AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 51 ವರ್ಷಗಳ ನಂತರ ದಾಖಲೆಯ ಮಳೆಯಾಗಿದೆ: ಆತಂಕ ವ್ಯಕ್ತಪಡಿಸಿದ ಬಿಬಿಎಂಪಿ ಮುಖ್ಯ ಆಯುಕ್ತ

ಬೆಂಗಳೂರು ಮಹಾನಗರದಲ್ಲಿ ಆಗಸ್ಟ್ 30, 31 ರಲ್ಲಿ ತುಂಬಾ ಮಳೆ ಬಂದಿದ್ದು, ನಿನ್ನೆ ತುಂಬಾ ಮಳೆ ಬಂದಿದ್ದು ಮಹಾದೇವಪುರ ಭಾಗದಲ್ಲಿ ತುಂಬಾ ಹಾನಿಯಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ 51 ವರ್ಷಗಳ ನಂತರ ದಾಖಲೆಯ ಮಳೆಯಾಗಿದೆ: ಆತಂಕ ವ್ಯಕ್ತಪಡಿಸಿದ ಬಿಬಿಎಂಪಿ ಮುಖ್ಯ ಆಯುಕ್ತ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 05, 2022 | 5:18 PM

ಬೆಂಗಳೂರು: ಬೆಂಗಳೂರು (Bengaluru) ಮಹಾನಗರದಲ್ಲಿ ಆಗಸ್ಟ್ 30, 31 ರಲ್ಲಿ ತುಂಬಾ ಮಳೆ ಬಂದಿದ್ದು, ನಿನ್ನೆ ಸುರಿದ ಭಾರೀ ಮಳೆಗೆ ಮಹಾದೇವಪುರ ಭಾಗದಲ್ಲಿ ತುಂಬಾ ಹಾನಿಯಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)  ಮುಖ್ಯ ಆಯುಕ್ತ (BBMP Commissioner)  ತುಷಾರ್ ಗಿರಿನಾಥ್ ಹೇಳಿದ್ದಾರೆ. ನಗರದಲ್ಲಿ ಮಳೆಯಿಂದ ಅವಾಂತರ ಸೃಷ್ಟಿ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿದ ಅವರು 1971 ರಿಂದ ಇದೂವರೆಗೂ ನಿನ್ನೆ ಸುರಿದ ಮಳೆಯೇ ದಾಖಲೆ ಸೃಷ್ಠಿಯಿಸಿದೆ. ಮಳೆಗಾಲದಲ್ಲಿ ಸಾಮಾನ್ಯವಾಗಿ 313 ಎಂಎಂ ಮಳೆ ಬರುತ್ತೆ, ಆದರೆ ಈ ಬಾರಿ 709 ಎಂಎಂ ಮಳೆ ಬಂದಿದೆ ಎಂದು ತಿಳಿಸಿದರು.

51 ವರ್ಷದಲ್ಲಿ ದಾಖಲೆಯ ಮಳೆಯಾಗಿದೆ. ಮಹಾದೇವಪುರದಲ್ಲಿ 28 ಕಡೆ ಮಳೆ ನೀರು ನುಗ್ಗಿದೆ. ಬೊಮ್ಮನಹಳ್ಳಿಯಲ್ಲಿ 9 ಕಡೆ ಹಾನಿಯಾಗಿದೆ. ಬೆಳ್ಳಂದೂರು ಕೆರೆ ತುಂಬಿದೆ, ವಿಭೂತಿಪುರ ಕೆರೆ ತುಂಬಿದೆ, ಬೇಗೂರು ಕೆರೆ ತುಂಬುತ್ತಿದೆ. ಔಟರ್ ರಿಂಗ್ ರೋಡ್ ನಲ್ಲಿ ಈಗಲೂ ನೀರು ಇದೆ. ಸಾವಳಕೆರೆ ನೀರು ಡೈವರ್ಟ್ ಮಾಡಿದರೂ ಬರ್ತಾಯಿದೆ ಎಂದರು.

 75 ವರ್ಷಗಳಲ್ಲಿ ಈ ರೀತಿ ನೆರೆ ಬಂದಿದೆ – ಸಿಎಂ ಬೊಮ್ಮಾಯಿ

ಮಂಡ್ಯ: ನಿನ್ನೆ ರಾತ್ರಿ (ಆ 4) ನದಿ ಪ್ರವಾಹದಿಂದ ಮಳವಳ್ಳಿ ತಾಲೂಕಿನ ಟಿ.ಕೆ.ಹಳ್ಳಿ ಗ್ರಾಮದಲ್ಲಿ ಅಪಾರ ಪ್ರಮಾಣದ ಹಾನಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಿಎಂ ಬೊಮ್ಮಾಯಿ ಟಿ.ಕೆ.ಹಳ್ಳಿ ಜಲಮಂಡಳಿ ಘಟಕ ಪರಿಶೀಲಿಸಿ ಮಾತನಾಡಿದ ಅವರು  ನಿನ್ನೆ ರಾತ್ರಿ ಮಳೆಯಿಂದ ಟಿ.ಕೆ.ಹಳ್ಳಿ ವ್ಯಾಪ್ತಿಯಲ್ಲಿ ಹಾನಿಯಾಗಿದೆ. ಟಿ.ಕೆ.ಹಳ್ಳಿಯ ನೀರಿನ ಘಟಕಕ್ಕೆ ಮಳೆಯ ನೀರು ನುಗ್ಗಿದೆ ಎಂದು ಹೇಳಿದರು.

ಬೆಂಗಳೂರಿಗೆ ನೀರು ಸರಬರಾಜು ಮಾಡುವ ಕೆಲಸ ಆಗುತ್ತಿದೆ. ಬೆಂಗಳೂರಿನ ಜನರು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಜಲಮಂಡಳಿ ಘಟಕದಿಂದ ನೀರು ಹೊರ ಹಾಕುವ ಕೆಲಸ ಆಗುತ್ತಿದೆ. ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳಿಗೆ ನಾನು ಸೂಚಿಸಿದ್ದೇನೆ. ಮುಂದೆ ಈ ರೀತಿ ಆಗದಂತೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದರು.

ನಾಳೆ, ನಾಡಿದ್ದು ಮಳೆಯಾದರೆ ಯಾವ ಕ್ರಮ ಆಗಬೇಕೆಂದು ಸರ್ವೆ ಮಾಡಲಾಗುತ್ತದೆ. 75 ವರ್ಷದಿಂದ ಬರದಿರುವ ನೀರು ಇಲ್ಲಿಗೆ ಬಂದಿದೆ. ಇದುವರೆಗೂ ಬರದಂತಹ ಪ್ರವಾಹ ಈ ಬಾರಿ ಬಂದಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Mon, 5 September 22

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ