್​ಸಿಬಿ ಪೋಸ್ಟ್​ ನೋಡಿ ನನ್ನ ಗೆಳೆಯರ ಜೊತೆ ಸಂಭ್ರಮಾಚರಣೆ ವೀಕ್ಷಿಸಲು ಬಂದಿದ್ದೆ. ತೆರದ ಬಸ್ ಮೂಲಕ ಮೆರಬಣಿಗೆ ಇದೆ ಎಂದು ತಿಳಿಸಲಾಗಿತ್ತು. ಗೇಟ್ ನಂಬರ್ 17ರಲ್ಲಿ ನಾನು ಹೋಗುವಾಗ ನೂಕುನುಗ್ಗಲು‌ ಆಯ್ತು. ಈ ವೇಳೆ ನನ್ನ ತೋಳಿಗೆ ಪೆಟ್ಟಾಗಿದೆ ಎಂದು ಗಾಯಾಳು ರೋಲನ್ ಗೊಮೆಸ್ ದೂರು ನೀಡಿದ್ದಾರೆ.

ಪ್ರಕರಣ ಸಂಬಂಧ ನಾಲ್ವರ ಬಂಧನ

ಕಬ್ಬನ್ ಪಾರ್ಕ್ ಇನ್ಸ್​ಪೆಕ್ಟರ್ ಗಿರೀಶ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಆರ್​ಸಿಬಿ ವಿರುದ್ಧ ಈಗಾಗಲೆ ಒಂದು ಎಫ್​ಐಆರ್​ ದಾಖಲಾಗಿತ್ತು. ಈಗ, ಗಾಯಾಳು ನೀಡಿದ ದೂರಿನ ಆಧಾರದ ಮೇಲೆ ಮತ್ತೇರಡು ಎಫ್​ಐಆರ್​ ದಾಖಲಾಗಿವೆ.

ಇದನ್ನೂ ಓದಿ
Image
ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಕರ್ನಾಟಕ ಪೊಲೀಸರು ದಾಖಲಿಸಿದ FIR!
Image
RCB ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ
Image
ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು
Image
ಬೆಂಗಳೂರಿಗೆ ನೂತನ ಪೊಲೀಸ್​ ಕಮಿಷನರ್​ ಆಗಿ ಸೀಮಂತ್​ ಕುಮಾರ್ ಸಿಂಗ್ ನೇಮಕ

ಇದನ್ನೂ ಓದಿ: ಎಚ್​ಡಿಕೆ ಗಂಭೀರ ಆರೋಪ ಬೆನ್ನಲ್ಲೇ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ಗೋವಿಂದಾ!

ಕಬ್ಬನ್ ಪಾರ್ಕ್ ಇನ್ಸ್​ಪೆಕ್ಟರ್ ಗಿರೀಶ್ ದೂರು ನೀಡಿದ್ದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 105, 115, 118ರಡಿ ಮೊಕದ್ದಮೆ ದಾಖಲಾಗಿದೆ. ಆರ್​ಸಿಬಿ ಮ್ಯಾನೇಜ್ಮೆಂಟ್ A-1 ಆಗಿದ್ದರೆ, ಕಾರ್ಯಕ್ರಮ ಆಯೋಜನೆ ಮಾಡಿದ್ದ DNA ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ A-2 ಆಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್​ನ A3 ಯನ್ನಾಗಿ ಮಾಡಿ ಎಫ್​ಐಆರ್ ದಾಖಲಿಸಲಾಗಿದೆ. ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ಸೇರಿ ನಾಲ್ವರನ್ನು ಬಂಧಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Fri, 6 June 25

ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ