AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪಿಂಕ್​​ ಲೈನ್​​ ಆರಂಭಕ್ಕೆ ಭರದ ಸಿದ್ಧತೆ: ನಾಳೆಯಿಂದ ಪರಿಶೀಲನಾ ಕಾರ್ಯ ಶುರು

ಕಾಳೇನ ಅಗ್ರಹಾರದಿಂದ ತಾವರೆಕೆರೆ ವರೆಗಿನ ನಮ್ಮ ಮೆಟ್ರೋ ಪಿಂಕ್ ಲೈನ್​​ ಮಾರ್ಗವನ್ನು ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲು ತಯಾರಿ ನಡೆದಿದೆ. ಇದಕ್ಕಾಗಿ ನಾಳೆಯಿಂದ ಏಪ್ರಿಲ್ 5ರವರೆಗೆ RDSO ಅಧಿಕಾರಿಗಳಿಂದ ರೈಲು ವೇಗ, ಲೋಡ್ ಟೆಸ್ಟ್ ಸೇರಿ ವ್ಯಾಪಕ ಪರಿಶೀಲನೆ ನಡೆಯಲಿದೆ. 6 ಡ್ರೈವರ್ಲೆಸ್ ರೈಲುಗಳೊಂದಿಗೆ ಆರಂಭಿಕ ಹಂತದಲ್ಲಿ ಕಾರ್ಯಾಚರಣೆ ಶುರುವಾಗಲಿದ್ದು, ಇದು ಬನ್ನೇರುಘಟ್ಟ ರಸ್ತೆಯ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಹಾಯಕವಾಗಿದೆ.

ನಮ್ಮ ಮೆಟ್ರೋ ಪಿಂಕ್​​ ಲೈನ್​​ ಆರಂಭಕ್ಕೆ ಭರದ ಸಿದ್ಧತೆ: ನಾಳೆಯಿಂದ ಪರಿಶೀಲನಾ ಕಾರ್ಯ ಶುರು
ಸಾಂದರ್ಭಿಕ ಚಿತ್ರImage Credit source: AI Image
ಕಿರಣ್​ ಸೂರ್ಯ
| Edited By: |

Updated on: Mar 20, 2026 | 6:39 PM

Share

ಬೆಂಗಳೂರು, ಮಾರ್ಚ್​​ 20: ಕಾಳೇನ ಅಗ್ರಹಾರ ಟು ತಾವರೆಕೆರೆ ನಡುವಿನ ಪಿಂಕ್ ಲೈನ್ ಎತ್ತರಿಸಿದ ಮೆಟ್ರೋ ಮಾರ್ಗವನ್ನು ಈ ವರ್ಷ ಮೇ ತಿಂಗಳಿನಲ್ಲಿ ಓಪನ್ ಮಾಡಲು ಬಿಎಂಆರ್ಸಿಎಲ್ ಭರದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ನಾಳೆಯಿಂದ ಏಪ್ರಿಲ್ 5ರ ವರೆಗೆ 16 ದಿನಗಳ ಕಾಲ RDSO ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಪರಿಶೀಲನಾ ಕಾರ್ಯಗಳು ನಡೆಯಲಿವೆ. ರೈಲಿನ ಸ್ಪೀಡ್ ಮತ್ತು ಲೋಡ್ ಟೆಸ್ಟ್ ಜೊತೆಗೆ ಟ್ರ್ಯಾಕ್ ಟೆಸ್ಟ್, ಸ್ಟೇಷನ್​​ಗಳ ತಪಾಸಣೆ, ಪವರ್ ಚೆಕ್ಕಿಂಗ್ ಸೇರಿ ಹಲವು ಬಗೆಯ ಪರೀಕ್ಷೆಗಳನ್ನು ಅಧಿಕಾರಿಗಳು ನಡೆಸಲಿದ್ದಾರೆ.

ಇನ್ನು ಈ ಪಿಂಕ್​​ ಲೈನ್​​ಗೆ ಅದಾಗಲೇ 4 ರೈಲುಗಳು ಆಗಮಿಸಿವೆ. ಇವುಗಳ ಜೊತಗೆ ಈ ತಿಂಗಳ ಕೊನೆಯಲ್ಲಿ ಒಂದು ರೈಲು ಮತ್ತು ಏಪ್ರಿಲ್ ಮೊದಲ ವಾರದಲ್ಲಿ ಆರನೇ ರೈಲು ಸೇರ್ಪಡೆಯಾಗಲಿವೆ. ಆ ಮೂಲಕ ‌ಮೊದಲ ಹಂತದಲ್ಲಿ ಪಿಂಕ್ ಲೈನ್​​ನಲ್ಲಿ 6 ಡ್ರೈವರ್ಲೆಸ್ ರೈಲುಗಳು ಸಂಚರಿಸಲಿದ್ದು, ಕಾಳೇನ ಅಗ್ರಹಾರ ಟು ನಾಗವಾರ ನಡುವೆ ಇವು ಸಂಪರ್ಕ ಕಲ್ಪಿಸಲಿವೆ. ಪಿಂಕ್ ಲೈನ್ ಒಟ್ಟು 21.25 ಕಿ.ಮೀ. ವಿಸ್ತೀರ್ಣ ಹೊಂದಿದ್ದು 18 ಮೆಟ್ರೋ ನಿಲ್ದಾಣಗಳನ್ನು ಒಳಗೊಂಡಿದೆ. ಆ ಪೈಕಿ 12 ಅಂಡರ್ ಗ್ರೌಂಡ್ ಮತ್ತು 6 ಎಲಿವೇಟೆಡ್ ಸ್ಟೇಷನ್​​ಗಳಾಗಿವೆ. ಈ ವರ್ಷ ಮೇನಲ್ಲಿ ಕಾಳೇನ ಅಗ್ರಹಾರ ಟು ತಾವರೆಕೆರೆ ವರೆಗಿನ 6 ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಓಪನ್ ಮಾಡಲು ಬಿಎಂಆರ್ಸಿಎಲ್ ಸಿದ್ದತೆ ಮಾಡಿಕೊಂಡಿದ್ದು, ಉಳಿದ 13.76.ಕಿ.ಮೀ ವಿಸ್ತೀರ್ಣದ 12 ಅಂಡರ್ ಗ್ರೌಂಡ್ ಸ್ಟೇಷನ್​​ ಮಾರ್ಗದ ಕಾಮಗಾರಿ ನಡೆಯುತ್ತಿವೆ. ಇವು ಪೂರ್ಣಗೊಂಡ ಬಳಿಕ ಈ ವರ್ಷದ ಅಂತ್ಯಕ್ಕೆ ಪೂರ್ತಿ ಮಾರ್ಗ ಓಪನ್​​ಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಪಿಂಕ್ ಲೈನ್ ಮೆಟ್ರೋಗೆ ಬಂತು ನಾಲ್ಕನೇ ರೈಲು, ಮೇನಲ್ಲಿ ಸಂಚಾರ ನಿರೀಕ್ಷೆ

ಪಿಂಕ್​​ ಲೈನ್​​ಗಾಗಿ ಬಿಇಎಂಎಲ್​​ನಲ್ಲಿ ಒಟ್ಟು 23 ರೈಲುಗಳಿಗೆ ಆರ್ಡರ್​ ನೀಡಲಾಗಿದ್ದು, ಈ ಮಾರ್ಗದ ಆರಂಭದಿಂದಾಗಿ ಪ್ರತಿನಿತ್ಯ ವಿಪರೀತ ವಾಹನ ದಟ್ಟಣೆಯಿಂದ ಕೂಡಿರುವ ಬನ್ನೇರುಘಟ್ಟ ರಸ್ತೆಯ ಸಂಚಾರ ಸುಧಾರಿಸುವ ನಿರೀಕ್ಷೆಯೂ ಮೂಡಿದೆ. ಕೇಂದ್ರ ರೈಲ್ವೆ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಕೊನೆಯದಾಗಿ ಕಮಿಷನರ್​​ ಆಫ್​​ ಮೆಟ್ರೋ ರೈಲ್ವೇ ಸೇಫ್ಟಿಯಿಂದಲೂ ಅನುಮತಿ ಸಿಗುತ್ತಿದ್ದಂತೆ ಪಿಂಕ್​​ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲುಗಳ ವಾಣಿಜ್ಯ ಸಂಚಾರ ಶುರುವಾಗಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್